ವರ್ಷಾಂತ್ಯಕ್ಕೆ 11 ಲಕ್ಷ ರೈತರಿಗೆಋಣ ಮುಕ್ತ ಪ್ರಮಾಣ ಪತ್ರ


Team Udayavani, Jun 14, 2019, 5:18 AM IST

Parameshwara-700

ಬೆಂಗಳೂರು: ಈ ವರ್ಷಾಂತ್ಯಕ್ಕೆ ರಾಜ್ಯದ 11 ಲಕ್ಷ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರವನ್ನು ನೆಚ್ಚಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್‌ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳ ಎಲ್ಲ ಸಾಲವನ್ನೂ ರಾಜ್ಯ ಸರ್ಕಾರವೇ ಮನ್ನಾ ಮಾಡುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆ, ಆಟದ ಮೈದಾನ, ಸ್ಮಶಾನ ಈ ಸೌಲಭ್ಯಗಳಿಗೆ ಜಾಗ ನೀಡುವ ಸಂಬಂಧ ಮುಂದಿನ 10 ವರ್ಷದವರೆಗೆ ನಿಗದಿ ಆಗಬೇಕು. ಗ್ರಾಮಗಳಲ್ಲಿ ಕಸ ವಿಲೇವಾರಿ ಈಗಿನಿಂದಲೇ ವೈಜ್ಞಾನಿಕವಾಗಿ ಆಗಬೇಕು. ಈ ನಿಟ್ಟಿನಲ್ಲಿ, ಘನ ತ್ಯಾಜ್ಯ ವಿಲೇವಾರಿಗೆ ನಿಗದಿತ ಗುರಿ ಹಾಕಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.

ರೈತರ ಸಹಭಾಗಿತ್ವದಲ್ಲಿ ಕೆರೆಗಳಲ್ಲಿ ಹೂಳು ಎತ್ತಲು ಜಲಾಮೃತ ಯೋಜನೆ ತಂದಿದ್ದು, ಇದಕ್ಕೆ 100 ಕೋಟಿ ರೂ. ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಈ ಹಣ ತಾಲೂಕುವಾರು ಹಂಚಿಕೆ ಮಾಡಲಾಗಿದೆ.

ಸರ್ಕಾರಿ ಆಸ್ತಿ ಆವರಣಗಳಾದ ಸರಕಾರಿ ಜಾಗದಲ್ಲಿ ಕಡ್ಡಾಯವಾಗಿ ಗಿಡ ನೆಡಲು ಸೂಚನೆ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವಕರಿಗೆ ಗುಣಮಟ್ಟದ ತರಬೇತಿ ನಿಡಲು ಕ್ರಮ, ಸಮಾಜ ಕಲ್ಯಾಣ ಇಲಾಖೆಯಲ್ಲಿ 1,860 ವಿದ್ಯಾರ್ಥಿ ನಿಲಯವಿದ್ದು, ಈ ಪೈಕಿ 1525 ವಿದ್ಯಾರ್ಥಿ ನಿಲಯಕ್ಕೆ ಕಟ್ಟಡ ಇದೆ. 345 ಬಾಕಿ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ, ಈ ಎಲ್ಲ ಕಟ್ಟಡವನ್ನು ಎ ವರ್ಗಕ್ಕೆ ತರಲು ಹಣ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ 11,200 ಪ್ರಕರಣಗಳು ವಿದ್ಯುತ್‌ ಸಂಪರ್ಕಕ್ಕೆ ಬಾಕಿ ಉಳಿದಿದ್ದು, ಜೂ.20 ರೊಳಗೆ ಎಲ್ಲಾ ಜಿಲ್ಲಾಧಿಕಾರಿಗಳು ಎಸ್ಕಾಂ ಜೊತೆಯಲ್ಲಿ ರಿಜಿಸ್ಟ್ರಿ ಮಾಡಲು ಸೂಚನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಜನಾಂಗ, ಹಿಂದುಳಿದ ಜನಾಂಗದ 55 ಲಕ್ಷ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್‌ ಸೀಡಿಂಗ್‌ ಮಾಡಲು ಜೂನ್‌ ಅಂತ್ಯದ ವರೆಗೆ ಸಮಯ ನೀಡಲಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಹಾಸ್ಟೆಲ್ಗೆ ಭೇಟಿ ನೀಡಿ, ಗುಣಮಟ್ಟ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಬೇಕು. ಅನಧಿಕೃತವಾಗಿ ಹಾಸ್ಟೆಲ್ನಲ್ಲಿ ಇರುವವರ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ದಾವಣಗೆರೆಯ ಅತ್ತಿಗೆರೆ ಗ್ರಾಮದ ಖಾಸಗಿ ಜಮೀನಿನಲ್ಲಿ ಬಡ ಕುಟುಂಬಗಳು ವಾಸವಿದೆ. ತಮ್ಮ ಸಮಸ್ಯೆ ಬಗ್ಗೆ 12 ವರ್ಷದಿಂದ ಮನವಿ ಮಾಡಿದ್ದರು. ಈಗ ಮತ್ತೆ ಮನವಿ ಮಾಡಿದ್ದಾರೆ. ಹೀಗಾಗಿ ಖಾಸಗಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವುದು ಅಥವಾ ಪರ್ಯಾಯ ಜಮೀನು ಗುರುತಿಸಿ ಅವರ ವಾಸಕ್ಕೆ ಅನುವು ಮಾಡಿಕೊಡುವಂತೆ ಆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸೂಚನೆಗಳು
•ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯಡಿ ರೈತರಿಗೆ 6 ಸಾವಿರ ಕೊಡುವ ಯೋಜನೆಯಡಿ 11 ಲಕ್ಷ ರೈತರನ್ನು ನೋಂದಾಯಿಸಲಾಗಿದೆ. ಜೂನ್‌ ಅಂತ್ಯದ ಒಳಗೆ ಎಲ್ಲ ರೈತರ ನೋಂದಣಿ ಆಗಬೇಕು. 56 ಲಕ್ಷ ರೈತರು ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯಡಿ ತರಲು ಸೂಚನೆ.
•ರೈತರ ಆತ್ಮಹತ್ಯೆ ಪ್ರಕರಣ ಕಡಿಮೆಯಾಗಿದೆ. ಈ ವರ್ಷ 940 , ಕಳೆದ ವರ್ಷ 1500 ವರದಿಯಾಗಿತ್ತು. ಈ ವರ್ಷದಲ್ಲಿ 44 ಪ್ರಕರಣ ಪರಿಹಾರ ಬಾಕಿ ಇದ್ದು, ಉಳಿಕೆ ಪ್ರಕರಣಕ್ಕೆ 5 ಲಕ್ಷ ಪರಿಹಾರ ನೀಡಲಾಗಿದೆ. ಇವರ ಮಕ್ಕಳಿಗೆ ಶಿಕ್ಷಣ ನೀಡಲು ಸೂಚನೆ. •ಕೈಗಾರಿಕಾ ಕ್ಷೇತ್ರದಲ್ಲಿ ಕಾಂಪಿಟ್ ವಿತ್‌ ಚೀನಾ ಯೋಜನೆಯಡಿ ಬಳ್ಳಾರಿ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯಲ್ಲಿ ವಿವಿಧ ಕೈಗಾರಿಕೆಯ ಕ್ಲಸ್ಟರ್‌ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಸಿಂಗಲ್ ವಿಂಡೋ ಅಡಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸೂಚನೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.