ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ನೀಡಿ; ತಪ್ಪು ಕಲ್ಪನೆ ದೂರ ಮಾಡಿ

ಇಂದು 'ಅಲ್ಬಿನಿಸಂ' ದಿನ

Team Udayavani, Jun 13, 2019, 6:10 AM IST

alibi

ವಿಶ್ವಾದ್ಯಂತ ಹಲವರು ಜನ ಅಲ್ಬಿನಿಸಂ (ಬಿಳಿ ತೊನ್ನು) ರೋಗದಿಂದ ಬಳಲುತ್ತಿದ್ದಾರೆ. ಅಲ್ಬಿನಿಸಂ ಅನ್ನು ಸಾಮಾಜಿಕವಾಗಿ ಮತ್ತು ವೈದ್ಯಕೀಯವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದ್ದು, ಮೂಢನಂಬಿಕೆಗಳಿಂದ ಪ್ರಭಾವಿತಗೊಂಡಿದೆ.

ಇದೊಂದು ದೇವರ ಶಾಪ ಎಂಬ ತಪ್ಪು ಕಲ್ಪನೆ ಜನರಲ್ಲಿ ಬಿಂಬಿತಗೊಂಡಿದ್ದು,ಇದರಿಂದ ಅವರು ಸಾಮಾಜಿಕ ಕಳಂಕವಾಗಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಬನಿಸಂ ಹೊಂದಿರುವವರು ಯಾವುದೋ ನಿರ್ದಿಷ್ಟ ಸಮುದಾಯದವರು ಎಂಬ ತಪ್ಪು ಕಲ್ಪನೆ ನಮ್ಮದಾಗಿದ್ದು ಇದು ಒಂದು ಆನುವಂಶಿಕ ಸ್ಥಿತಿಯಾಗಿದೆ. ಕೆಲವರು ದೇಹದಲ್ಲಿ ಸಾಮಾನ್ಯವಾಗಿ ಬೇಕಾದ ವರ್ಣದ್ರವ್ಯ (ಬಣ್ಣ) ಇಲ್ಲದೆ ಜನಿಸುತ್ತಾರೆ. ಇದರಿಂದ ಅವರ ಶರೀರದಲ್ಲಿ ಕಣ್ಣಿನ ಚರ್ಮ, ಕೂದಲಿನ ಬಣ್ಣದಲ್ಲಿ ವ್ಯತ್ಯಾಸ ಕಂಡು ಬರುವುದಲ್ಲದೆ ತುಂಬಾ ತೆಳುವಾದ ಚರ್ಮವನ್ನು ಹೊಂದಿರುತ್ತಾರೆ.

ಕಣ್ಣುಗಳ ಮೇಲೆ ಪರಿಣಾಮ

ಕೆಲವರಿಗೆ ಅಲ್ಬಿನಿಸಂ ಕಣ್ಣುಗಳ ಮೇಲೆ ಮಾತ್ರ ಪರಿಣಾಮ ಬೀರುತ್ತದೆ .ಇದನ್ನು ಆಕ್ಯುಲರ್‌ ಅಲ್ಬಿನಿಸಂ ಎನ್ನಲಾಗುತ್ತದೆ.

ಇಂಥವರು ಸಾಮಾನ್ಯವಾಗಿ ನೀಲಿ ಕಣ್ಣುಗಳನ್ನು ಹೊಂದಿದ್ದು ಕೆಲವು ಸಂದರ್ಭ ಕಣ್ಣಿನ ಭಾಗ ಬಹಳ ಕಡಿಮೆ ಬಣ್ಣವನ್ನು ಹೊಂದಿರುತ್ತದೆ. ಇದರಿಂದ ಕಣ್ಣಿನ ನರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಕೂಡ ಇರುತ್ತದೆ.

ಇದು ಸಾಮಾನ್ಯವಾಗಿ ಹುಟ್ಟಿನಿಂದ ಬರುವ ಕಾಯಿಲೆಯಾಗಿದ್ದು, ಯಾವುದೇ ರೀತಿಯಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ ಇದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಬದಲಾಗಿ ಅವರು ಸೂರ್ಯನ ಕಿರಣಗಳಿಂದ ರಕ್ಷಣೆ ಪಡೆಯುವುದು ದೊಡ್ಡ ಸವಾಲಾಗಿದೆ.

ಅಲ್ಬನಿಸ್‌ಂ ಹೊಂದಿರುವವರು ಹದಿಹರೆಯದಲ್ಲಿ ಕೆಲವೊಮ್ಮೆ ಹತಾಶೆ, ದುಃಖದಿಂದ ಬಳಲುತ್ತಾರೆ. ಅಂತಹ ಸಂದರ್ಭಗಳಲ್ಲಿ ಕುಟುಂಬದವರು, ಸ್ನೇಹಿತರು ಇವರಿಗೆ ಸ್ವಾಂತನ ಹೇಳಬೇಕಾಗುತ್ತದೆ. ಇವರಿಗೆ ನೈತಿಕ ಸ್ಥೈರ್ಯ ತುಂಬುವುದೇ ಸಮಾಜದ ಬಹುದೊಡ್ಡ ಉಪಕಾರವಾಗುತ್ತದೆ.ಇದೆಲ್ಲ ಕಾರಣಗಳಿಂದ ಈ ರೋಗದ ಬಗ್ಗೆ ಜಾಗೃತಿ ವಹಿಸುವ ನಿಟ್ಟಿನಲ್ಲಿ 2014 ಡಿಸೆಂಬರ್‌ 18ರಂದು ಜನರಲ್ ಅಸೆಂಬ್ಲಿ ಜೂ. 13ರಂದು ಅಂತಾರಾಷ್ಟ್ರೀಯ ಅಲ್ಬಿನಿಸಮ್‌ ಜಾಗೃತಿ ದಿನವಾಗಿ ಘೋಷಿಸಿತು.

ಸವಾಲುಗಳಿಗೆ ಮುಕ್ತಿ ಸಿಗಲಿ

ಇಂದು ಅಲ್ಬನಿಸಂ ತಾರತಮ್ಯತೆಯಿಂದ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಸವಾಲುಗಳಿಗೆ ಮುಕ್ತಿ ನೀಡಬೇಕು. ಇಂದಿಗೂ ಕೆಲವು ರಾಷ್ಟ್ರಗಳಲ್ಲಿ ಉಳ್ಳವರ ದಾಳಿಗೆ ಇವರು ಬಲಿಯಾಗುತ್ತಿದ್ದಾರೆ .ಇದೆಲ್ಲವೂ ಕೊನೆಗೊಳ್ಳಲಿ ಎಂಬುದು ಈ ದಿನದ ಆಚರಣೆಯ ಉದ್ದೇಶ.

ಯಾಕಾಗಿ ಆಚರಿಸುತ್ತೇವೆ?

ಈ ದಿನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು ಆಚರಿಸುತ್ತೇವೆ. ಇದು ಜನರಲ್ಲಿ ಮಾನವೀಯ ಮೌಲ್ಯವನ್ನು ಹುಟ್ಟುಹಾಕಿ ಜನರಲ್ಲಿ ಜಾಗೃತಿ ಮೂಡಿಸುತ್ತದೆ.

ಈ ವರ್ಷದ ಥೀಮ್‌ ಅನ್ನು ಇನ್ನು ಪ್ರಬಲವಾಗಿ ಎಂಬ ವಿಷಯದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇದರ ಪ್ರಕಾರ ವಿಶ್ವದಾದ್ಯಂತ ಇರುವ ಅಲ್ಬಿನಿಸಂ ವ್ಯಕ್ತಿಗಳೊಂದಿಗೆ ಏಕತೆ ಸಾಧಿಸುವುದು ಮತ್ತು ಅವರ ಸಾಧನೆಗೆ, ಧನಾತ್ಮಕ ಯೋಚನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎನ್ನುವುದು ಈ ವರ್ಷದ ಥೀಮ್‌ನ ಸಾರವಾಗಿದೆ.

ಜಗತ್ತಿನಲ್ಲಿ ಪ್ರತಿಯೊಬ್ಬರೂ ಸಮಾನರು. ಮೈ ಬಣ್ಣಗಳಿಂದ ತಾರತಮ್ಯ ಮಾಡುವುದು ತರವಲ್ಲ. ಅಲ್ಬಿನಿಸಂ ಇರುವ ವ್ಯಕ್ತಿಗಳನ್ನು ಕೂಡ ಸಮಾಜದಲ್ಲಿ ಅಪಹಾಸ್ಯವಾಗಿ ಕಾಣದೆ ಪ್ರೀತಿಯಿಂದ ಕಾಣಿರಿ. ಇದರಿಂದ ಅವರು ಅನುಭವಿಸುತ್ತಿರುವ ಕಷ್ಟಗಳಿಗೆ ಸ್ವಲ್ಪವಾದರೂ ಮುಕ್ತಿ ದೊರಕಿದಂತಾಗುತ್ತದೆ. ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಸ್ಥಾನಮಾನ ಲಭ್ಯವಾಗಬೇಕು ಎಂಬುದೇ ನಮ್ಮ ಆಶಯ.

ಏಕತೆ ಸಾಧಿಸುವ ಉದ್ದೇಶ

ಈ ವರ್ಷದ ಥೀಮ್‌ ಅನ್ನು ಇನ್ನು ಪ್ರಬಲವಾಗಿ ಎಂಬ ವಿಷಯದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇದರ ಪ್ರಕಾರ ವಿಶ್ವದಾದ್ಯಂತ ಇರುವ ಅಲ್ಬಿನಿಸಂ ವ್ಯಕ್ತಿಗಳೊಂದಿಗೆ ಏಕತೆ ಸಾಧಿಸುವುದು ಮತ್ತು ಅವರ ಸಾಧನೆಗೆ, ಧನಾತ್ಮಕ ಯೋಚನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎನ್ನುವುದು ಈ ವರ್ಷದ ಥೀಮ್‌ನ ಸಾರವಾಗಿದೆ.
– ಪ್ರೀತಿ ಭಟ್ ಗುಣವಂತೆ

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.