ಸ್ವಚ್ಛ ಮೇವ ಜಯತೆಗೆ ಭರಪೂರ ಬೆಂಬಲ

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ •ಅತಿಯಾಸೆಗೆ ಕಡಿವಾಣ ಹಾಕಿದರೆ ಉತ್ತಮ ಪರಿಸರ ನಿರ್ಮಾಣ

Team Udayavani, Jun 12, 2019, 4:17 PM IST

33

ಮುದ್ದೇಬಿಹಾಳ: ಕೋಳೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಸ್ಮರಣೆಗಾಗಿ ಸಸಿ ನೆಡಲಾಯಿತು.

ಮುದ್ದೇಬಿಹಾಳ: ಮನುಷ್ಯ ಜಗತ್ತಿನಲ್ಲಿ ಎಲ್ಲವನ್ನೂ ಸಂಶೋಧನೆ ಮಾಡಿ ಕೃತಕವಾಗಿ ಸೃಷ್ಟಿಸಬಹುದು. ಆದರೆ ನೀರು, ಗಾಳಿ, ಮಣ್ಣನ್ನು ಮಾತ್ರ ಸೃಷ್ಟಿಸುವುದು ಅಸಾಧ್ಯ ಎನ್ನುವುದನ್ನು ಅರಿತು ಪರಿಸರ ಕಾಪಾಡುವ, ಸ್ವಚ್ಛವಾಗಿಟ್ಟುಕೊಳ್ಳುವ ಹೊಣೆಯನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕು ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದರು.

ಮುದ್ದೇಬಿಹಾಳ ತಾಲೂಕಿನ ಕೋಳೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜಯಪುರ ಜಿಪಂ, ಮುದ್ದೇಬಿಹಾಳ ತಾಪಂ, ಕೋಳೂರು ಗ್ರಾಪಂ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆ ಅಡಿ ಮಂಗಳವಾರ ಏರ್ಪಡಿಸಿದ್ದ ಸ್ವಚ್ಛ ಮೇವ ಜಯತೆ ಆಂದೋಲನ ಹಾಗೂ ಜಲಾಮೃತ ಕುರಿತು ತಾಲೂಕು ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಭೂಮಿಯನ್ನು ಭಗವಂತ ಅತ್ಯಂತ ಸುಂದರವಾಗಿ ಸೃಷ್ಟಿಸಿದ್ದಾನೆ. ಮನುಷ್ಯ, ಪ್ರಾಣಿಗಳು, ಪರಿಸರ ಈ ಸೌಂದರ್ಯ ಇಮ್ಮಡಿಗೊಳಿಸಿವೆ. ಆದರೆ ಅತಿಯಾಸೆಗೆ ಬಿದ್ದು ಪರಿಸರ ನಾಶ ಮಾಡುತ್ತಿರುವ ಮನುಷ್ಯ ತನ್ನ ಅತಿಯಾಸೆಗೆ ಕಡಿವಾಣ ಹಾಕಬೇಕು. ಮುಂದಿನ ಜನಾಂಗಕ್ಕೆ ನಾವು ಉತ್ತಮವಾದ ಪರಿಸರವನ್ನು ಕಾಣಿಕೆಯಾಗಿ ನೀಡುವತ್ತ ಗಮನ ಹರಿಸಬೇಕು. ನಮ್ಮ ಸುತ್ತಲಿನ, ನಮ್ಮ ಊರಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ನಮ್ಮದೇ ಆಗಿದೆ ಎನ್ನುವುದನ್ನು ಅರಿಯಬೇಕು. ಪ್ರತಿಯೊಂದು ಶಾಲೆಯಲ್ಲಿ ವಿದ್ಯಾರ್ಥಿಗೊಂದರಂತೆ ಸಸಿ ನೆಟ್ಟು ಪೋಷಣೆ ಜವಾಬ್ದಾರಿ ಅವರಿಗೆ ವಹಿಸಿಕೊಡಬೇಕು ಎಂದು ಹೇಳಿದರು.

ಬಿಇಒ ಎಸ್‌.ಡಿ. ಗಾಂಜಿ, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಎಸ್‌.ಎಸ್‌. ಮೇಟಿ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಸುಮಿತ್ರಾ ರಾಠೊಡ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ತಾಪಂ ಸದಸ್ಯ ಪ್ರೇಮಸಿಂಗ್‌ ಚವ್ಹಾಣ, ಬಿಜೆಪಿ ಧುರೀಣ ಮಲಕೇಂದ್ರಗೌಡ ಪಾಟೀಲ, ನಿವೃತ್ತ ಶಿಕ್ಷಕ ಸಿದ್ದನಗೌಡ ಬಿರಾದಾರ, ಪ್ರಮುಖರಾದ ಅಲಬಯ್ಯ ಹಿರೇಮಠ, ಈರಪ್ಪ ಹಳ್ಳೂರ, ರಾಯನಗೌಡ ಬಿರಾದಾರ, ರಾಮನಗೌಡ ಪಾಟೀಲ, ಲಕ್ಷ್ಮಣ ಢವಳಗಿ, ಮಲ್ಲಿಕಾರ್ಜುನ ತಂಗಡಗಿ, ಶರಣಪ್ಪ ಹಳ್ಳೂರ, ಬಸಲಿಂಗಪ್ಪ ಬಿದರಕುಂದಿ ವೇದಿಕೆಯಲ್ಲಿದ್ದರು.

ಗಿರಿಮಲ್ಲಪ್ಪ ಬಿದರಕುಂದಿ, ಚನ್ನಪ್ಪ ಢವಳಗಿ, ನಿಂಗನಗೌಡ ಬಿರಾದಾರ, ರೇವಣೆಪ್ಪ ಹರನಾಳ, ಲಕ್ಷ್ಮಣ ಬಿಜ್ಜೂರ ಸೇರಿದಂತೆ ಪಂಚಾಯತ್‌ ಸದಸ್ಯರು, ಗ್ರಾಮಸ್ಥರು ಇದ್ದರು.

ಶಾಲಾ ಆವರಣದಲ್ಲಿ ಅರಣ್ಯಾಧಿಕಾರಿ ಸಂತೋಷಕುಮಾರ ಅಜೂರ ನೇತೃತ್ವದಲ್ಲಿ ಶಾಸಕರು, ಗಣ್ಯರು ಸಸಿ ನೆಟ್ಟರು. ಸ್ವಚ್ಛ ಮೇವ ಜಯತೆ ಸ್ವಚ್ಛತಾ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ತಾಪಂ ಇಒ ಪ್ರಕಾಶ ದೇಸಾಯಿ ಸ್ವಾಗತಿಸಿದರು. ತಾಪಂ ಎಡಿ ಪಿ.ಎಸ್‌.ನಾಯ್ಕೋಡಿ ನಿರೂಪಿಸಿದರು. ಪಿಡಿಒ ನಿರ್ಮಲಾ ತೋಟದ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.