ಆಫ್ರಿಕಾ,ಅಫ್ಘಾನ್‌ಗೆ ಗೆಲುವಿನ ಗುರಿ

ರಶೀದ್‌-ಪ್ಲೆಸಿಸ್‌ ಆಕರ್ಷಣೆ

Team Udayavani, Jun 15, 2019, 5:40 AM IST

de-cock

ಲಂಡನ್‌: ಈ ಬಾರಿಯ ವಿಶ್ವಕಪ್‌ನಲ್ಲಿ ತೀರ ಕಳಪೆ ಪ್ರದರ್ಶನ ತೋರಿದ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ಥಾನ ಶನಿವಾರ ಕಾರ್ಡಿಫ್ನಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ.

ಅಫ್ಘಾನಿಸ್ಥಾನ ಆಡಿದ 3 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 4 ಪಂದ್ಯಗಳಲ್ಲಿ 3 ಪಂದ್ಯ ಸೋತು ಒಂದು ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಕೇವಲ 1 ಅಂಕ ಸಂಪಾದಿಸಿದೆ. ಕೊನೆಯ ಪಕ್ಷ ಈ ಪಂದ್ಯವನ್ನಾದರೂ ಗೆದ್ದು ಗೆಲುವಿನ ಹಳಿ ಏರಲು ದಕ್ಷಿಣ ಆಫ್ರಿಕಾ ಎದುರು ನೋಡುತ್ತಿದೆ.
ಮುಂದಿನ ಹಂತಕ್ಕೇರಲು ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಇಲ್ಲಿ ಗೆಲುವಿನ ಖಾತೆ ತೆರೆದರೆ ಮಾತ್ರ ಮುನ್ನಡೆ ಯುವ ಅವಕಾಶ ಜೀವಂತವಾಗಿರಿಸಲು ಸಾಧ್ಯ. ಉಭಯ ತಂಡಗಳ ಬಲಾಬಲವನ್ನು ಗಮನಿಸಿದರೆ ಬಲಿಷ್ಠ ತಂಡವಾಗಿರುವ ದ. ಆಫ್ರಿಕಾ ಗೆಲ್ಲುವ ಫೇವರಿಟ್‌ ತಂಡವೆನಿಸಿದೆ.

ದ. ಆಫ್ರಿಕಾ ಕೈ ಹಿಡಿಯದ ಲಕ್‌
ದಕ್ಷಿಣ ಆಫ್ರಿಕಾ ತಂಡ ಹೆಚ್ಚು ಬಲಿಷ್ಠವಾಗಿದ್ದರೂ ಏನನ್ನೂ ಸಾಧಿಸದೇ ಹೋದ ತಂಡವಾಗಿ ಈ ಬಾರಿಯ ವಿಶ್ವಕಪ್‌ ಕೂಟದಲ್ಲಿ ಗುರುತಿಸಿಕೊಂಡಿದೆ. ತಂಡದ ಯಾವುದೇ ಬ್ಯಾಟ್ಸ್‌ ಮನ್‌ ಮಿಂಚುತ್ತಿಲ್ಲ ಎಂಬುದೇ ಅಚ್ಚರಿ. ಡಿ ಕಾಕ್‌, ಡು ಪ್ಲೆಸಿಸ್‌, ಆಮ್ಲ, ಡುಸೆನ್‌ ಅವರೆಲ್ಲ ಸಿಡಿದು ನಿಂತರಷ್ಟೇ ಆಫ್ರಿಕಾದ ಮೇಲೆ ನಂಬಿಕೆ ಇಡಬಹುದು. ಇನ್ನೂ ಬೌಲಿಂಗ್‌ ವಿಭಾಗದಲ್ಲಿ ಇಮ್ರಾನ್‌ ತಾಹಿರ್‌, ರಬಾಡ ಘಾತಕ ಬೌಲಿಂಗ್‌ ದಾಳಿ ನಡೆಸುತ್ತಿಲ್ಲ. ಡೇಲ್‌ ಸ್ಟೇನ್‌ ಗಾಯಾಳಾಗಿ ಹೊರಬಿದ್ದದ್ದು, ಲುಂಗಿ ಎನ್‌ಗಿಡಿ ಇನ್ನೂ ಚೇತರಿಸದಿರುವುದು ಬೌಲಿಂಗ್‌ ವಿಭಾಗವನ್ನು ದುರ್ಬಲಗೊಳಿಸಿದೆ ಎನ್ನಬಹುದು. ಇದನ್ನೆಲ್ಲ ಮರೆತು ಮತ್ತೆ ಗೆಲುವಿನ ಹಾದಿ ಹಿಡಿಯಲು ಪ್ಲೆಸಿಸ್‌ ಪಡೆ ಸಂಪೂರ್ಣ ಯೋಜನೆಯೊಂದಿಗೆ ಮೈದಾನಕ್ಕಿಳಿಯಬೇಕಾಗಿದೆ.

ಅಫ್ಘಾನ್‌ಗೆ ರಶೀದ್‌- ನಬಿ ಬಲ
ಬ್ಯಾಟಿಂಗ್‌ ಲೈನ್‌ಅಪ್‌ ಕೈಕೊಡುತ್ತಿರುವುದು ಅಫ್ಘಾನಿಸ್ಥಾನಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. ಅಗ್ರ ಕ್ರಮಾಂಕದ ಆಟಗಾರರು ಇನ್ನೂ ಬ್ಯಾಟಿಂಗ್‌ ಜೋಶ್‌ ತೋರುವಲ್ಲಿ ವಿಫ‌ಲವಾಗಿದ್ದಾರೆ. ಈ ಪಂದ್ಯದಲ್ಲಾದರೂ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದೇ ಆದರೆ ತಂಡ ಬೃಹತ್‌ ರನ್‌ ಪೇರಿಸುವಲ್ಲಿ ಅನುಮಾನವಿಲ್ಲ .

ಬೌಲಿಂಗ್‌ನಲ್ಲಿ ಸ್ಪಿನ್‌ ವಿಭಾಗ ಹೆಚ್ಚು ಘಾತಕ. ರಶೀದ್‌-ನಬಿ ಜೋಡಿಯನ್ನು ನಿಭಾಯಿಸುವುದು ಸುಲಭವಲ್ಲ. ಆದರೆ ವೇಗದ ಬೌಲಿಂಗ್‌ ಸಾಧಾರಣ ಮಟ್ಟದಲ್ಲಿದೆ. ಒಟ್ಟಾರೆಯಾಗಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ತೋರಿದ್ದೇ ಆದಲ್ಲಿ ಅಫ್ಘಾನ್‌ ಮೇಲುಗೈ ಸಾಧಿಸುವುದರಲ್ಲಿ ಅನುಮಾನವಿಲ್ಲ ಎನ್ನಬಹುದು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.