ಕೊಳೆ ರೋಗಕ್ಕೆ 9.52 ಕೋ.ರೂ. ಪರಿಹಾರ ಪಾವತಿ: ಐವನ್‌


Team Udayavani, Jun 16, 2019, 9:25 AM IST

z-32

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕೊಳೆ ರೋಗದಿಂದ ಸಂತ್ರಸ್ತರಾಗಿರುವ ಕೃಷಿಕರಿಗೆ ಈವರೆಗೆ 9.52 ಕೋಟಿ ರೂ. ಅನುದಾನ ಪಾವತಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ತಿಳಿಸಿದರು. ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ಶನಿವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ತಹಶೀಲ್ದಾರ್‌ ಅವರಲ್ಲಿ ವಿವರ ಪಡೆದ ಅವರು, ತಾಲೂಕಿನಲ್ಲಿ ಕೊಳೆ ರೋಗ ದಿಂದ ಸಂತ್ರಸ್ತರಾಗಿರುವ 19,112 ಕೃಷಿಕರಿಂದ ಅರ್ಜಿ ಬಂದಿದ್ದು, 16,971 ಮಂದಿಗೆ ಸಹಕಾರಿ ಸಂಘಗಳಲ್ಲಿ ಹಾಗೂ 999 ಮಂದಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಈವರೆಗೆ 9.52 ಕೋಟಿ ರೂ. ಅನುದಾನ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

63,075 ಎಕ್ರೆ ಕೃಷಿಭೂಮಿ ಮಂಜೂರು
ಅಕ್ರಮ – ಸಕ್ರಮ ಯೋಜನೆಗಳಲ್ಲಿ ಈಗಾಗಲೇ 18,124 ಮಂದಿ ಕೃಷಿಕರಿಗೆ 63,075 ಎಕ್ರೆ ಕೃಷಿಭೂಮಿ ನೀಡಲಾಗಿದೆ. ಹೊಸದಾಗಿ ಅರ್ಜಿನಮೂನೆ 57ರಲ್ಲಿ 31,123 ಅರ್ಜಿಗಳು ಬಂದಿದ್ದು, ಪರಿಶೀಲನೆಯಲ್ಲಿವೆ. 94ಸಿಯಲ್ಲಿ 33,354 ಅರ್ಜಿ ಬಂದಿದ್ದು, 14,132 ಮಂಜೂರಾಗಿ, 13,269 ತಿರಸ್ಕೃತಗೊಂಡಿವೆ. 5,953 ಪರಿಶೀಲನೆಯಲ್ಲಿದೆ. 94ಸಿಸಿಯಲ್ಲಿ 738 ಅರ್ಜಿಗಳಲ್ಲಿ 268 ಪರಿಶೀಲನೆಯಲ್ಲಿದೆ ಎಂದು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ತಿಳಿಸಿದರು. ಉಳಿದಿರುವ ಅರ್ಜಿ ಪರಿಶೀಲಿಸಿ ಶೀಘ್ರ ಮಂಜೂರು ಮಾಡು ವಂತೆ ಐವನ್‌ ಸೂಚಿಸಿದರು.

ಡಿ.ಸಿ. ಮನ್ನಾ ಜಮೀನು: ವಿಶೇಷ ಸಭೆ
ಜಿಲ್ಲೆಯಲ್ಲಿರುವ ಡಿ.ಸಿ. ಮನ್ನಾ ಜಮೀನಿನ ಸಮಸ್ಯೆಗೆ ಪರಿಹಾರ ಕಾಣುವಂತೆ ದಲಿತ ಮುಖಂಡರು ಬೇಡಿಕೆ ಮುಂದಿಟ್ಟಾಗ, ಬೆಳ್ತಂಗಡಿಯಲ್ಲಿ 61 ಎಕ್ರೆ ಜಮೀನು ಮಾತ್ರ ಲಭ್ಯವಿದ್ದು, ಅದನ್ನು ಅರ್ಹರಿಗೆ ಹಂಚಲು ಅರ್ಜಿ ಕರೆಯಲಾಗಿದೆ. 398 ಅರ್ಜಿಗಳು ಬಂದಿದ್ದು, ಅದನ್ನು ಪರಿಶೀಲಿಸಲಾಗುತ್ತಿದೆ. 570 ಎಕ್ರೆ ಡಿ.ಸಿ. ಮನ್ನಾ ಜಮೀನು ಬೇರೆ ಉದ್ದೇಶಗಳಿಗೆ ಹಂಚಿಕೆಯಾಗಿದೆ ಹಾಗೂ 410 ಎಕ್ರೆ ಜಮೀನು ಅತಿಕ್ರಮಣವಾಗಿದೆ ಎಂದು ತಿಳಿಸಿದರು.

ಅತಿಕ್ರಮಣವಾಗಿರುವ ಹಾಗೂ ಇತರ ಉದ್ದೇಶಗಳಿಗೆ ಹಂಚಿಕೆಯಾಗಿರುವ ಜಮೀನನ್ನು ಕೂಡಲೇ ವಶಪಡಿಸಿ ದಲಿತರಿಗೆ ಹಂಚಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವರ್ಗ, ವಿವಿಧ ತಾ| ಮಟ್ಟದ ಅಧಿಕಾರಿಗಳ, ದಲಿತ ಮುಖಂಡರೊಂದಿಗೆ ಜಿಲ್ಲಾಮಟ್ಟದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಕೂಡಲೇ ಸಭೆ ಕರೆಯುವಂತೆ ಸೂಚಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಹಕ್ಕುಪತ್ರ: ಮನವಿ
ಕಾಟಾಜೆ ಪ್ರದೇಶದಲ್ಲಿ ಸುಮಾರು 40 ಆದಿವಾಸಿ ಕುಟುಂಬಗಳು 1992ರಲ್ಲಿ ಅರ್ಜಿ ಸಲ್ಲಿಸಿದಾಗ, ಸರ್ವೇ ನಡೆದು ಕಂದಾಯ ಭೂಮಿಯೆಂದು ಗುರುತಿಸಲಾಗಿದ್ದರೂ ಹಕ್ಕುಪತ್ರ ನೀಡಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ದೂರುದಾರರು ಗಮನ ಸೆಳೆದರು. ಇನ್ನುಳಿದಂತೆ ತಣ್ಣೀರುಪಂಥ ಪಾಲೇದು ಎಂಬಲ್ಲಿ ಅಂಬೇಡ್ಕರ್‌ಭವನಕ್ಕೆ 2 ವರ್ಷಗಳ ಹಿಂದೆ ಅನುದಾನ ಮಂಜೂರುಗೊಂಡಿದ್ದರೂ ಕಟ್ಟಡ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಮನವಿ ಸಲ್ಲಿಸಿ ದರು. ಈ ಬಗ್ಗೆ ತಹಶೀಲ್ದಾರ್‌ ಬಳಿ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಐವನ್‌ ಭರವಸೆ ನೀಡಿದರು.

ಪ್ರತಿಗ್ರಾಮಗಳಲ್ಲಿ ರುದ್ರಭೂಮಿ ಅಗತ್ಯ ವಾಗಿ ಇರಬೇಕು ಎಂಬುದು ಸರಕಾರದ ಸೂಚನೆಯಿದ್ದು, ಅದಕ್ಕೆ ಅಗತ್ಯ ಜಾಗ ಮೀಸಲಿಸಬೇಕು. ಮನೆ ನಿವೇಶನಗಳಿಗೆ ಸಾಕಷ್ಟು ಅರ್ಜಿಗಳು ಕಾಯುತ್ತಿದ್ದು, ಸರಕಾರಿ ಜಾಗಗಳನ್ನು ಮೀಸಲಿರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಕ್ಕುಪತ್ರಗಳನ್ನು ಹಾಗೂ ವಿವಿಧ ಯೋಜನೆ ಫಲಾನುಭವಿಗಳಿಗೆ ಪಿಂಚಣಿ ಗಳನ್ನು ವಿತರಿಸಲಾಯಿತು.

ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಮಾಜಿ ಶಾಸಕ ಕೆ. ವಸಂತಬಂಗೇರ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಸದಸ್ಯರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಕೃತಿ ವಿಕೋಪ ನಿಧಿಯ ಕುರಿತು ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಚರ್ಚಿಸಿ, ತಾಲೂಕಿನಲ್ಲಿ 24 ಲಕ್ಷ ರೂ. ಅನುದಾನ ಲಭ್ಯವಿದೆ. ಮಳೆಯಿಂದ ಹಾನಿಗೊಳಗಾದ ಮನೆ ಸಹಿತ ಇತರ ಭಾಗಶಃಹಾನಿಗೊಳಗಾಗಿದ್ದಲ್ಲಿ ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸಿ. ಹಾನಿ ಸಂದರ್ಭ ಜನಪ್ರತಿನಿಧಿಗಳ ಆಗಮನಕ್ಕೆ ನಿರೀಕ್ಷಿಸದೆ ಅಧಿಕಾರಿಗಳೇ ಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಿ ವರದಿ ಸಿದ್ಧಪಡಿಸುವಂತೆ ಸಲಹೆ ನೀಡಿದರು.

ಪ್ರತಿ ತಾಲೂಕುಗಳಲ್ಲಿ ಸರಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಹಾಗೂ ಅಧಿಕಾರಿಗಳ ಸಭೆಯನ್ನು ಕರೆದು ಪಿಂಚಣಿ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯವನ್ನು ಮಾಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಭರವಸೆ ನೀಡಿದರು.

ಪ್ರಕೃತಿ ವಿಕೋಪ: ಗರಿಷ್ಠ ಪರಿಹಾರ

ಪ್ರಕೃತಿ ವಿಕೋಪ ನಿಧಿಯ ಕುರಿತು ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಚರ್ಚಿಸಿ, ತಾಲೂಕಿನಲ್ಲಿ 24 ಲಕ್ಷ ರೂ. ಅನುದಾನ ಲಭ್ಯವಿದೆ. ಮಳೆಯಿಂದ ಹಾನಿಗೊಳಗಾದ ಮನೆ ಸಹಿತ ಇತರ ಭಾಗಶಃಹಾನಿಗೊಳಗಾಗಿದ್ದಲ್ಲಿ ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸಿ. ಹಾನಿ ಸಂದರ್ಭ ಜನಪ್ರತಿನಿಧಿಗಳ ಆಗಮನಕ್ಕೆ ನಿರೀಕ್ಷಿಸದೆ ಅಧಿಕಾರಿಗಳೇ ಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಿ ವರದಿ ಸಿದ್ಧಪಡಿಸುವಂತೆ ಸಲಹೆ ನೀಡಿದರು.

ಪಿಂಚಣಿದಾರರೊಂದಿಗೆ ಸಭೆ

ಪ್ರತಿ ತಾಲೂಕುಗಳಲ್ಲಿ ಸರಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಹಾಗೂ ಅಧಿಕಾರಿಗಳ ಸಭೆಯನ್ನು ಕರೆದು ಪಿಂಚಣಿ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯವನ್ನು ಮಾಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಭರವಸೆ ನೀಡಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.