ಐಎಂಎ ಕೇಂದ್ರ ಕಚೇರಿ ಜಪ್ತಿ, ಮನ್ಸೂರ್ ಖಾನ್ ರೇಂಜ್ ರೋವರ್ ಕಾರು ವಶಕ್ಕೆ!
Team Udayavani, Jun 13, 2019, 5:57 PM IST
ಬೆಂಗಳೂರು:ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಶಿವಾಜಿನಗರದಲ್ಲಿರುವ ಐಎಂಎ ಜ್ಯುವೆಲರ್ಸ್ ಸಂಸ್ಥೆಯನ್ನು ಗುರುವಾರ ಎಸ್ ಐಟಿ ಅಧಿಕಾರಿಗಳು ಜಪ್ತಿ ಮಾಡಿ, ಸೀಲ್ ಮಾಡಿದ್ದಾರೆ. ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿರುವ ಐಎಂಎ ಜ್ಯುವೆಲರ್ಸ್ ನ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿರಬೇಕೆಂದು ಶಂಕಿಸಲಾಗಿದೆ.
ಏತನ್ಮಧ್ಯೆ ಎಸ್ ಐಟಿ ಮುಖ್ಯಸ್ಥ ರವಿಕಾಂತೇಗೌಡ ನೇತೃತ್ವದಲ್ಲಿ ಏಳು ಮಂದಿ ಆರೋಪಿಗಳ ವಿಚಾರಣೆ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ಐಎಂಎ ಜ್ಯುವೆಲರ್ಸ್ ನ ಏಳು ನಿರ್ದೇಶಕರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಎಸ್ ಐಟಿಗೆ ಹಸ್ತಾಂತರಿಸಿದ್ದಾರೆ.
ಕೆಐಎಎಲ್ ನಲ್ಲಿ ರೇಂಜ್ ರೋವರ್ ಕಾರು ಬಿಟ್ಟು ವಿದೇಶಕ್ಕೆ ಪರಾರಿ?
ಕಳೆದ ನಾಲ್ಕು ದಿನಗಳಿಂದ ಬೆಂಗಳೂರು ವಿಮಾನ ನಿಲ್ದಾಣದ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ರೇಂಜ್ ರೋವರ್ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ. ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಕಾರನ್ನು ಕೆಐಎಎಲ್ ನಲ್ಲಿ ಪಾರ್ಕ್ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಮತ್ತೊಂದೆಡೆ ಮನ್ಸೂರ್ ಗೆ ಸೇರಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ಹೇಳಿದೆ.
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮೂರು ಕೌಂಟರ್ ಗಳನ್ನು ತೆರೆಯಲಾಗಿದ್ದು, ಅಂದಾಜು 25ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಬೇರೆ ರಾಜ್ಯಗಳಿಂದ, ಊರುಗಳಿಂದಲೂ ಆಗಮಿಸಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ