ಲವ್‍ಸ್ಟೋರಿಗೆ ಮರಳಿದ ಪವನ್ ಒಡೆಯರ್

ಇಶಾನ್‍ಗೆ ಆಶಿಕಾ ಜೋಡಿ

Team Udayavani, Jun 13, 2019, 3:02 AM IST

pavan

“ನಟಸಾರ್ವಭೌಮ’ ಚಿತ್ರದ ನಂತರ ನಿರ್ದೇಶಕ ಪವನ್‌ ಒಡೆಯರ್‌ ಏನು ಮಾಡುತ್ತಿದ್ದಾರೆಂಬ ಕುತೂಹಲ ಅನೇಕರಿಗಿತ್ತು. ಏಕೆಂದರೆ ಯಾವ ಸಿನಿಮಾವನ್ನು ಪವನ್‌ ಅನೌನ್ಸ್‌ ಮಾಡಿರಲಿಲ್ಲ. ಈಗ ಪವನ್‌ ಮತ್ತೆ ಸುದ್ದಿಯಲ್ಲಿದ್ದಾರೆ. ಅದು ಹೊಸ ಸಿನಿಮಾ ಮೂಲಕ. ಇಶಾನ್‌ ನಾಯಕರಾಗಿರುವ ಸಿನಿಮಾವನ್ನು ಪವನ್‌ ನಿರ್ದೇಶಿಸುತ್ತಾರೆಂದು ಸುದ್ದಿ ಇತ್ತಾದರೂ ಅದು ಅಂತಿಮವಾಗಿರಲಿಲ್ಲ. ಈಗ ಬಹುತೇಕ ಎಲ್ಲವೂ ಅಂತಿಮವಾಗಿದ್ದು, ಜುಲೈನಲ್ಲಿ ಚಿತ್ರ ಸೆಟ್ಟೇರಲಿದೆ.

ಈ ಬಾರಿ ಪವನ್‌ ಲವ್‌ಸ್ಟೋರಿಯತ್ತ ಮರಳಿದ್ದಾರೆ. “ಗೂಗ್ಲಿ’ ಚಿತ್ರದಲ್ಲಿ ಅಪ್ಪಟ ಲವ್‌ಸ್ಟೋರಿಯನ್ನು ಕಟ್ಟಿಕೊಟ್ಟಿದ್ದ ಪವನ್‌ ಆ ಚಿತ್ರದ ಮೂಲಕ ಯಶಸ್ಸು ಕೂಡಾ ಕಂಡಿದ್ದರು. ಆ ನಂತರ ಲವ್‌ಸ್ಟೋರಿಯಿಂದ ದೂರವಿದ್ದು, ಬೇರೆ ಬೇರೆ ಜಾನರ್‌ಗಳನ್ನು ಪ್ರಯತ್ನಿಸಿದ ಪವನ್‌ ಈಗ ಮತ್ತೆ ಲವ್‌ಸ್ಟೋರಿಗೆ ಮರಳಿದ್ದಾರೆ. ಈ ಚಿತ್ರದ ಮೂಲಕ ಇಶಾನ್‌ ಲವರ್‌ಬಾಯ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ.

“ಗೂಗ್ಲಿ ನಂತರ ನಾನು ಲವ್‌ಸ್ಟೋರಿ ಮಾಡಿರಲಿಲ್ಲ. ಬೇರೆ ಬೇರೆ ಜಾನರ್‌ಗಳನ್ನು ಪ್ರಯತ್ನಿಸುತ್ತಿದ್ದ ನನಗೆ ಅನೇಕರು, “ನೀವು ಮತ್ತೆ ಲವ್‌ಸ್ಟೋರಿ ಮಾಡಿ, ನಿಮ್ಮ ಲವ್‌ಸ್ಟೋರಿ ತುಂಬಾ ಚೆನ್ನಾಗಿರುತ್ತೆ’ ಎನ್ನುತ್ತಿದ್ದರು. ಹಾಗಾಗಿ, ಈ ಬಾರಿ ಒಂದು ಲವ್‌ಸ್ಟೋರಿ ಮಾಡಲು ಮುಂದಾಗಿದ್ದೇನೆ. ಈಗಾಗಲೇ ಕೆಲಸಗಳು ಜೋರಾಗಿ ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈನಲ್ಲಿ ಚಿತ್ರ ಸೆಟ್ಟೇರಬಹುದು’ ಎನ್ನುವುದು ಪವನ್‌ ಮಾತು.

ಈ ಚಿತ್ರವನ್ನು ಸಿ.ಆರ್‌.ಮನೋಹರ್‌ ನಿರ್ಮಿಸುತ್ತಿದ್ದಾರೆ. ಎಲ್ಲಾ ಓಕೆ, ಇಶಾನ್‌ಗೆ ನಾಯಕಿ ಯಾರು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಉತ್ತರ ಆಶಿಕಾ ರಂಗನಾಥ್‌. ಹೌದು, ಪವನ್‌ ಒಡೆಯರ್‌ ಹೊಸ ಚಿತ್ರದಲ್ಲಿ ಆಶಿಕಾ ರಂಗನಾಥ್‌ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮೂಲಕ ಆಶಿಕಾ ಅಕೌಂಟ್‌ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಚಿತ್ರದ ತಾಂತ್ರಿಕ ವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.