ಅನುಭವ ಮಂಟಪಕ್ಕೆ ಸಿಕ್ಕೀತೆ ಅನುದಾನ?

ಉಜಳಂಬಕ್ಕೆ ಸಿಎಂ ಬಂದಾಗ ಬಸವಕಲ್ಯಾಣಕ್ಕೆ ಕೊಡುಗೆ ನೀಡುವ ನಿರೀಕ್ಷೆ

Team Udayavani, Jun 15, 2019, 10:34 AM IST

15-June-6

ಬಸವಕಲ್ಯಾಣ: ನಗರದ ಹೊರವಲಯದಲ್ಲಿರುವ ಇಗಿನ ಅನುಭವ ಮಂಟಪ.

ವೀರಾರೆಡ್ಡಿ ಆರ್‌.ಎಸ್‌.
ಬಸವಕಲ್ಯಾಣ:
ಉಜಳಂಬ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೂ.27ರಂದು ಗ್ರಾಮ ವಾಸ್ತವ್ಯ ಮಾಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶರಣರ ನಾಡು, ವಿಶ್ವಗುರು ಬಸವಣ್ಣನವರ ಕರ್ಮಭೂಮಿಯಾದ ಬಸವಕಲ್ಯಾಣಕ್ಕೆ ಏನಾದರೂ ಕೊಡುಗೆ ನೀಡಬಹುದಾ ಎಂಬ ನಿರೀಕ್ಷೆಯನ್ನು ಇಲ್ಲಿನ ಜನರು ಇಟ್ಟುಕೊಂಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ವಿವಿಧ ಪಕ್ಷಗಳ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಆಗಮಿಸಿ ಅನುಭವ ಮಂಟಪ ಕುರಿತು ನೀಡಲಾದ ಭರವಸೆಗಳನ್ನು ಇಂದಿಗೂ ಈಡೇರಿಸದೇ ಮರೆತು ಬಿಟ್ಟಿರುವುದು ಬಸವಾಭಿಮಾನಿಗಳು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಅನುಭವ ಮಂಟಪಕ್ಕೆ ಆಗಮಿಸುತ್ತಾರೆ ವಿನಃ ನಿಸ್ವಾರ್ಥದಿಂದ ಸಮಾಜದಲ್ಲಿನ ತೊಡಕುಗಳನ್ನು ಹೋಗಲಾಡಿಸಲು ತಮ್ಮ ಪ್ರಾಣವನ್ನೆ ತ್ಯಾಗ ಮಾಡಿದ ಶರಣ-ಶರಣೆಯರ ಪವಿತ್ರ ಭೂಮಿ ಅಭಿವೃದ್ಧಿ ಮಾಡಲು ಅಲ್ಲ ಎಂಬುದು ಜನರ ಆರೋಪವಾಗಿದೆ.

ಈಗಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಸವಕಲ್ಯಾಣದ ಶರಣ ಕಮ್ಮಟ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದರೆ, ಅನುಭವ ಮಂಟಪದ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂಬ ಭರವಸೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ವರ್ಷ ಕಳೆಯುತ್ತ ಬಂದರೂ, ಅನುಭವ ಮಂಟಕ್ಕೆ ಭೇಟಿ ನೀಡದಿರುವುದು ಸಾಹಿತಿ, ಚಿಂತಕರು ಹಾಗೂ ಬಸವ ಭಕ್ತರಿಗೆ ಬೇಸರ ತರಿಸಿದೆ.

ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ 650 ಕೋಟಿ ರೂ. ನೀಡುವುದಾಗಿ ರಾಜ್ಯದಲ್ಲಿ ಈ ಹಿಂದೆ ಇದ್ದ ಕಾಂಗ್ರೆಸ್‌ ಸರ್ಕಾರದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿರುವುದು ಎಲ್ಲರಿಗೆ ಗೊತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಎರಡು ಬಾರಿ ಬಜೆಟ್ ಮಂಡಿಸಿದರೂ, ಅದರಲ್ಲಿ ಕೇವಲ 100 ಕೋಟಿ ರೂ. ಘೋಷಣೆ ಮಾಡಿದ್ದರು. ಘೋಷಣೆ ಮಾಡಲಾದ ಅನುದಾನದಲ್ಲಿ ಇಂದಿಗೂ ಒಂದು ಪೈಸೆ ಕೂಡ ಬಿಡುಗಡೆ ಮಾಡದಿರುವುದು ಎಲ್ಲರ ಮನಸ್ಸು ಕೆರಳಿಸುವಂತೆ ಮಾಡಿದೆ.

ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ನೂತನ ಅನುಭವ ಮಂಟಪದ ಶಂಕು ಸ್ಥಾಪನೆಗೆ ಮತ್ತು ಶರಣರ ಸ್ಮಾರಕ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಅನುದಾನ ಘೋಷಣೆ ಮಾಡುತ್ತಾರೊ ಎಂಬುದನ್ನು ಕಾದು ನೋಡಬೇಕಾಗಿದೆ.

ಅನುಭವ ಮಂಟಪ ವೈಚಾರಿಕ ಜಗತ್ತಿನ, ಬೌದ್ಧಿಕ ಲೋಕದ ಹಾಗೂ ಭಾರತೀಯ ದಾರ್ಶನಿಕತೆಯ ಭಿತ್ತಿಯಾಗಿದೆ. ಶರಣ ಚಳವಳಿ, ವಚನ ಸಾಹಿತ್ಯ ಹಾಗೂ ಅನುಭವ ಮಂಟಪ ಕನ್ನಡ ಸಾಂಸ್ಕೃತಿಕತೆಯ ಅಸ್ಮಿತೆ ಯಾಗಿವೆ. ಇದರ ಪುನರ್‌ ನಿರ್ಮಾಣದಿಂದ ಶರಣರ ತಾತ್ವಿಕತೆಗೆ ಜಾಗತಿಕ ತತ್ವಶಾಸ್ತ್ರದಲ್ಲಿ ಹಾಗೂ ಬೌದ್ಧಿಕ ವಲಯದಲ್ಲಿ ಪ್ರಾಧಾನ್ನತೆ ಸಿಗುವ ಸಾಧ್ಯತೆ ಇದೆ. ಈ ಬಗೆಗೆ ಸರ್ಕಾರದ ಕಾಳಜಿ ಅಗತ್ಯ.
ಡಾ| ಭೀಮಾಶಂಕರ ಬಿರಾದಾರ್‌,
ಉಪನ್ಯಾಸಕರು

ನಿಯೋಜಿತ ಅನುಭವ ಮಂಟಪದ ಕಾರ್ಯ ಪೂರ್ಣಗೊಂಡರೆ, ಬಸವಕಲ್ಯಾಣಕ್ಕೆ ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರದ ಮನ್ನಣೆ ದೊರೆಯುತ್ತದೆ. ನಮ್ಮ ಸರ್ಕಾರಗಳು ಅನುದಾನ ನೀಡುವ ವಾಗ್ಧಾನ ಪೂರೈಸುತ್ತವೆ ಎಂಬ ಆಶೆ ಈಗಲು ಇದೆ.
ದೇವೇಂದ್ರ ಬರಗಾಲೆ,
ಕಾರ್ಯದರ್ಶಿ ಲಿಗಾಡೆ ಪ್ರತಿಷ್ಠಾನ

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.