ಆ್ಯಸಿಡ್ ಅಟ್ಯಾಕ್ ಕೇಸ್: ಅಪರಾಧಿಯನ್ನು ಕುಣಿಕೆಯಿಂದ ತಪ್ಪಿಸಿದ ಬಾಂಬೆ ಹೈಕೋರ್ಟ್
Team Udayavani, Jun 12, 2019, 4:00 PM IST
ಮುಂಬಯಿ : 2013ರ ಪ್ರೀತಿ ರತಿ ಆ್ಯಸಿಡ್ ಅಟ್ಯಾಕ್ ಕೇಸ್ನಲ್ಲಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಬಾಂಬೆ ಹೈಕೋರ್ಟ್ ಇಂದು ಬುಧವಾರ ಎತ್ತಿ ಹಿಡಿದಿದೆ.
ಆದರೆ ಆರೋಪಿಗೆ ವಿಶೇಷ ನ್ಯಾಯಾಲಯವು ವಿಧಿಸಿದ್ದ ಮರಣ ದಂಡನೆಯನ್ನು ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ತೀರ್ಪು ನೀಡಿದ್ದು ಆರೋಪಿ ಕುಣಿಕೆಯಿಂದ ಪಾರಾಗಿದ್ದಾನೆ.
ವಿಶೇಷ ನ್ಯಾಯಾಲಯ 2105ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅಪರಾಧಿ ಅಂಕುರ್ ಪನ್ವರ್ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ. ಜಸ್ಟಿಸ್ ಬಿ ಪಿ ಧರ್ಮಾಧಿಕಾರಿ ಮತ್ತು ಪಿ ಡಿ ನಾಯಕ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಅಪರಾಧಿಯ ಮೇಲ್ಮನವಿಯನ್ನು ಆಂಶಿಕವಾಗಿ ಪುರಸ್ಕರಿಸಿ, ಮರಣ ದಂಡನೆಯ ಶಿಕ್ಷೆಯನ್ನು ಜೀವಾವಧಿ ಜೈಲು ಶಿಕ್ಷೆಯನ್ನಾಗಿ ಪರಿವರ್ತಿಸಿತು.
ಆ್ಯಸಿಡ್ ಅಟ್ಯಾಕ್ ಕೇಸಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅಪರಾಧಿಗೆ ನ್ಯಾಯಾಲಯ ಮರಣ ದಂಡನೆ ನೀಡಿದ್ದ ಪ್ರಕರಣ ಇದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ