ಕೃಷಿ ಉತ್ಪಾದನಾ ವೆಚ್ಚ ಕಡಿತಗೊಳಿಸಿ: ಡಾ| ಮಂಜುನಾಥ್
ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದು ರೈತರಿಗೆ ಸಹಾಯಕ
Team Udayavani, Jun 12, 2019, 3:59 PM IST
ಶಿವಮೊಗ್ಗ: ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಡಾ| ಮಂಜುನಾಥ್ ನಾಯ್ಕ ಬಿಡುಗಡೆಗೊಳಿಸಿದರು.
ಶಿವಮೊಗ್ಗ: ಸ್ಥಳೀಯ, ನೈಸರ್ಗಿಕವಾಗಿ ದೊರಕುವ ವಸ್ತುಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದರಿಂದ ರೈತರಿಗೆ ಉತ್ಪಾದನಾ ವೆಚ್ಚವನ್ನು ಕಡಿತಗೊಳಿಸಿ, ಹವಾಮಾನ ವೈಪರೀತ್ಯದಿಂದ ಎದುರಾಗುವ ಅಪಾಯವನ್ನು ತಗ್ಗಿಸಬಹದಾಗಿದೆ ಹಾಗೂ ಮಣ್ಣಿನಲ್ಲಿನ ಸೂಕ್ಷ್ಮಜೀವಿಗಳ ಸಂಖ್ಯೆಯನ್ನು ವೃದ್ಧಿಸಬಹುದಾಗಿದೆ ಎಂದು ಕುಲಪತಿ ಡಾ| ಮಂಜುನಾಥ್ ಕೆ. ನಾಯ್ಕ ಅಭಿಪ್ರಾಯಪಟ್ಟರು.
ಕೃಷಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ ದಕ್ಷಿಣ ಅರೆಮಲೆನಾಡು ವಲಯ- 7ರ ಕಾರ್ಯವಾಹಿ ಸಂಶೋಧನಾ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ, ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಯೋಜನಾ ಸಭೆಯ ಮುಖ್ಯಸ್ಥ ಡಾ| ಎಚ್. ಕೆ. ವೀರಣ್ಣ ಅವರು ಈ ಯೋಜನೆಯಡಿ ಐದು ಜಿಲ್ಲೆಗಳ 14 ತಾಲೂಕುಗಳಲ್ಲಿ 37 ಕ್ಲಸ್ಟರ್ಗಳನ್ನು ಆಯ್ಕೆ ಮಾಡಲಾಗಿದ್ದು, 97 ಹಳ್ಳಿಗಳ 2000 ಹೆಕ್ಟೇರ್ ರೈತರ ಹೊಲದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ವಲಯದ ಮುಖ್ಯ ಬೆಳೆಗಳಾದ ಅಡಕೆ, ತೆಂಗು, ಮೆಕ್ಕೆಜೋಳ, ಭತ್ತ, ತಂಬಾಕು, ಆಲೂಗಡ್ಡೆ, ಬಾಳೆ, ಕಾಳುಮೆಣಸು, ಶುಂಠಿ, ಟೊಮ್ಯಾಟೊ, ಮೆಣಸಿನಕಾಯಿ ಮುಂತಾದ ಬೆಳೆಗಳನ್ನು ನೈಸರ್ಗಿಕ ಕೃಷಿ ಪದ್ಧತಿಯಡಿ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ ಎಂದು ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು.
ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯ ವಲಯ-7 ಕ್ಕೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಿಂದ ರೈತ ಪ್ರತಿನಿಧಿಗಳು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಭಾಗವಹಿಸಿದ್ದರು. ಅತಿಥಿಗಳಾದ ಡಾ| ಬಿ. ಆರ್. ಗುರುಮೂರ್ತಿ ಸಂಶೋಧನಾ ನಿರ್ದೇಶಕರು ಮತ್ತು ಡಾ| ಎಚ್.ಎಂ. ಚಿದಾನಂದಪ್ಪ ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಇವರು ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಬಿಡುಗಡೆ ಮಾಡಿದರು. ಯೋಜನೆ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಪೂರಕವಾದ ವಿಷಯಗಳ ಕುರಿತು ಕೃಷಿ ಅಧಿಕಾರಿಗಳು, ರೈತ ಪ್ರತಿನಿಧಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಚರ್ಚೆ ನಡೆಸಿದರು. ಡಾ| ಬಿ. ಸಿ. ಧನಂಜಯ (ಮಣ್ಣುವಿಜ್ಞಾನಿ) ವಂದಿಸಿದರು. ಡಾ|ಶರಣಬಸಪ್ಪ ಅವರು (ಕೀಟಶಾಸ್ತ್ರಜ್ಞರು) ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
MUST WATCH
ಹೊಸ ಸೇರ್ಪಡೆ
SSLC Result: ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ
ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿ ರಿಯಲ್ ಲೈಫ್ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ