ಸಿಸಿಬಿ ಕಚೇರಿ ಎದುರು ಪ್ರತಿಭಟನೆ
Team Udayavani, Jun 13, 2019, 3:00 AM IST
ಬೆಂಗಳೂರು: ಐಎಂಎ ಸಂಸ್ಥೆಯ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಜಯನಗರದ 9ನೇ ಬ್ಲಾಕ್ನಲ್ಲಿರುವ ಎಐಎಂಎಂಎಸ್ ವೆಂಚರ್ಸ್ ಕಂಪನಿಯಿಂದ ವಂಚನೆಗೊಳಗಾಗಿರುವ ಹೂಡಿಕೆದಾರರು ಬುಧವಾರ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನೂರಕ್ಕೂ ಹೆಚ್ಚು ಮಂದಿ ಹೂಡಿಕೆದಾರರು ಸಿಸಿಬಿ ಕಚೇರಿ ಎದುರು ಜಮಾಯಿಸಿ ಪೊಲೀಸರು ಹಾಗೂ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಿಸಿಬಿ ಪೊಲೀಸರು ಹೀಗಾಗಲೇ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಜಾಮೀನು ಪಡೆದು ಹೊರಗಡೆ ಬಂದಿದ್ದಾರೆ.
ಆದರೆ ಇದುವರೆಗೂ ಯಾರಿಗೂ ಹಣ ವಾಪಸ್ ಬಂದಿಲ್ಲ. ಹೀಗಾಗಿ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಥಳಕ್ಕೆ ಬರುವವರೆಗೂ ಹೋಗುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ನಂತರ ಸ್ಥಳಕ್ಕೆ ಬಂದ ಸಿಸಿಬಿ ಎಸಿಪಿ ಲಕ್ಷ್ಮಿನಾರಾಯಣ್ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ, ಮನವೊಲಿಸಿ ಸ್ಥಳದಿಂದ ಕಳುಹಿಸಿದರು.
ಆರೋಪಿತ ಸಂಸ್ಥೆ ಎಐಎಂಎಂಎಸ್ ವೆಂಚರ್ಸ್ ಲಕ್ಷಕ್ಕೆ ಶೇ.10 ರಷ್ಟು ಲಾಭಾಂಶ ಕೊಡುವುದಾಗಿ ಹಣ ಪಡೆದು ವಂಚಿಸಿದೆ. ನೂರಾರು ಜನರಿಗೆ ಸುಮಾರು 14 ಕೋಟಿಯಷ್ಟು ವಂಚನೆ ಮಾಡಿದೆ ಎಂದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ