ನಾಡಿದ್ದು ವೈದ್ಯರ ಮುಷ್ಕರ
Team Udayavani, Jun 15, 2019, 6:00 AM IST
ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜೂ. 17ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಅಂದು ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯವಿರುವುದಿಲ್ಲ.
ಕೋಲ್ಕತಾದಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ವೈದ್ಯರು ನಡೆಸುತ್ತಿರುವ ಮುಷ್ಕರ 4ನೇ ದಿನ ಪೂರೈಸಿದ್ದು, ಬೆಂಗಳೂರು ಸಹಿತ ದೇಶದ ಇತರೆಡೆಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಶನಿವಾರ ಮತ್ತು ರವಿವಾರ ದೇಶಾದ್ಯಂತ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಲಿದ್ದಾರೆ. ಜತೆಗೆ ಧರಣಿ ಮತ್ತು ಮೌನ ಮೆರವಣಿಗೆಗಳನ್ನು ಕೈಗೊಳ್ಳಲಿದ್ದಾರೆ. ಸೋಮವಾರದಂದು ಒಪಿಡಿ (ಹೊರರೋಗಿಗಳ ವಿಭಾಗ) ಸಹಿತ ತುರ್ತು ಸೇವೆಗಳಲ್ಲದ ಎಲ್ಲ ಸೇವೆಗಳೂ ಬೆಳಗ್ಗೆ 6ರಿಂದ 24 ಗಂಟೆಗಳ ಕಾಲ ಸ್ಥಗಿತಗೊಳ್ಳಲಿವೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ ಎಂದು ಐಎಂಎ ತಿಳಿಸಿದೆ. ಈ ಮುಷ್ಕರದಲ್ಲಿ 3.5 ಲಕ್ಷ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ