ಡಿಗ್ರಿ ಕಾಲೇಜು ಆರಂಭಕ್ಕೆ ಮೀನಮೇಷ

ಮನವಿಗೆ ಸ್ಪಂದಿಸದ ಜನಪ್ರತಿನಿಧಿಗಳು •ಸಂತ್ರಸ್ತರ ಮಕ್ಕಳಿಗೆ ಪದವಿ ಶಿಕ್ಷಣ ಮರೀಚಿಕೆ

Team Udayavani, Jun 15, 2019, 10:54 AM IST

15-June-8

ಆಲಮಟ್ಟಿ: ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು ಆರಂಭಿಸಲು ಪರಿಶೀಲನೆ ನಡೆಸುವಂತೆ ಧಾರವಾಡ ಜಂಟಿ ಆಯುಕ್ತರಿಂದ ಬಂದಿರುವ ಪತ್ರ.

•ಶಂಕರ ಜಲ್ಲಿ
ಆಲಮಟ್ಟಿ:
ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರ ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ಆಲಮಟ್ಟಿಯಲ್ಲಿ ಸರ್ಕಾರಿ ಡಿಗ್ರಿ ಕಾಲೇಜು ಆರಂಭಿಸಲು ದಶಕಗಳಿಂದಲೂ ಮನವಿ ಮಾಡುತ್ತ್ತ ಬಂದರೂ ಜನ ಪ್ರತಿನಿಧಿಗಳು ಕ್ಯಾರೇ ಎನ್ನದಿರುವುದರಿಂದ ಸಂತ್ರಸ್ತರ ಮಕ್ಕಳ ಭವಿಷ್ಯ ತೂಗುಯ್ನಾಲೆಯಂತಾಗಿದೆ.

ದೇಶದ ಬೃಹತ್‌ ನೀರಾವರಿ ಯೋಜನೆಗಳಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನವಾಗಿರುವ ಆಲಮಟ್ಟಿಯಲ್ಲಿ ಸಂತ್ರಸ್ತರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರಿ ಡಿಗ್ರಿ ಕಾಲೇಜು ಆರಂಭಿಸಲು 2008ರಲ್ಲಿ ಆಗಿನ ಉನ್ನತ ಶಿಕ್ಷಣ ಸಚಿವರಾಗಿದ್ದ ಅರವಿಂದ ಲಿಂಬಾವಳಿಯವರಲ್ಲಿ ಮನವಿ ಮಾಡಲಾಗಿತ್ತು. ಇದರಿಂದ ಸ್ವತಃ ಮುಳುಗಡೆ ಸಂತ್ರಸ್ತರೂ ಆಗಿದ್ದ ಅರವಿಂದ ಲಿಂಬಾವಳಿಯವರು ಸಂತ್ರಸ್ತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತ ಆಗಬಾರದೆಂದು ಆಲಮಟ್ಟಿಯಲ್ಲಿ ಸರ್ಕಾರಿ ಡಿಗ್ರಿ ಕಾಲೇಜು ಆರಂಭಿಸಲು ಸಂಬಂಧಿತ ಇಲಾಖೆಗೆ ಆದೇಶ ಮಾಡಿದ್ದರು.

ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು ಆರಂಭಿಸಲು ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ಮಾಡಿ ಗ್ರಾಪಂ ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಭಿಪ್ರಾಯ ಸೇರಿದಂತೆ ಎಲ್ಲವನ್ನೂ ಕ್ರೋಢೀಕರಿಸಿಕೊಂಡು ಅದಕ್ಕೆ ಸಂಬಂಧಿಸಿದ ಒಪ್ಪಿಗೆ ಪತ್ರಗಳನ್ನೂ ಪಡೆದುಕೊಂಡು ಹೋದರು. ಅಷ್ಟರಲ್ಲಾಗಲೇ ಲಿಂಬಾವಳಿಯವರ ಸಚಿವ ಖಾತೆ ಬದಲಾಗಿತ್ತು, ನಂತರ ಬಂದ ಸಚಿವರೂ ಕೂಡ ಇದರ ಬಗ್ಗೆ ಆಸಕ್ತಿ ಹೊಂದಿದ್ದರು. ಆದರೆ ಅಧಿಕಾರಿಗಳು ಮಾತ್ರ ವರದಿ ನೀಡುವುದನ್ನು ವಿಳಂಬ ಮಾಡಿದ್ದರ ಪರಿಣಾಮ 2019-20ನೇ ಶೈಕ್ಷಣಿಕ ವರ್ಷ ಆರಂಭವಾದರೂ ಇನ್ನುವರೆಗೆ ಡಿಗ್ರಿ ಕಾಲೇಜು ಸಂತ್ರಸ್ತರ ಮಕ್ಕಳಿಗೆ ಗಗನ ಕುಸುಮವಾಗಿದೆ.

ಆಲಮಟ್ಟಿಯು ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ, ವಿವಿಧ ಉದ್ಯಾನಗಳು ಹಾಗೂ ಸುತ್ತಲಿನ ಸುಮಾರು ಗ್ರಾಮೀಣ ಪ್ರದೇಶಗಳಿಗೆ ಕೇಂದ್ರ ಸ್ಥಾನದಲ್ಲಿದೆಯಲ್ಲದೇ ಪಟ್ಟಣಕ್ಕೆ ರೈಲ್ವೆ ಸಂಪರ್ಕವಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳನ್ನು ಹೊಂದಿದ್ದು ನಿತ್ಯ ನೂರಾರು ಸರ್ಕಾರಿ ಬಸ್‌ಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ವಾಹನಗಳು ಸಂಚರಿಸುತ್ತವೆ.

ಹೀಗೆ ಉನ್ನತ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಾಗಿರುವ ಸರ್ಕಾರಿ ಕಟ್ಟಡಗಳು ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದರೂ ಸರ್ಕಾರ ಡಿಗ್ರಿಕಾಲೇಜು ಆರಂಭ ಮಾಡದೇ ಮೀನಮೇಷ ಎಣಿಸುತ್ತಿರುವುದೇಕೆ ಎಂದು ನಾಗರಿಕರು ಪ್ರಶ್ನಿಸುವಂತಾಗಿದೆ.

ದಿನಗೂಲಿಗಳಾದ ಮಕ್ಕಳು: ಸುಮಾರು 192 ಗ್ರಾಮಗಳು ಕೃ.ಮೇ.ಯೋಜನೆಯಿಂದ ಭಾದಿತಗೊಂಡು ಲಕ್ಷಾಂತರ ಎಕರೆ ಜಮೀನು ಕಳೆದುಕೊಂಡ ಸುಮಾರು 4 ಲಕ್ಷ ಸಂತ್ರಸ್ತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ದೊರೆಯದೇ ಬೆಂಗಳೂರು, ಪುಣೆ, ಮುಂಬೈಯಂತಹ ನಗರಗಳಿಗೆ ವಲಸೆ ಹೋಗಿ ಹಮಾಲಿ ಮಾಡುವಂತಾಗಲು ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಯೇ ಕಾರಣ ಎನ್ನುತ್ತಾರೆ ಶಿವಾನಂದ.

ಡೋನೇಶನ್‌: ಮುಳುಗಡೆ ಹೊಂದಿ ಪುನರ್ವಸತಿ ಕೇಂದ್ರಗಳಾಗಿರುವ ಗ್ರಾಮಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿವೆ. ಆದರೆ ಡಿಗ್ರಿ ಕಾಲೇಜುಗಳು ಇಲ್ಲದಿರುವುದರಿಂದ ಖಾಸಗಿ ಶಾಲೆಗಳಲ್ಲಿ ವಿಪರೀತವಾಗಿ ಡೊನೇಶನ್‌ ಪಡೆಯುತ್ತಿದ್ದು ಸಂತ್ರಸ್ತರ ಮಕ್ಕಳು ಉನ್ನತ ವ್ಯಾಸಂಗ ಮಾಡದೇ ದಿನಗೂಲಿ ಕಾರ್ಮಿಕ, ಟ್ರ್ಯಾಕ್ಟರ್‌ ಡ್ರೈವರ್‌, ಟಿಪ್ಪರ್‌ ಡ್ರೈವರ್‌ ಉದ್ಯೋಗ ಅರಸಿಕೊಂಡು ಹೋಗುವಂತಾಗಿದೆ.

ಈ ಕ್ಷೇತ್ರದ ಶಾಸಕರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದಾರಲ್ಲದೇ ಸಂತ್ರಸ್ತರ ನೋವನ್ನು ಹತ್ತಿರದಿಂದ ಕಂಡವರಾಗಿದ್ದಾರೆ. ಇವರಾದರೂ ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು ಆರಂಭಿಸಲು ಪ್ರಯತ್ನಿಸುತ್ತಾರಾ ಕಾದು ನೋಡಬೇಕು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.