ಮೊಳಕೆಯೊಡೆದ ಸಸಿ ಮೇಲೆ ಜಿಂಕೆ ದಾಳಿ

•ಬೆಳೆ ಕಾಪಾಡಿಕೊಳ್ಳಲು ಹೆಣಗುತ್ತಿರುವ ರೈತರು•ಜಿಂಕೆಗಳ ಹಾವಳಿ ತಡೆಯಲು ಮನವಿ

Team Udayavani, Jun 14, 2019, 11:33 AM IST

gadaga-tdy-1..

ನರೇಗಲ್ಲ ಸಮೀಪದ ಅಬ್ಬಿಗೇರಿ ಗ್ರಾಮದ ಜಮೀನುವೊಂದರಲ್ಲಿ ಜಿಂಕೆ ದಂಡು.

ನರೇಗಲ್ಲ: ಸತತ ಬರಗಾಲದಿಂದ ಚಿಂತೆಗೀಡಾದ್ದ ರೈತ ಸಮುದಾಯ ಪ್ರಸಕ್ತ ಬಾರಿ ಆದ ಅಲ್ಪ ಪ್ರಮಾಣದ ಮಳೆಯಲ್ಲಿ ಬಿತ್ತನೆ ಮಾಡಿದ್ದು, ಬೀಜ ಮೊಳಕೆಯಾಡೆದ ಸಸಿಗಳ ಜಿಂಕೆಗಳ ದಂಡು ಲಗ್ಗೆಯಿಟ್ಟು ನಾಶ ಮಾಡುತ್ತಿದೆ.

ಮುಂಗಾರು ಹಂಗಾಮಿನ ಆರಂಭಿಕ ಮಳೆಗಳು ಸುರಿಸಿದ ಭರಪುರ ಮಳೆಯಿಂದ ಭೂಮಿ ಹದಗೊಳಿಸಿ, ಬಿತ್ತನೆ ಮಾಡಲಾಗಿತ್ತು. ಬೀಜ ಮೊಳಕೆಯೊಡೆದು ಸಸಿಗಳಾಗುತ್ತಿದ್ದರೆ ಇನ್ನೊಂದೆಡೆ ಜಿಂಕೆಗಳು ಜಮೀನುಗಳಿಗೆ ನುಗ್ಗಿ ಬೆಳೆಯನ್ನು ತಿನ್ನುತ್ತಿವೆ.

ನರೇಗಲ್ಲ ಹೋಬಳಿ ವ್ಯಾಪ್ತಿಯ ಅಬ್ಬಿಗೇರಿ, ಯರೇಬೇಲೇರಿ, ಕುರಡಗಿ, ಗುಜಮಾಗಡಿ, ಡ.ಸ. ಹಡಗಲಿ, ನಾಗರಾಳ, ನಿಡಗುಂದಿ, ನಿಡಗುಂದಿಕೊಪ್ಪ, ಕಳಕಾಪೂರ, ಹೊಸಳ್ಳಿ, ಜಕ್ಕಲಿ, ಬೂದಿಹಾಳ, ಮಾರನಬಸರಿ, ನರೇಗಲ್ಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮುಂಗಾರು ಮಳೆಗೆ ಬಿತ್ತನೆ ಮಾಡಿರುವ ಹೆಸರು, ಶೇಂಗಾ, ತೊಗರಿ, ಹತ್ತಿ, ಮೆಕ್ಕೆಜೋಳ ಬಿತ್ತನೆ ಮಾಡಲಾಗಿದೆ. ಈ ಜಮೀನುಗಳಿಗೆ ಜಿಂಕೆ ಹಿಂಡು ಲಗ್ಗೆ ಹಾಕಿ ಬೆಳೆ ನಾಶ ಮಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಜಿಂಕೆ ತಂಡ ಆಗಮನ: ಮುಂಗಾರು ಮಳೆಗಾಲದ ಸಮಯದಲ್ಲಿ ಆಹಾರದ ಕೊರತೆಯಿಂದ ಬಯಲು ಸೀಮೆಯ ಕಡೆಗೆ ಜಿಂಕೆಗಳ ದಂಡು ಮುಖ ಮಾಡುತ್ತಿವೆ. 20 ರಿಂದ 40 ಜಿಂಕೆಗಳ ತಂಡ ಬಿತ್ತದ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡುತ್ತಿವೆ.

ರಾತ್ರಿವಿಡೀ ಕಾವಲು ಕಾಯುವ ರೈತರು:

ಬಿತ್ತದ ಬೀಜ ಮೊಳಕೆಯೊಡೆದು ಭೂಮಿ ಬಿಟ್ಟು ಎರಡು ಇಂಚು ಮೇಲೆ ಬರುತ್ತಿದ್ದಂತೆ ಜಿಂಕೆಗಳು ಹಾವಳಿ ಮಾಡುತ್ತಿರುವುದರಿಂದ ರೈತರು ಹಗಲು-ರಾತ್ರಿ ಕಾವಲು ಕಾಯಬೇಕಾಗಿದೆ.

ಕೆಲವು ರೈತರು ಜಿಂಕೆ ಮತ್ತು ಕೃಷ್ಣಮೃಗಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಕೃಷಿ ಭೂಮಿಯ ಅಲ್ಲಲ್ಲಿ ಬೆದರು ಗೊಂಬೆಗಳನ್ನು ನಿಲ್ಲಿಸುತ್ತಾರೆ. ಮನುಷ್ಯ ನಿಂತಂತೆ ಬೆದರು ಗೊಂಬೆ ಭಾಸವಾದರೆ ಸ್ವಲ್ಪಮಟ್ಟಿನ ಹಾವಳಿ ನಿಯಂತ್ರಣ ಸಾಧ್ಯ ಎನ್ನುವುದು ರೈತರ ಲೆಕ್ಕಾಚಾರ. ಆದರೆ, ಮನುಷ್ಯನ ವಾಸನೆ ಬಾರದೆ, ಬೆದರು ಗೊಂಬೆಗಳ ಮೇಲೆ ಪಕ್ಷಿಗಳು ಕೂತಿರುವುದನ್ನು ಕಂಡು ಜಿಂಕೆ ಮತ್ತು ಕೃಷ್ಣಮೃಗಗಳು ನಿರ್ಭಯವಾಗಿ ಕೃಷಿ ಭೂಮಿಯಲ್ಲಿ ದಾಳಿ ನಡೆಸಿ ಬೆಳೆ ತಿನ್ನುತ್ತಿವೆ.

ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಜೂನ್‌, ಜುಲೈನಲ್ಲಿ ಜಿಂಕೆ ಮತ್ತು ಕೃಷ್ಣಮೃಗಗಳ ಹಾವಳಿ ಹೆಚ್ಚಾಗಿರುತ್ತಿದೆ. ಇವು ದಾಳಿ ನಡೆಸುತ್ತಿರುವ ಪರಿಣಾಮ ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಸಂಭವಿಸಿ ರೈತರು ತೊಂದರೆ ಅನುಭವಿಸುವಂತಾಗುತ್ತದೆ.

ಕೃಷ್ಣಮೃಗ (ಜಿಂಕೆ)ಗಳ ಹಾವಳಿ ನರೇಗಲ್ಲ ಹೋಬಳಿಯ ಅಬ್ಬಿಗೇರಿ, ಡ.ಸ. ಹಡಗಲಿ, ಹಾಲಕೆರೆ, ಯರೇಬೇಲೇರಿ, ಜಕ್ಕಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹೆಚ್ಚಾಗಿದೆ. ಇಲ್ಲಿಯ ಜಮೀನುಗಳಿಗೆ ಬೆಳ್ಳಂಬೆಳಗ್ಗೆ ಹಾಗೂ ಸಂಜೆ 5 ರಿಂದ 6 ಗಂಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜಿಂಕೆಗಳು ಲಗ್ಗೆ ಇಟ್ಟು ಜಮೀನಿನಲ್ಲಿ ಬೆಳೆದ ಬೆಳಯನ್ನು ಸಂಪೂರ್ಣ ತಿಂದು ಹಾಕುತ್ತಿವೆ. ಇದರಿಂದಾಗಿ ಮತ್ತೆ ಮರಳಿ ಬಿತ್ತನೆ ಮಾಡಬೇಕಾದ ಅನಿವಾರ್ಯತೆಯಿಂದ ರೈತರಿಗೆ ತಲೆನೋವಾಗಿದೆ.

ಕಳೆದ ಐದಾರೂ ವರ್ಷಗಳಿಂದ ಬರಗಾಲದಿಂದ ಕಂಗೆಟ್ಟದ್ದು, ಈ ವರ್ಷ ಮುಂಗಾರು ಮಳೆ ರೈತ ಸಮುದಾಯವನ್ನು ಕೈಹಿಡಿಯುವ ಭರವಸೆ ನೀಡುತ್ತಿದೆ. ಆದರೆ, ಅಪಾರ ಪ್ರಮಾಣ ಜಿಂಕೆ ತಂಡಗಳು ಬಿತ್ತನೆ ಮಾಡಿದ ಬೀಜಗಳನ್ನು ತಿಂದು ಹಾಕುತ್ತಿವೆ. ಸಂಬಂಧಪಟ್ಟ ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ತೊಂದರೆ ಮಾಡುತ್ತಿರುವ ಜಿಂಕೆಗಳನ್ನು ಹಿಡಿದು ಸಮೀಪದ ಬಿಂಕದಕಟ್ಟಿ ಧಾಮಕ್ಕೆ ಸಾಗಿಸಿ ಬೆಳೆ ರಕ್ಷಿಸಬೇಕು ಎಂದು ಗ್ರಾಮಗಳ ರೈತರ ಮನವಿಯಾಗಿದೆ.
•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.