ಮಂಗನ ಕಾಯಿಲೆ ಘಟಕಕ್ಕೇ ಅನಾರೋಗ್ಯ

•ಉ.ಕ. ಜಿಲ್ಲೆಗೂ ಹಣ ಬಿಡುಗಡೆಯಾಗಲಿ•ಪ್ರಸ್ತಾವನೆ ಸಲ್ಲಿಸಿದರೂ ಆಗಿಲ್ಲ ಪ್ರಯೋಜನ

Team Udayavani, Jun 14, 2019, 3:12 PM IST

uk-tdy-4..

ಹೊನ್ನಾವರ: ಮಂಗನ ಕಾಯಿಲೆ ಘಟಕ

ಹೊನ್ನಾವರ: ಜಿಲ್ಲೆಯನ್ನು ಕಾಡಿದ ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಬೇಕಾದ ಸಿದ್ಧತೆ ಮಾಡಿಕೊಳ್ಳಲು, ಆರೋಗ್ಯ ಇಲಾಖೆಯೊಂದಿಗೆ ವ್ಯವಹರಿಸಲು, ಲಸಿಕೆ ಮತ್ತು ಔಷಧ ಸಂಗ್ರಹಿಸಲು ಬಳಕೆಯಾಗುತ್ತಿದ್ದ ಜಿಲ್ಲಾ ಕೆಎಫ್‌ಡಿ ಘಟಕದ ಎರವಲು ಕಟ್ಟಡ ಅನಾರೋಗ್ಯಕ್ಕೆ ತುತ್ತಾಗಿದೆ. ಸೋರುವುದನ್ನು ತಪ್ಪಿಸಲು ಪ್ಲಾಸ್ಟಿಕ್‌ ಹೊದೆಸಲಾಗಿದೆ.

ಮಳೆ ಆರಂಭವಾದ ಮೇಲೆ ಮಂಗನ ಕಾಯಿಲೆಗೆ ವಿರಾಮ ನೀಡಿದರೂ ಮುಂದಿನ ಬೇಸಿಗೆಯಲ್ಲಿ ಅದು ಮರುಕಳಿಸದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಘಟಕ ಮೊದಲು ಡಾ| ಎಂ.ಪಿ. ಕರ್ಕಿ ಅವರ ಬಾಡಿಗೆ ಕಟ್ಟಡದಲ್ಲಿತ್ತು. ನಂತರ ಭಿಕ್ಕು ಕಾಮತ್‌ ಎಂಬ ವ್ಯಾಪಾರಿಗಳು 15ಸಾವಿರ ರೂ. ದೇಣಿಗೆ ನೀಡಿ ಸರ್ಕಾರಿ ಆಸ್ಪತ್ರೆಗೆ ಕಟ್ಟಿಸಿಕೊಟ್ಟ ಕಟ್ಟಡಕ್ಕೆ ಬಂತು. ಮಂಗನ ಕಾಯಿಲೆ ರೋಗಿಗಳಿಗೆ ಮಂಕಿಯಲ್ಲಿ ಒಂದು ವಾರ್ಡ್‌ ಕಟ್ಟಿಸಲಾಗಿತ್ತು. ಅದು ನೆಲಸಮವಾಗಿದೆ. ಈಗ ಎರವಲು ಕಟ್ಟಡಕ್ಕೂ ಅಪಾಯ ಕಾದಿದೆ. ರೀಪುಗಳು ಲಡ್ಡಾಗಿವೆ. ಹೊಸ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಹಣ ಬಿಡುಗಡೆಯಾಗಿಲ್ಲ.

ಇಲ್ಲಿ ಒಬ್ಬರು ವೈದ್ಯಾಧಿಕಾರಿಗಳು, ಇಬ್ಬರು ಸಹಾಯಕರಿದ್ದಾರೆ. ಇವರು ಮಂಗನ ಕಾಯಿಲೆ ಸಂಭವನೀಯ ಪ್ರದೇಶಕ್ಕೆ ಓಡಾಡಲು ವಾಹನ ಇಲ್ಲ. ಸಿಬ್ಬಂದಿ ಸಾಕಷ್ಟಿಲ್ಲ. ದಾಖಲೆ, ಕಾಗದ ಪತ್ರಗಳನ್ನು ಸಂಗ್ರಹಿಸಿಡಲು ವ್ಯವಸ್ಥೆ ಇಲ್ಲ.

ಈ ಮಳೆಗಾಲದಲ್ಲಿ ಜಿಲ್ಲೆ ತುಂಬ ಓಡಾಡಿ ಅಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಹಾಯದಿಂದ ಹಳ್ಳಿಯ ಜನ ತಮ್ಮ ಕೊಟ್ಟಿಗೆಯ ದನಗಳ ಉಣ್ಣಿ ನಿವಾರಣೆಗೆ ಬೇಕಾದ ಸಹಾಯ, ಔಷಧ ನೀಡಬೇಕು. ಮುಂದಿನ ವರ್ಷ ಸಂಭವನೀಯ ಪ್ರದೇಶದ ವಿವರಗಳನ್ನು ದಾಖಲಿಸಿ, ಲಸಿಕೆ, ಡಿಎಂಪಿ ತೈಲಕ್ಕೆ ಸಿದ್ಧತೆ ನಡೆಸಬೇಕು. ಮಳೆ ಮುಗಿದೊಡನೆ ಲಸಿಕೆ ನೀಡಿಕೆ ಆರಂಭವಾಗಬೇಕು. ಕಳೆದ ವರ್ಷ ಸಾಗರ ಸೀಮೆಯನ್ನು ಭೀಕರವಾಗಿ ಕಾಡಿ, ಜಿಲ್ಲೆಯ ಸಿದ್ಧಾಪುರ ಸಹಿತ ನಾಲ್ಕು ತಾಲೂಕುಗಳಲ್ಲಿ ಮುಖ ತೋರಿಸಿದ ಮಂಗನ ಕಾಯಿಲೆ ನಿಯಂತ್ರಣಕ್ಕೆ ಬೇಕಾದ ಮೂಲ ಸೌಕರ್ಯಗಳಿಲ್ಲ.

ಸಾಗರದಲ್ಲಿ ಕಾಯಿಲೆ ಹಾವಳಿ ನಡೆಸಿದಾಗ ಮುಖ್ಯಮಂತ್ರಿಗಳು 10ಕೋಟಿ ರೂ. ಮೀಸಲಿಟ್ಟಿರುವುದಾಗಿ ಹೇಳಿದ್ದರು. ನಂತರ ಸುದ್ದಿ ಇಲ್ಲ. ಲಸಿಕೆ ಎಲ್ಲಿಂದಲೋ ಬರಬೇಕು, ರಕ್ತ ತಪಾಸಣೆ ಇನ್ನೆಲ್ಲೋ ಆಗಬೇಕು. ಹೀಗಾಗಿ ಮಂಗನ ಕಾಯಿಲೆ ಸಾವು, ನೋವನ್ನು ಉಂಟುಮಾಡಿ ಭೀತಿ ಹುಟ್ಟಿಸಿತ್ತು. ಶಿವಮೊಗ್ಗ ಮಂಗನ ಕಾಯಿಲೆ ಸಂಶೋಧನಾ ಪ್ರಯೋಗಾಲಯ ಚಿಕಿತ್ಸ ಘಟಕ ಆರಂಭಿಸಲು ಸರ್ಕಾರ 5ಕೋಟಿ ರೂ. ನೀಡಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿಲ್ಲ, ಸಾಮರ್ಥ್ಯ ಹೆಚ್ಚಿಸುವ ಮಾತನ್ನೂ ಆಡಿದ್ದಾರೆ. ತುಂಬ ವರ್ಷದ ಸಂಶೋಧಯ ನಂತರ ಪುಣೆಯ ವೈರಾಣು ಸಂಶೋಧನಾ ಸಂಸ್ಥೆ ಲಸಿಕೆ ತಯಾರಿಸಿತ್ತು. ಸಾಮರ್ಥ್ಯ ಹೆಚ್ಚಿಸಲು ಇನ್ನೆಷ್ಟು ಕಾಲ ಬೇಕೋ ಗೊತ್ತಿಲ್ಲ. ಮಂಗನ ಕಾಯಿಲೆ ಆರಂಭವಾದ ಮೇಲೆ ಶಿವಮೊಗ್ಗ ಜಿಲ್ಲೆಯ ನಂತರ ಅತಿಹೆಚ್ಚು ನರಳಿದ್ದು, ಸಾವು, ನೋವು ಸಂಭವಿಸಿದ್ದು ಉತ್ತರಕನ್ನಡದಲ್ಲಿ ಎಂಬುದಕ್ಕೆ ಇಲಾಖೆಯಲ್ಲಿ ದಾಖಲೆ ಇದೆ. ಆದ್ದರಿಂದ ಆರೋಗ್ಯ ಮಂತ್ರಿಗಳು ಉತ್ತರ ಕನ್ನಡ ಜಿಲ್ಲಾ ಘಟಕ ಸುಸ್ಸಜ್ಜಿತವಾಗುವಂತೆ ಮಾಡಬೇಕು. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಪ್ರಯತ್ನಿಬೇಕು. ಮನೆಗೆ ಬೆಂಕಿಬಿದ್ದ ಮೇಲೆ ಬಾವಿ ತೋಡಿದರೆ ಪ್ರಯೋಜನವಿಲ್ಲ, ಮಂಗನ ಕಾಯಿಲೆ ಬರುವ ಮೊದಲು ಸಂಬಂಧಿಸಿದವರು ಎಚ್ಚರಾಗಬೇಕಿದೆ.

•ಜೀಯು, ಹೊನ್ನಾವರ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.