ಶುಚಿತ್ವ ಪಾಲನೆಯಿಂದ ಅತಿಸಾರ ಭೇದಿ ನಿಯಂತ್ರಣ
Team Udayavani, Jun 13, 2019, 3:00 AM IST
ಪಾತಪಾಳ್ಯ: ಆಹಾರ ಸೇವಿಸುವುದಕ್ಕೂ ಮುನ್ನ ಹಾಗೂ ವೈಯಕ್ತಿಕ ಶುಚಿತ್ವ ಅನುಸರಿಸುವುದರಿಂದ ಅತಿಸಾರ ಭೇದಿಯನ್ನು ತಡೆಗಟ್ಟಬಹುದು ಎಂದು ವೈದ್ಯಾಧಿಕಾರಿ ಡಾ.ಕೆ.ಎನ್.ರಾಘವೇಂದ್ರ ತಿಳಿಸಿದರು.
ಚಾಕವೇಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇವರ ವತಿಯಿಂದ ಬುಧವಾರ ಏರ್ಪಡಿಸಿದ್ದ ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅತಿಸಾರ ಭೇದಿಯು ಹೆಚ್ಚಾಗಿ 0.5 ತಿಂಗಳ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ನಿಯೋಜಿತ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎಎನ್ಎಂಗಳು 5 ವರ್ಷದೊಳಗಿನ ಮಕ್ಕಳಿರುವ ಮನೆಗಳಿಗೆ ಭೇಟಿ ನೀಡಿ ತಪ್ಪದೇ ಓಆರ್ಎಸ್ ಪೊಟ್ಟಣ ಹಾಗೂ ಜಿಂಕ್ ಮಾತ್ರೆಗಳನ್ನು ವಿತರಿಸಬೇಕು.
ಅತಿಸಾರ ಭೇದಿಯಿಂದ ನರಳುತ್ತಿರುವ ಮಕ್ಕಳನ್ನು ಆರೈಸುವ ವಿಧಾನದ ಬಗ್ಗೆ ಮಕ್ಕಳ ತಾಯಂದಿರಿಗೆ ಅರಿವು ಮೂಡಿಸಬೇಕು ಎಂದರು. ಔಷಧಿ ವಿತರಕಿ ಸನೀಬಾ ತಬಸೂನ್, ಸಿಬ್ಬಂದಿ ಶಾರದಮ್ಮ, ಟಿ.ವಿ.ರವಿ, ಆರ್. ರೋಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ