ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ ಆರಂಭ
Team Udayavani, Jun 14, 2019, 1:00 PM IST
ಬೆಂಗಳೂರು : ಜಿಂದಾಲ್ಗೆ ಭೂಮಿ ನೀಡುವಮೈತ್ರಿ ಸರ್ಕಾರದ ನಿರ್ಧಾರ, ಬರ ನಿರ್ವಹಣೆ ವೈಫಲ್ಯ, ರೈತರ ಸಾಲಮನ್ನಾ ವಿಫಲ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ 2 ದಿನಗಳ ಕಾಲದ ಅಹೋರಾತ್ರಿ ಧರಣಿ ಯನ್ನು ಆರಂಭಿಸಿದೆ.
ಶುಕ್ರವಾರ ಬೆಳಗ್ಗೆ ನಗರದ ಆನಂದ್ ರಾವ್ ಸರ್ಕಲ್ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ಆರಂಭಿಸಲಾಗಿದೆ. ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಧರಣಿ ಪ್ರಾರಂಭಿಸಲಾಗಿದೆ.
ಧರಣಿಯಲ್ಲಿ ಬಿಜೆಪಿಯ 105 ಶಾಸಕರು , 25 ಸಂಸದರು ಮತ್ತುಪ್ರಮುಖ ಮುಖಂಡರು ಪಾಲ್ಗೊಳ್ಳುತ್ತಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಹಿಸಿದ್ದಾರೆ.
ಬಿಜೆಪಿ ನಾಯಕರಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಕೋಟಾ ಶ್ರೀನಿವಾಸಪೂಜಾರಿ,ಸಿ.ಟಿ.ರವಿ , ಅರವಿಂದ ಲಿಂಬಾವಳಿ ಸೇರಿದಂತೆ ಶಾಸಕರು ಭಾಗಿಯಾಗಿದ್ದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಪ್ರತಿಭಟನೆ ಮುಗಿದ ಬಳಿಕ ಜೂನ್ 16 ರಂದು ಗೃಹ ಕಚೇರಿಗೆ ಕೃಷ್ಣಾಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ