ವೈಎಸ್ಆರ್ಸಿ ಪ್ರಣಾಳಿಕೆಯನ್ನು ಪವಿತ್ರ ದಾಖಲೆ ಎಂದ ರಾಜ್ಯಪಾಲ
Team Udayavani, Jun 16, 2019, 7:58 AM IST
ಅಮರಾವತಿ: ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯ ಪ್ರತಿಗಳನ್ನು ಆಂಧ್ರ ಪ್ರದೇಶ ಸರಕಾರದ ಎಲ್ಲ ಇಲಾಖೆಗಳಿಗೂ ರವಾನಿಸಲಾಗುವುದು ಎಂದು ಆ ರಾಜ್ಯದ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ತಿಳಿಸಿದ್ದಾರೆ.
ಅಮರಾವತಿಯ ವಿಧಾನಸಭೆಯಲ್ಲಿ ಶನಿವಾರ, ಜಂಟಿ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಎಸ್ಆರ್ಸಿ ಪ್ರಣಾಳಿಕೆಯು ‘ಪವಿತ್ರ ದಾಖಲೆ’ಯಾಗಿದ್ದು, ಅದು ಎಲ್ಲ ಇಲಾಖೆಗಳಲ್ಲೂ ಇರಬೇಕು. ಹಾಗಾಗಿ, ಎಲ್ಲ ಇಲಾಖೆಗಳಿಗೆ ಒಂದೊಂದು ಪ್ರತಿಯನ್ನು ರವಾನಿಸಲಾಗುವುದು. ಹೀಗಾ ಗು ವುದರಿಂದ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿ ಸುವ ಜವಾಬ್ದಾರಿಯನ್ನು ಸರಕಾರಕ್ಕೆ ನೆನಪಿಸಿದಂತಾಗುತ್ತದೆ ಎಂದರು.
ಪ್ರಣಾಳಿಕೆಯಲ್ಲಿ, ಹಿಂದಿನ ಸರಕಾರದ ಕೆಟ್ಟ ಆಡಳಿತದಿಂದಾಗಿ ಬೊಕ್ಕಸ ಬರಿದಾಗುವ ಪರಿಸ್ಥಿತಿಗೆ ತಲುಪಿದೆ. ತಾನು ಅಧಿಕಾರಕ್ಕೆ ಬಂದರೆ, ಪಾರದರ್ಶಕ ಹಾಗೂ ದಕ್ಷ ಆಡಳಿತದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹತೋಟಿಗೆ ತರುವುದಾಗಿ ವೈಎಸ್ಆರ್ಸಿ ಹೇಳಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ