ಅಧಿಕಾರಿಗಳು ರೈತರ ಸಮಸ್ಯೆ ಬಗೆಹರಿಸಲಿ

•ಆಡಳಿತಾತ್ಮಕ ತಪ್ಪಿನ ಪರಿಣಾಮ ರೈತರು ತೊಂದರೆ ಅನುಭವಿಸುವಂತಾಗಿದೆ: ಕಾಗೇರಿ

Team Udayavani, Jun 14, 2019, 3:05 PM IST

uk-tdy-3..

ಶಿರಸಿ: ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹುಲೇಕಲ್ನಲ್ಲಿ ಕೃಷಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.

ಶಿರಸಿ: ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಲಾಖೆಗಳ ಸಮನ್ವಯತೆ ಕೊರತೆಯ ಪರಿಣಾಮ ರಾಜ್ಯಾದ್ಯಂತ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಗುರುವಾರ ತಾಲೂಕಿನ ಹುಲೇಕಲ್ ಗ್ರಾಪಂ ಆವಾರದಲ್ಲಿ ತಾಲೂಕಿನಾದ್ಯಂತ ಸಂಚರಿಸಲಿರುವ ಸಮಗ್ರ ಕೃಷಿ ಅಭಿಯಾನ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಅಧಿಕಾರಿಗಳು ರೈತರ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ತೋರಬೇಕೆ ವಿನಃ ತಮ್ಮ ಆಡಳಿತಾತ್ಮಕ ತಪ್ಪಿನ ಪರಿಣಾಮವನ್ನು ರೈತರು ಅನುಭವಿಸುವಂತೆ ಆಗಬಾರದು ಎಂದರು.

ಜಿಲ್ಲಾದ್ಯಂತ ಕಳೆದ ಅವಧಿಯಲ್ಲಿ ರೈತರ ಬೆಳೆಯ ಮಾಹಿತಿ ಮತ್ತು ಚಿತ್ರಣಗಳ ಜೊತೆಗೆ ಜಿಪಿಎಸ್‌ ಮಾಡಲಾಗಿದೆ. ಆದರೆ ಪಹಣಿ ಪತ್ರಿಕೆಯಲ್ಲಿ ತದ್ವಿರುದ್ಧ ಬೆಳೆ ನಮೂದಾಗಿರುವ ಪರಿಣಾಮ ರೈತರು ಸಹಕಾರಿ ಸಂಘ ಮತ್ತು ಬ್ಯಾಂಕ್‌ ಗಳಲ್ಲಿ ಸಾಲ ಪಡೆಯಲು ತೀವ್ರ ಅನಾನುಕೂಲ ಉಂಟಾಗಿದೆ ಎಂದರು.

ರೈತರ ಬಂದೂಕು ಪರವಾನಗಿ ಪರಿಷ್ಕೃತ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಆರು ತಿಂಗಳ ಹಿಂದೆಯೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಆಗಿಲ್ಲ. ಚುನಾವಣೆ ನಿಮಿತ್ತ ಬಂದೂಕುಗಳನ್ನು ಠಾಣೆಯಲ್ಲಿ ಇಡಲಾಗಿದೆ. ಈಗ ರೈತರ ಬಳಿ ಪರವಾನಗಿ ಇಲ್ಲ ಎಂಬ ಕಾರಣಕ್ಕೆ ಬಂದೂಕುಗಳನ್ನು ಹಿಂತಿರುಗಿಸುತ್ತಿಲ್ಲ. ರೈತರು ತಮ್ಮ ಬೆಳಗೆಳನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು, ಸರ್ಕಾರ ಸಾಲಮನ್ನಾ ವಿಚಾರವಾಗಿ ರೈತರಿಂದ ಪಡೆದಿದ್ದ ಮಾಹಿತಿಗಳು ಹಾಗೂ ವಿಧಿಸಿದ್ದ ನಿಯಮಗಳ ಗೊಂದಲಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಜಿಪಂ ಸದಸ್ಯ ಜಿ.ಎನ್‌ ಹೆಗಡೆ ಮುರೇಗಾರ್‌ ಮತಾನಾಡಿ, ಇಲಾಖೆಗಳ ಸಮನ್ವಯತೆ ಸರಿಯಾಗಿದ್ದಾಗ ಮಾತ್ರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ಕೃಷಿಕರ ಎಲ್ಲ ಸಾಲಗಳು ಮನ್ನಾ ಆಗಬೇಕಿದೆ. ರೈತ ಸಮುದಾಯ ಸರ್ಕಾರಿ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದೆ. ರೈತರ ಮಕ್ಕಳ ನಗರ ಫಲಾಯನ ತಪ್ಪಿಸಲು ಸಬಲೀಕರಣ ಕಡ್ಡಾಯವಾಗಿ ಆಗಬೇಕಿದೆ ಎಂದರು.

ತಾಪಂ ಸದಸ್ಯರಾದ ನರಸಿಂಹ ಹೆಗಡೆ, ರವಿ ಹೆಗಡೆ ಹಳದೋಟ, ಸೋಂದಾ ಗ್ರಾಪಂ ಅಧ್ಯಕ್ಷ ಮಂಜುನಾಥ ಭಂಡಾರಿ, ಕೃಷಿ ಇಲಾಖೆ ಉಪನಿರ್ದೇಶಕ ನಟರಾಜ, ಶಂಕರ ಹೆಗಡೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.