ಸಿಸಿಬಿ ದಾಳಿ: ಪಾರ್ಟಿಯಿಂದ ರೌಡಿ ಶೀಟರ್‌ ಪರಾರಿ


Team Udayavani, Jun 16, 2019, 3:03 AM IST

ccb

ಬೆಂಗಳೂರು: ರೆಸಿಡೆನ್ಸಿ ರಸ್ತೆಯ ಐಶಾರಾಮಿ ಡ್ಯಾನ್ಸ್‌ಬಾರ್‌ನಲ್ಲಿ ರೌಡಿ ಶೀಟರ್‌ ಗಿರಿ ಎಂಬಾತ ಶುಕ್ರವಾರ ರಾತ್ರಿ ಹುಟ್ಟುಹಬ್ಬ ಆಚರಣೆ ನಡೆಸುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ಮಾಡಿ ಹಲರನ್ನು ಬಂಧಿಸಿದ್ದಾರೆ. ಆದರೆ, ಪೊಲೀಸರ ದಾಳಿ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆ ಅರ್ಧದಲ್ಲಿಯೇ ಮೊಟಕುಗೊಳಿಸಿ ರೌಡಿ ಶೀಟರ್‌ ಪರಾರಿಯಾಗಿದ್ದಾನೆ.

ಟೈಮ್ಸ್‌ ಬಾರ್‌ ರೆಸ್ಟೋರೆಂಟ್‌ ಡ್ಯಾನ್ಸ್‌ ಬಾರ್‌ನಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಿ ಯುವತಿಯರಿಂದ ಅಶ್ಲೀಲ ನೃತ್ಯ ಹಾಗೂ ಕುಣಿಗಲ್‌ ಗುರಿ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ಗಿರಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು ಡ್ಯಾನ್ಸ್‌ಬಾರ್‌ನ ಸಿಬ್ಬಂದಿ ಸೇರಿ 237 ಜನರನ್ನು ಬಂಧಿಸಿದ್ದು, 9.82 ಲಕ್ಷ ರೂ. ಜಪ್ತಿಪಡಿಸಿಕೊಂಡಿದ್ದಾರೆ. ಜತೆಗೆ, ಉತ್ತರ ಭಾರತ ಮೂಲದ 266 ಜನ ಹುಡುಗಿಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಲ್ಡ್‌ ಟವರ್‌ನಲ್ಲಿ ನಡೆಯುತ್ತಿದ್ದ ಟೈಮ್ಸ್‌ ಬಾರ್‌ ರೆಸ್ಟೋರೆಂಟ್‌ನಲ್ಲಿ ಬಿಗ್‌ ಬಾಸ್‌ ಟೈಮ್ಸ್‌, ಬಾಲಿವುಡ್‌ ಟೈಮ್ಸ್‌, ಪ್ಯಾರೀಸ್‌ ಟೈಮ್ಸ್‌, ಟೋಪಾಜ್‌ ಬಟರ್‌ಪ್ಲೆ, ರಾಜ್‌ ಧನ್‌ಬೀರ್‌ ಹೆಸರುಗಳಲ್ಲಿ ಒಟ್ಟು ಏಳು ಹಾಲ್‌ಗ‌ಳಿವೆ. ಏಳು ಹಾಲ್‌ಗ‌ಳಲ್ಲಿ ಯುವತಿಯಿಂದ ಅಶ್ಲೀಲ ನೃತ್ಯ ಮಾಡಿಸಲಾಗುತ್ತಿತ್ತು.

ಜೂನ್‌ 14ರಂದು ಹುಟ್ಟುಹಬ್ಬದ ಆಚರಣೆಗೆ ಕುಣಿಗಲ್‌ ಗಿರಿ ಬಾಲಿವುಡ್‌ ಟೈಮ್ಸ್‌ ಹೆಸರಿನ ಹಾಲ್‌ ಬುಕ್‌ ಮಾಡಿಕೊಂಡಿದ್ದ. ಅದೇ ಹಾಲ್‌ನಲ್ಲಿ ಗಿರಿಗೆ ಜನ್ಮದಿನದ ಶುಭಾಶಯ ಕೋರಿ ಕಾರ್ಡ್ಸ್‌ ಅಂಟಿಸಲಾಗಿತ್ತು. ಯುವತಿಯರ ನೃತ್ಯವೂ ನಡೆದಿದೆ.

ಕಳೆದ ಒಂದು ತಿಂಗಳ ಹಿಂದೆ ಅಪರಾಧಿಕ ಕೃತ್ಯದ ಸಂಬಂಧ ಸಿಸಿಬಿ ಪೊಲೀಸರು ಗಿರಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜಾಮೀನಿನ ಆಧಾರದಲ್ಲಿ ಬಿಡುಗಡೆಗೊಂಡಿದ್ದ ಗಿರಿ ಅಪರಾಧಿಕ ಕೃತ್ಯಗಳಲ್ಲಿ ಸಕ್ರಿಯಗೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.