ನಾಡದೋಣಿ ಮೀನುಗಾರಿಕೆಗೆ ಮೀನುಗಾರರು ಸಜ್ಜು

ಬಲೆ ಜೋಡಿಸುವ ಕಾರ್ಯದಲ್ಲಿ ನಿರತ

Team Udayavani, Jun 14, 2019, 6:05 AM IST

meenugarike

ಮಲ್ಪೆ: ಮಳೆಗಾಲ ಆರಂಭವಾಗುತ್ತಿರುವಂತೆಯೇ, ಸಹಕಾರಿ ತತ್ವದಡಿ
ನಡೆಯುವ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಮೀನುಗಾರರು ಸಜ್ಜಾಗುತ್ತಿದ್ದಾರೆ.

ಯಾಂತ್ರೀಕೃತ ಮೀನುಗಾರಿಕೆ ಮುಗಿದ ಬೆನ್ನಲ್ಲೇ ಎರಡು ತಿಂಗಳ ಕಾಲ 10 ಅಶ್ವಶಕ್ತಿ ಸಾಮರ್ಥ್ಯದ ಎಂಜಿನ್‌ ಬಳಸಿ ಮೀನುಗಾರಿಕೆ ನಡೆಸಲು ನಾಡದೋಣಿ ಮೀನುಗಾರರಿಗೆ ಅವಕಾಶವಿದೆ. ಇದಕ್ಕಾಗಿ ಮೀನುಗಾರರಿಂದ ದಾರದ ಪ್ರಕ್ರಿಯೆ ನಡೆಯುತ್ತಿದೆ.

ಏನಿದು ದಾರ?
ಕಳೆದ ವರ್ಷದ ಮಳೆಗಾಲದಲ್ಲಿ ಮೀನುಗಾರಿಕೆ ಋತು ಕೊನೆಗೊಂಡ
ಬಳಿಕ ಮೀನುಗಾರಿಕೆಗೆ ಬಳಸಿದ ಬಲೆಗಳನ್ನು ವಿಭಜಿಸಿ ಸಂಗ್ರಹಿಸಿಡುತ್ತಾರೆ. ಈ ಋತುವಿ ನಲ್ಲಿ ಮಳೆಗಾಲ ಆರಂಭಗೊಂಡ ಬಳಿಕ ಕಳೆದ ವರ್ಷ ಸಂಗ್ರಹಿಸಿಟ್ಟ ಬಲೆಗಳನ್ನು ತಂದು ನಿರ್ದಿಷ್ಟ ದಿನದಂದು ಎಲ್ಲರೂ ಒಟ್ಟಾಗಿ ಪೋಣಿಸುವ ಪ್ರಕ್ರಿಯೆ ನಡೆಯ ುತ್ತದೆ. ಕರಾವಳಿ ಮೀನುಗಾರರ ಭಾಷೆಯಲ್ಲಿ ಇದಕ್ಕೆ ದಾರ ಎಂದು ಕರೆಯ ಲಾಗುತ್ತದೆ. ಎಲ್ಲವನ್ನೂ ಮುಹೂರ್ತ ನೋಡಿಯೇ, ದಾರ, ದೋಣಿ ಇಳಿಸುವ ಸಂಪ್ರದಾಯವನ್ನು ನಡೆಸುತ್ತಾರೆ.

ಸಹಕಾರಿ ತತ್ವ
ಮಲ್ಪೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧೀನದಲ್ಲಿ ಸುಮಾರು 38 ಡಿಸ್ಕೊ ಫಂಡ್‌ಗಳಿವೆ, ಅಂದರೆ 38 ಗುಂಪುಗಳು ಮೀನುಗಾರಿಕೆ ನಡೆಸುತ್ತದೆ. ಒಂದು ಗುಂಪಿನಲ್ಲಿ ಸುಮಾರು 30ರಿಂದ 60 ಮಂದಿ ಮೀನುಗಾರರು ಇರುತ್ತಾರೆ. ಇಲ್ಲಿ ಮಾಲಕ, ಕಾರ್ಮಿಕ ಎನ್ನುವ ವಿಭಾಗ ಇಲ್ಲ.

ಖರ್ಚು ಮತ್ತು ಆದಾಯವನ್ನು ಸಮಾನವಾಗಿ ಹಂಚಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರು, ಹೆಜಮಾಡಿ, ಕಾಪು, ಉಚ್ಚಿಲ, ಬೆಂಗ್ರೆ, ಹಂಗಾರಕಟ್ಟೆ, ಗಂಗೊಳ್ಳಿ, ಬೈಂದೂರು ಸೇರಿದಂತೆ ಉತ್ತರ ಕನ್ನಡದಲ್ಲೂ ಇಂತಹ ಗುಂಪುಗಳು
ಇವೆ.

ತೂಫಾನ್‌ ಆಗಬೇಕು
ಮೀನಿನ ಫಸಲು ಸಿಗಲು ಹೆಚ್ಚಾಗ ಬೇಕಾದರೆ ತೂಫಾನ್‌ ಅಗಬೇಕು. ಕಡಲು ಪ್ರಕ್ಷುಬ್ಧಗೊಳ್ಳಬೇಕು. ಗುಡ್ಡಗಾಡುಗಳಿಂದ ನೆರೆನೀರು ರಭಸವಾಗಿ ಹರಿದುಬಂದು ಸಮುದ್ರ ಸೇರಬೇಕು. ಸಮುದ್ರದಲ್ಲಿ ಕೆಸರು ಮೇಲೆ ಬರಬೇಕು. ಆಗ ಮೀನುಗಳು ದಡದತ್ತ ಸೇರುತ್ತವೆ. ಅದನ್ನು ಹಿಡಿಯಲು ಸಮುದ್ರ ಶಾಂತವಾಗಬೇಕು. ಆಗ ಬಂಗುಡೆ, ಸಿಗಡಿಯಂತಹ ಮೀನುಗಳು ಹೇರಳವಾಗಿ ನಾಡದೋಣಿಗಳ ಬಲೆಗೆ ಬೀಳುತ್ತದೆ.

ಸಿಗಡಿ ಮೀನಿನ ನಿರೀಕ್ಷೆ
ಕಳೆದ ವರ್ಷ ಆರಂಭದಲ್ಲಿ ನಾಡದೋಣಿಗೆ ಮೀನು ದೊರೆತಿಲ್ಲ. ಅಂತ್ಯದ 10 ದಿನಗಳಲ್ಲಿ ಮೀನು ಸಿಕ್ಕಿದ್ದು ಲಾಭದಾಯಕವಾಗಿದೆ. ಈ ಬಾರಿ ಯಾಂತ್ರಿಕ ಮೀನುಗಾರಿಕೆ ಋತು ಅಂತ್ಯದಲ್ಲಿ ಕೆಲವೊಂದು ಬೋಟ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಿಗಡಿ ಮೀನು ದೊರಕಿದ್ದು, ಆ ಮೀನು ಮಳೆಗಾಲದಲ್ಲಿ ನಾಡದೋಣಿ ಮೀನುಗಾರರಿಗೆ ಸಿಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

ಸಾಮೂಹಿಕ ಪ್ರಾರ್ಥನೆ
ಜೂ. 12ರಂದು ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಪ್ರಸಾದವನ್ನು ಗಂಗಾಮಾತೆಗೆ ಅರ್ಪಿಸಲಾಗಿದೆ. ಮೀನುಗಾರರು ಸಮುದ್ರದ ವಾತಾವರಣವನ್ನು ನೋಡಿಕೊಂಡು ಯಾವಾಗ ಬೇಕಾದರೂ ಸಮುದ್ರಕ್ಕೆ ಇಳಿಯಬಹುದು.
-ಜನಾರ್ದನ ತಿಂಗಳಾಯ, ಅಧ್ಯಕ್ಷರು, ಮಲ್ಪೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ

ಕರ ರಹಿತ ಸೀಮೆ ಎಣ್ಣೆ ಒದಗಿಸಿ
ನಾಡದೋಣಿ ಮೀನುಗಾರಿಕೆ ಉಳಿಯಬೇಕಾದರೆ ಕರ ರಹಿತ ಸೀಮೆಎಣ್ಣೆ ಅಗತ್ಯ. ಸರಕಾರ ನಾಡದೋಣಿ ಮೀನುಗಾರರಿಗೆ ಈಗಾಗಲೇ ನೀಡು ತ್ತಿರುವ ಕರ ರಹಿತ ಸೀಮೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತ ಮಾಡಬಾರದು.
-ಕೃಷ್ಣ ಎಸ್‌. ಸುವರ್ಣ, ಪಡುತೋನ್ಸೆ ಬೆಂಗ್ರೆ, ನಾಡದೋಣಿ ಮೀನುಗಾರ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.