ರಸ್ತೆ ಪಕ್ಕವೇ ಕಾಡುಕೋಣದ ಠಿಕಾಣಿ!

ಹುಲಿಕಲ್ ಘಾಟಿಯಲ್ಲಿ ಸ್ವಚ್ಚಂದವಾಗಿ ಹುಲ್ಲು ಮೇಯುತ್ತಿರುವ ದೃಶ್ಯ ಸೆರೆ

Team Udayavani, Jun 15, 2019, 12:00 PM IST

15-June-14

ಹೊಸನಗರ: ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಎದುರಾದ ಕಾಡುಕೋಣ.

ಕುಮುದಾ ಬಿದನೂರು
ಹೊಸನಗರ:
ಹುಲಿಕಲ್ ಘಾಟ್ ರಸ್ತೆಯಲ್ಲಿ ಕಾಡುಕೋಣ ಇದೆ. ಅದೇನೂ ಮಾಡಲ್ಲ. ಸ್ವಲ್ಪ ಜಾಗ್ರತೆ ಎನ್ನುತ್ತಾ ಬೇರೆ ವಾಹನ ಸವಾರರಿಗೆ ತಿಳಿ ಹೇಳಿ ಹೋಗುವುದು ಈ ಪ್ರದೇಶದಲ್ಲಿ ಮಾಮಾಲು ಎನಿಸಿ ಬಿಟ್ಟಿದೆ.

ಹೌದು ರಾಜ್ಯದ ಪ್ರಮುಖ ಘಾಟ್ ಸಂಪರ್ಕಗಳಲ್ಲಿ ಒಂದಾದ ಹುಲಿಕಲ್ ಘಾಟ್‌ನಲ್ಲಿ ಕಳೆದ ಮೂರು ತಿಂಗಳಿಂದ ಕಾಡುಕೋಣ ರಸ್ತೆ ಅಕ್ಕಪಕ್ಕದಲ್ಲಿ ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದೆ. ಕೆಲವೊಮ್ಮೆ ರಸ್ತೆ ಮೇಲೆ, ಇನ್ನೊಮ್ಮೆ ರಸ್ತೆ ಅಕ್ಕಪಕ್ಕದಲ್ಲಿ ಹುಲ್ಲು ಮೇಯುತ್ತಿರುವ ಕಾಡುಕೋಣ ಬಹಳಷ್ಟು ಜನರಿಗೆ ಕಾಣಿಸಿಕೊಂಡಿದೆ. ಹೀಗಾಗಿ ಪ್ರತಿನಿತ್ಯ ಆ ಮಾರ್ಗದಲ್ಲಿ ಸಂಚರಿಸುವವರು ಸ್ವಲ್ಪ ಎಚ್ಚರಿಕೆ ವಹಿಸುತ್ತಾರೆ. ಅಪರಿಚಿತರು ಸಿಕ್ಕರೆ ಅವರಿಗೂ ಜಾಗ್ರತೆ ಹೇಳುತ್ತಾರೆ.

ಶಿವಮೊಗ್ಗ ಹೊಸನಗರದಿಂದ ಉಡುಪಿ ಜಿಲ್ಲೆ ಸಂಪರ್ಕಿಸುವ ಮಾರ್ಗ ಹುಲಿಕಲ್ ಘಾಟಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಇಲ್ಲಿ ಕಾಡುಪ್ರಾಣಿಗಳು, ವನ್ಯಜೀವಿಗಳು ಸಂಚರಿಸುವುದು ಮಾಮೂಲಿ. ಆದರೆ ಇತ್ತೀಚೆಗೆ ಒಂಟಿ ಕಾಡುಕೋಣ ಒಂದೇ ಕಡೆ ಠಿಕಾಣಿ ಹೂಡಿರುವುದು ಘಾಟ್ ರಸ್ತೆಯಲ್ಲಿ ಸಂಚರಿಸುವವರು ಕೊಂಚ ಗಲಿಬಿಲಿಗೊಳ್ಳುವಂತಾಗಿದೆ.

ತೊಂದರೆ ನೀಡದ ಕಾಡುಕೋಣ
ಹುಲಿಕಲ್ ಘಾಟಿ ರಸ್ತೆ ಅಕ್ಕಪಕ್ಕದಲ್ಲಿ ಬೀಡು ಬಿಟ್ಟಿರುವ ಕಾಡುಕೋಣ ದಿನವೂ ಘಾಟಿ ರಸ್ತೆಗೆ ಲಗ್ಗೆ ಇಡುತ್ತಿದೆ. ಸಂಜೆ ವೇಳೆಗೆ ಕಾಡುಕೋಣ ಸಂಚರಿಸುವುದು ಸಾಮಾನ್ಯವಾದರೂ ಇಲ್ಲಿ ಹಗಲು ವೇಳೆಯೇ ಕೋಣ ತಿರುಗಾಡುತ್ತಿರುತ್ತದೆ. ರಸ್ತೆ ಮಾರ್ಗಕ್ಕೆ ಧುತ್ತೆಂದು ಧುಮುಕುವ ಕೋಣ ಅಲ್ಲೇ ಲಂಗು ಲಗಾಮು ಇಲ್ಲದೆ ಠಿಕಾಣಿ ಹೂಡುತ್ತದೆ. ಒಮ್ಮೊಮ್ಮೆ ಮಧ್ಯರಾತ್ರಿ, ಬೆಳಗ್ಗಿನ ಜಾವ ರಸ್ತೆಯಲ್ಲಿರುತ್ತದೆ. ಆದರೆ ಜನರೇ ಬರಲಿ, ವಾಹನಗಳೇ ಬರಲಿ ತಾನು ಮಾತ್ರ ಸ್ವಚ್ಚಂದವಾಗಿ ಹುಲ್ಲು ಮೇಯುತ್ತಲೇ ಇರುತ್ತದೆ. ಈತನಕ ಯಾರ ತಂಟೆಗೂ ಬಂದ ಮಾಹಿತಿ ಇಲ್ಲ.

ಹನಿ ಹಂದೊಲ್ಲ: ರಸ್ತೆ ಮಧ್ಯೆ ನಿಂತುಕೊಂಡ ಕಾಡುಕೋಣ ಎಷ್ಟೇ ಹಾರನ್‌ ಮಾಡಿದರೂ ಹನಿ ಹಂದುವುದಿಲ್ಲ. ಬೆಳಕು ಬಿಟ್ಟರೂ ಹೋಗಲ್ಲ. ಕಾಡುಕೋಣ ಎಂದರೆ ಮೊದಲೇ ಹೆದರಿಕೆ. ಎದುರೇ ನಿಂತು ಗುಟುರು ಹೊಡೆದರೆ ಜೀವವೇ ಕೈಗೆ ಬರುತ್ತೆ. ಘಾಟ್ ಮಾರ್ಗದಲ್ಲಿ ಓಡಾಡುವಾಗ ಎರಡು ಬಾರಿ ನೋಡಿದ್ದೇನೆ ಒಮ್ಮೆ ರಸ್ತೆ ಪಕ್ಕದಲ್ಲಿತ್ತು. ಇನ್ನೊಮ್ಮೆ ರಸ್ತೆ ಮೇಲೆಯೇ ನಿಂತಿತ್ತು. ಸುಮಾರು ಅರ್ಧಗಂಟೆ ಕಾದು ಕಾಡುಕೋಣ ಪಕ್ಕಕ್ಕೆ ಸರಿದ ಮೇಲೆಯೇ ನಾವು ಮುಂದೆ ಹೋಗಿದ್ದು ಅಂತಾರೆ ನೂಲಿಗ್ಗೇರಿ ಅಜರ್‌.

ಮೊಬೈಲ್ ನಲ್ಲಿ ದೃಶ್ಯ ಸೆರೆ: ಅಂದು ಮದ್ಯಾಹ್ನ ವೇಳೆ. ಉಡುಪಿಯಿಂದ ಬರುತ್ತಿದ್ದೆ. ಘಾಟಿ ರಸ್ತೆ ತಿರುವಿನಲ್ಲಿ ಕಾಡುಕೊಣವೊಂದು ನಿಂತಿದೆ. ಅದರಷ್ಟಕ್ಕೆ ಅದು ಮೇಯುತ್ತಿತ್ತು. ಸ್ವಲ್ಪ ಹತ್ತಿರ ಹತ್ತಿರ ಹೋದರೂ ಅದು ಸುಮ್ಮನೇ ಮೇಯುತ್ತಿತ್ತು. ಹಾಗಾಗಿ ಕಾಡುಕೋಣ ಮೇಯುತ್ತಿರುವ ದೃಶ್ಯವನ್ನು ಹತ್ತಿರದಿಂದ ಮೊಬೈಲ್ ನಲ್ಲಿ 2 ನಿಮಿಷ ರೆಕಾರ್ಡ್‌ ಮಾಡಿದೆವು. ಆದರೂ ಅದು ಅಲ್ಲೇ ಇತ್ತು. ಆಮೇಲೆ ನಾವು ನಮ್ಮ ದಾರಿ ಹಿಡಿದೆವು ಎಂದು ನಗರ ಅಜೇಯ್‌ ಖುಷಿಯಿಂದ ಹೇಳುತ್ತಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.