ಕಚೇರಿ ನೀಡುವ ಅಧಿಕಾರವಿಲ್ಲ; ಸಂಸದರ ಪತ್ರಕ್ಕೆ ಸ್ಪಷ್ಟನೆ
Team Udayavani, Jun 15, 2019, 3:00 AM IST
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್ ಅವರ ಬಳಸುತ್ತಿದ್ದ ಸಂಸದರ ಕಚೇರಿಯ ಬದಲಿಗೆ ತನಗೆ ಹೊಸ ಕಚೇರಿ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದು, ಸಂಸದರಿಗೆ ಕಚೇರಿ ನೀಡುವ ಅಧಿಕಾರ ಪಾಲಿಕೆಗಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಜಯನಗರ ಸೌತ್ಎಂಡ್ ವೃತ್ತದಲ್ಲಿ ಕೇಂದ್ರ ಮಾಜಿ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ಅವರಿಗೆ ಸಂಸದರ ಕಚೇರಿಯನ್ನು ಪಾಲಿಕೆಯ ಕಟ್ಟಡದಲ್ಲಿ ನೀಡಲಾಗಿದೆ. ಆದರೆ, ತೇಜಸ್ವಿ ಸೂರ್ಯ ಅವರು, ತನಗೆ ಅನಂತಕುಮಾರ್ ಅವರಿಗೆ ನೀಡಿದ ಸಂಸದರ ಕಚೇರಿ ಬೇಡ, ಜಯನಗರದ ಶಾಲಿನಿ ಗ್ರೌಂಡ್ಸ್ ಎದುರಿನ ಪಾಲಿಕೆಯ ಕಟ್ಟಡದಲ್ಲಿ ಕಚೇರಿ ನೀಡುವಂತೆ ಪತ್ರ ಬರೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಸಂಸದರು, ರಾಜ್ಯಸಭಾ ಸದಸ್ಯರಿಗೆ ರಾಜ್ಯ ಸರ್ಕಾರವೇ ಕಚೇರಿಯನ್ನು ನೀಡುತ್ತದೆ. ಆದರೆ, ತೇಜಸ್ವಿ ಸೂರ್ಯ ಅವರು ಪಾಲಿಕೆಯ ಕಟ್ಟಡದಲ್ಲಿ ಕಚೇರಿ ನೀಡುವಂತೆ ಪತ್ರ ಬರೆದಿದ್ದು, ಪಾಲಿಕೆಗೆ ಕಚೇರಿ ನೀಡುವ ಅಧಿಕಾರವಿಲ್ಲ. ಹೀಗಾಗಿ ಈ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಂಸದರು ಕೇಳುತ್ತಿರುವ ಕಟ್ಟಡದ ಹಿನ್ನೆಲೆ: ಜಯನಗರದ ಶಾಲಿ ಮೈದಾನಗಳ ಮುಂದಿರುವ ಪಾಲಿಕೆಯ ಕಟ್ಟಡವನ್ನು ಶಿಕ್ಷಣ ಟ್ರಸ್ಟ್ಗೆ ಐದು ವರ್ಷಗಳ ಭೋಗ್ಯಕ್ಕೆ ನೀಡಲಾಗಿತ್ತು. ಇದೀಗ ಐದು ವರ್ಷಗಳು ಮುಗಿದ ಹಿನ್ನೆಲೆಯಲ್ಲಿ ಕಟ್ಟಡವನ್ನು ಪಾಲಿಕೆಗೆ ಹಸ್ತಾಂತರ ಮಾಡುವಂತೆ ಟ್ರಸ್ಟ್ಗೆ ನೋಟಿಸ್ ನೀಡಲಾಗಿತ್ತು. ಅದನ್ನು ಪ್ರಶ್ನಿಸಿ ಟ್ರಸ್ಟ್ ನ್ಯಾಯಾಲಯದ ಮೆಟ್ಟಿರೇಲಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕಾನೂನಿನ ಪ್ರಕಾರ ಕ್ರಮಕೈಗೊಳ್ಳುವಂತೆ ಪಾಲಿಕೆಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿತ್ತು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.
ಕಟ್ಟಡ ಪಡೆಯುವುದರ ಹಿಂದಿನ ಉದ್ದೇಶವೇನು?: ಪಾಲಿಕೆಯ ಕಟ್ಟಡವನ್ನು ಭೋಗ್ಯಕ್ಕೆ ಪಡೆದಿರುವ ಶಿಕ್ಷಣ ಟ್ರಸ್ಟ್ ಬಿಜೆಪಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಇದೇ ಕಾರಣದಿಂದ ಹಿಂದೆ ಶಾಕಸರಾಗಿದ್ದ ವಿಜಯಕುಮಾರ್ ಅವರು ಕಟ್ಟಡವನ್ನು ಟ್ರಸ್ಟ್ಗೆ ಕೊಡಿಸಿದ್ದರು. ಆದರೀಗ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ಹಿಂಪಡೆಯುವ ಪ್ರಯತ್ನಗಳು ನಡೆದಿವೆ. ಆ ಹಿನ್ನೆಲೆಯಲ್ಲಿ ಟ್ರಸ್ಟ್ಗೆ ಸಹಾಯ ಮಾಡುವ ಉದ್ದೇಶದಿಂದ ನೂತನ ಸಂಸದರು ಇದೇ ಕಟ್ಟಡದಲ್ಲಿ ತಮಗೆ ಕಚೇರಿ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ