ತೆಕ್ಕಟ್ಟೆ : ರಾ.ಹೆ.66 ರಿಂದ ಹರಿವ ಕೊಳಚೆ ನೀರು ಕೃಷಿ ಭೂಮಿಗೆ


Team Udayavani, Jun 13, 2019, 6:10 AM IST

kolache-neeru

ತೆಕ್ಕಟ್ಟೆ: ಮುಂಗಾರು ಮಳೆ ಆರಂಭವಾಗಿದ್ದು ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ರಾ.ಹೆ.66ರ ಇಕ್ಕೆಲಗಳಲ್ಲಿರುವ ತೋಡುಗಳಲ್ಲಿ ಸಂಪೂರ್ಣ ಹೂಳು ತುಂಬಿಕೊಂಡಿರುವ ಪರಿಣಾಮ ಪ್ರಮುಖ ಪೇಟೆಯಲ್ಲಿ ಕೃತಕ ನೆರೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಗ್ರಾ.ಪಂ. ಸರ್ವ ಸನ್ನದ್ಧವಾಗಬೇಕಾದ ಅನಿವಾರ್ಯತೆ ಇದೆ.

ಕೃಷಿ ಭೂಮಿಯನ್ನು ಆವರಿಸುವ ಮಳೆ ನೀರು
ಗ್ರಾಮೀಣ ಭಾಗದಲ್ಲಿ ರಾ.ಹೆ.66 ಅನಾದಿ ಕಾಲದಿಂದಲೂ ಮಳೆ ನೀರು ಹರಿದು ಹೋಗುತ್ತಿತು.¤ ಆದರೆ ಚತುಷ್ಪಥ ಕಾಮಗಾರಿಯ ಸಂದರ್ಭ ಒಳ ಚರಂಡಿಗಳನ್ನು ಸ್ಥಳಾಂತರಿಸಿದ ಪರಿಣಾಮವಾಗಿ ತೆಕ್ಕಟ್ಟೆ ಪ್ರಮುಖ ಭಾಗದಿಂದ ಬರುವ ನೀರು ಕೊಮೆ ಸಂಪರ್ಕ ರಸ್ತೆಯ ಬದಿಯಲ್ಲಿರುವ ಕೃಷಿ ಭೂಮಿಯನ್ನು ಹಾಗೂ ಮಲ್ಯಾಡಿ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿದ ಒಳ ಚರಂಡಿ ಮೂಲಕ ನೇರವಾಗಿ ಕೃಷಿಭೂಮಿಯನ್ನು ಆವರಿಸುವುದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆ ಯಾಗುವ ಸಾಧ್ಯತೆ ಗಳಿದೆ ಎಂದು ಸ್ಥಳೀಯ ಕೃಷಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃತಕ ನೆರೆಯ ಭೀತಿ
ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪುರಾಣಿಕ್‌ ಕಾಂಪ್ಲೆಕ್ಸ್‌ ನ ಎದುರು ಕೆಲವೆಡೆಗಳಲ್ಲಿ ಚರಂಡಿ ಇದ್ದರೂ ಅದರಲ್ಲಿ ಹೂಳು ತುಂಬಿದ್ದು ಕಸಕಡ್ಡಿಯ ರಾಶಿಯೇ ಇದೆ. ಇದನ್ನು ತೆರವು ಮಾಡದ ಹಿನ್ನೆಲೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ರಾ.ಹೆ.66 ಬದಿಯಲ್ಲಿಯೇ ನಿಲ್ಲುತ್ತಿದೆ. ಪ್ರತಿವರ್ಷದಂತೆ ಈ ಬಾರಿಯೂ ಕೂಡಾ ಕೃತಕ ನೆರೆ ಸೃಷ್ಟಿಯಾಗುವ ಭೀತಿ ಇದೆ.

ಘನ ವಾಹನಗಳ ನಿಲುಗಡೆ
ರಾ.ಹೆ.66 ರ ಬಳಿ ಇರುವ ಹೋಟೆಲ್‌ಗ‌ಳಿಗೆ ರಾತ್ರಿ ವೇಳೆ ಸಂಚರಿಸುವ ಘನ ವಾಹನಗಳು ಕಾಲೇಜಿನ ರಸ್ತೆ ಸಮೀಪದಲ್ಲಿ ಸಾಲುಗಟ್ಟಿ ನಿಲ್ಲುವ ಪರಿಣಾಮ ವಾಹನಗಳ ಸಂಚಾರದಿಂದ ಪಾದಚಾರಿಗಳು ನಡೆದು ಹೋಗುವ ಮಾರ್ಗಗಳು ಮಳೆ ಬಂದಾಗ ರಾಡಿ ಏಳುತ್ತಿರುವುದಲ್ಲದೆ ಹೊಂಡಗಳು ಸೃಷ್ಟಿಯಾಗಿ ಅದರಲ್ಲಿ ಮಳೆ ನೀರು ಶೇಖರಣೆಯಾಗುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವ ಸ್ಥಿತಿ ಇದೆ. ಈ ಬಗ್ಗೆ ಸ್ಥಳೀಯಾಡಳಿತ ಕ್ರಮ ಜರುಗಿಸಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕೆಲವೆಡೆ ಪೂರ್ಣ
ಈಗಾಗಲೇ ಕೆಲವು ಕಡೆಗಳಲ್ಲಿ ಒಳ ಚರಂಡಿ ಸ್ವಚ್ಚತೆ ಮಾಡುವ ಕಾರ್ಯ ಪೂರ್ಣಗೊಂಡಿದೆ. ಮಳೆಗಾಲದಲ್ಲಿ ಎದುರಾಗುವ ಒಳಚರಂಡಿ ಸಮಸ್ಯೆಗಳ ಬಗ್ಗೆ ಆಯಾ ಗ್ರಾ.ಪಂ.ವಾರ್ಡ್‌ಗೆ ಸಂಬಂಧಿಸಿದ ಗ್ರಾ.ಪಂ.ಸದಸ್ಯರಿಗೆ ಮಾಹಿತಿ ನೀಡಲಾಗಿದೆ.
-ರಾಜೇಶ್‌ ಕೆ.ಸಿ., ಪಿಡಿಒ, ತೆಕ್ಕಟ್ಟೆ ಗ್ರಾ.ಪಂ.

ಎಲ್ಲೆಲ್ಲಿ ಒಳಚರಂಡಿ ವ್ಯವಸ್ಥೆ ಅನಿವಾರ್ಯ
– ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಿಂದ ಕೊಮೆ ರಸ್ತೆಯ ವರೆಗೆ ಒಳಚರಂಡಿ ಬೇಕು
– ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಮಲ್ಯಾಡಿ ರಸ್ತೆಯ ವರೆಗೆ ಒಳಚರಂಡಿ ವ್ಯವಸ್ಥೆ ಅಗತ್ಯ
– ತೆಕ್ಕಟ್ಟೆ ಎಕ್ಸ್‌ಪ್ರೆಸ್‌ ಬಸ್‌ ತಂಗುದಾಣದಿಂದ ಕಂಚುಗಾರುಬೆಟ್ಟು ರಸ್ತೆಯ ವರೆಗೆ ಒಳಚರಂಡಿ ವ್ಯವಸ್ಥೆ ಅಗತ್ಯ
– ಕನ್ನುಕೆರೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಮೀಪದಿಂದ ಪೆಟ್ರೋಲ್‌ ಬಂಕ್‌ ವರೆಗೆ ಒಳಚರಂಡಿ ಅನಿವಾರ್ಯ

- ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.