ಕಣ್ಮನ ಸೆಳೆಯುವ ಬಣ್ಣ ಬಣ್ಣದ ಕೊಡೆ


Team Udayavani, Jun 15, 2019, 5:00 AM IST

q-1

ಬಂಟ್ವಾಳ: ಬಣ್ಣ ಬಣ್ಣದ ಕೊಡೆಗಳ ರಾಶಿ ನೋಡಿ ಮಾರುಹೋಗಿ ಖರೀದಿಗೆ ಜನ ಮುಂದಾಗುತ್ತಾರೆ. ಒಂದಷ್ಟು ಚೌಕಾಶಿ ಮಾಡಿ ಬಣ್ಣದ ಕೊಡೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಬಿ.ಸಿ. ರೋಡ್‌ ಜಂಕ್ಷನ್‌ನಲ್ಲಿ ಹೆದ್ದಾರಿ ಬದಿಯಲ್ಲಿ ಕಂಡುಬಂದ ಕೊಡೆ ಗಳ ವ್ಯಾಪಾರದ ದೃಶ್ಯ.

ಬಿ.ಸಿ. ರೋಡ್‌ನ‌ಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತವು ವಿಶಾಲವಾ ಗಿದ್ದು, ಪ್ರಸ್ತುತ ಬಣ್ಣದ ಕೊಡೆಗಳ ವ್ಯಾಪಾರದಿಂದ ಜಂಕ್ಷನ್‌ಗೆ ಹೊಸ ಮೆರುಗು ಬಂದಿದೆ. ಇಲ್ಲಿ ಕಳೆದ ಕೆಲವು ದಿನಗಳಿಂದ ರಾಜಸ್ಥಾನ ಮೂಲದ ವ್ಯಾಪಾರಿಗಳು ಕೊಡೆಗಳ ವ್ಯಾಪಾರ ಮಾಡುತ್ತಿದ್ದು, ವೃತ್ತದ ಆಸುಪಾಸಿನಲ್ಲಿ 5 ಕಡೆಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ.

ಕಳೆದ 5 ವರ್ಷಗಳಿಂದ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಲ್ಲಿ ಬೇರೆ ಬೇರೆ ರೀತಿಯ ವ್ಯಾಪಾರದಲ್ಲಿ ತೊಡಗಿರುವ ಇವರು, ಮಳೆಗಾಲ ಆರಂಭದಲ್ಲಿ ಕೊಡೆಗಳ ವ್ಯಾಪಾರ ಮಾಡುತ್ತಾರೆ. ಮಂಗಳೂರಿನಲ್ಲಿ ಗಾಡಿ ತೊಳೆಯುವ ನೀರಿನ ಪೈಪ್‌, ಬ್ಯಾಗ್‌ಗಳು ಹೀಗೆ ವಿವಿಧ ವ್ಯಾಪಾರದಲ್ಲಿ ತೊಡಗುತ್ತಾರೆ. ಅವರ ತಂಡವೇ ಪ್ರಸ್ತುತ ಬಿ.ಸಿ. ರೋಡ್‌ನ‌ಲ್ಲಿ ವ್ಯಾಪಾರದಲ್ಲಿ ತೊಡಗಿದ್ದು, ಮುಂಬಯಿಯಿಂದ ಕೊಡೆ ಗಳನ್ನು ತಂದು ಮಾರಾಟ ಮಾಡುತ್ತಾರೆ.

ಬಣ್ಣಕ್ಕೆ ಮಾರು ಹೋಗುವ ಗ್ರಾಹಕರಿಂದ ಖರೀದಿ
ರಸ್ತೆ ಬದಿಯಲ್ಲಿ ಉದ್ದಕ್ಕೆ ಕೊಡೆಗಳನ್ನು ಬಿಡಿಸಿ ಇಡಲಾಗಿದ್ದು, ಅವುಗಳು ಗಾಳಿಗೆ ಹಾರದಂತೆ ಹಗ್ಗವನ್ನು ಕಟ್ಟಲಾಗಿದೆ. ಅವುಗಳ ಬಣ್ಣಕ್ಕೇ ಮಾರುಹೋಗಿ ಖರೀದಿಸುವವರಿದ್ದಾರೆ. ಎಲ್ಲ ಕೊಡೆಗಳ ಮೌಲ್ಯ 200 ರೂ. ಆಗಿದೆ.

ರೈನ್‌ಕೋಟ್‌ಗೂ ಡಿಮ್ಯಾಂಡ್‌!
ಇಲ್ಲಿ ರೈನ್‌ಕೋಟ್‌ಗಳ ವ್ಯಾಪಾರವೂ ಭರ್ಜರಿಯಾಗಿ ನಡೆಯುತ್ತಿದೆ. ಜಂಕ್ಷನ್‌ನಲ್ಲಿ ವ್ಯಾಪಾರ ಮಾಡುತ್ತಿರುವ ದಾವಣಗೆರೆ ಹರಪನಹಳ್ಳಿ ಮೂಲದ ವ್ಯಾಪಾರಿ ಸಿದ್ದಪ್ಪ ಅವರನ್ನು ಮಾತನಾಡಿಸಿದಾಗ, “ಮಳೆ ಪೂರ್ಣ ಪ್ರಮಾಣದಲ್ಲಿ ಇನ್ನೂ ಜೋರಾಗಿ ಆರಂಭ ವಾಗದ ಹಿನ್ನೆಲೆಯಲ್ಲಿ ವ್ಯಾಪಾರ ಕೊಂಚ ಕಡಿಮೆ ಇದೆ. ನಾನು ಇದೇ ಮೊದಲ ಬಾರಿಗೆ ಬಿ.ಸಿ. ರೋಡ್‌ಗೆ ಆಗಮಿಸಿದ್ದು, ಮೂರ್ತಿಗಳ ಮಾರಾಟ, ಬಟ್ಟೆ ವ್ಯಾಪಾರ ಹೀಗೆ ಸೀಸನ್‌ಗೆ ಸಂಬಂಧಿಸಿದ ವ್ಯಾಪಾರ ಮಾಡುತ್ತೇನೆ. ಈ ಹಿಂದೆ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದು, ರಾಜ್ಯಾದ್ಯಂತ ತಿರುಗಾಟ ನಡೆಸುತ್ತೇನೆ. ರೂ. 250, 300, 400… ಹೀಗೆ ಬೇರೆ ಬೇರೆ ಮೌಲ್ಯದ ರೈನ್‌ಕೋಟ್‌ಗಳಿದ್ದು, ಗ್ರಾಹಕರು ಚೌಕಾಶಿ ಮಾಡಿಯೇ ಖರೀದಿಸುತ್ತಾರೆ’ ಎಂದರು.

ಉತ್ತಮ ವ್ಯಾಪಾರ
ಕಳೆದ ಒಂದು ವಾರದಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದು, ಉತ್ತಮ ವ್ಯಾಪಾರವಾಗಿದೆ. ಪ್ರಸ್ತುತ ಇಲ್ಲಿ 5 ಕಡೆಗಳಲ್ಲಿ ಕೊಡೆಗಳನ್ನಿಟ್ಟು ಮಾರಾಟ ಮಾಡುತ್ತಿದ್ದೇವೆ. ಪ್ರತಿ ಕೊಡೆಗೂ 200 ರೂ.ನಂತೆ ಮಾರಾಟ ಮಾಡುತ್ತಿದ್ದು, ಬಹುತೇಕ ಗ್ರಾಹಕರು ಚೌಕಾಶಿ ಮಾಡಿ ಕಡಿಮೆ ದರಕ್ಕೆ ಕೇಳುತ್ತಿದ್ದು, ಕೊನೆಗೆ ಸ್ವಲ್ಪ ಡಿಸ್ಕೌಂಟ್‌ ಮಾಡಿ ಕೊಡಬೇಕಾಗುತ್ತದೆ.
– ರಿಂಕು, ಕೊಡೆಗಳ ವ್ಯಾಪಾರಿ

ಟಾಪ್ ನ್ಯೂಸ್

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.