ಹೊರಟ್ಟಿ ಶಾಲೆಗೆ ಪ್ರಥಮ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಹೆಗ್ಗಳಿಕೆ


Team Udayavani, Jun 16, 2019, 10:15 AM IST

bk-tdy-3..

ಮುಧೋಳ: ಯಡಹಳ್ಳಿಯ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಪಬ್ಲಿಕ್‌ ಶಾಲೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಪ್ರಥಮ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಪ್ರಶಸ್ತಿ ಪ್ರದಾನ ಮಾಡಿದರು.

ಮುಧೋಳ:ಯಡಹಳ್ಳಿಯ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಕರ್ನಾಟಕ ಪಬ್ಲಿಕ್‌ ಶಾಲೆ ದೇಶದಲ್ಲೇ ಮಾದರಿಯಾಗಿದೆ. ಆ ಶಾಲೆಗೀಗ ರಾಜ್ಯದ ಪ್ರಥಮ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಹೆಗ್ಗಳಿಕೆ ಹಾಗೂ ಪ್ರಶಸ್ತಿ ಪತ್ರದ ಸಮೇತ ರೂ. 45ಲಕ್ಷ ವಿಶೇಷ ಅನುದಾನ ಲಭಿಸಿದ್ದು, ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್, ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ, 1000 ಶಾಲೆಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರೀಯ ಮಹಾವಿದ್ಯಾಲಯ ರೀತಿಯಲ್ಲಿ ರಾಜ್ಯದಲ್ಲಿ ಈಗಾಗಲೇ ಕಳೆದ ಸಾಲಿನಲ್ಲಿ 176, ಈ ಸಾಲಿನಲ್ಲಿ 100 ಪಬ್ಲಿಕ್‌ ಸ್ಕೂಲ್ ಆರಂಭ ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದರು.

ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಮುಧೋಳ ತಾಲೂಕಿನ ಯಡಹಳ್ಳಿಯಲ್ಲಿ ದೇಶದಲ್ಲೇ ಮಾದರಿಯಾದ ಹೈಟೆಕ್‌ ಸರ್ಕಾರಿ ಶಾಲೆ ನಿರ್ಮಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ಸಿಗುವಂತೆ ಮಾಡಿದ್ದು, ಹೆಮ್ಮೆ ತಂದಿದೆ. ಜನಪ್ರತಿನಿಧಿಯೊಬ್ಬರು ಮನಸ್ಸು ಮಾಡಿದರೆ ಹುಟ್ಟೂರಿನ ಋಣ ಹೇಗೆ ತೀರಿಸಬೇಕೆಂಬುದನ್ನು ಬಸವರಾಜ ಹೊರಟ್ಟಿ ಅವರನ್ನು ನೋಡಿ ಕಲಿಯಬೇಕಿದೆ ಎಂದರು. ಕಳೆದ ಸಾಲಿನಲ್ಲಿ ಆರಂಭವಾದ ಈ ಶಾಲೆ ಇಂದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಎಲ್ಲ ಜನಪ್ರತಿನಿಧಿಗಳು ತಮ್ಮ ಪ್ರದೇಶಗಳಲ್ಲಿ ಯಡಹಳ್ಳಿಯಂತಹ ಹೈಟೆಕ್‌ ಶಾಲೆ ನಿರ್ಮಿಸಿದರೆ ರಾಜ್ಯಾದ್ಯಂತ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳು ನೀಡಲಿವೆ ಎಂದರು.

ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಯಡಹಳ್ಳಿ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಕರ್ನಾಟಕ ಪಬ್ಲಿಕ್‌ ಶಾಲೆಗೆ ರಾಜ್ಯದ ಪ್ರಥಮ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಪ್ರಶಸ್ತಿ ಪ್ರದಾನ ಮಾಡಿದರು.

ಯಡಹಳ್ಳಿಯ ಸರ್ಕಾರಿ ಹೈಟೆಕ್‌ ಶಾಲೆಯ ರೂವಾರಿ,ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಮಾತನಾಡಿ, ಗುಣಮಟ್ಟದ ಶಿಕ್ಷಣದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದು, ನಮ್ಮ ತಂದೆಯವರ ಆಶಯದಂತೆ ನನ್ನ ಹುಟ್ಟೂರಿನಲ್ಲಿ ಆರೂವರೆ ಎಕರೆ ಜಮೀನು ನೀಡಿ 25 ಕೋಟಿಗೂ ಹೆಚ್ಚು ವಂತಿಗೆ ಸಂಗ್ರಹಿಸಿ, ಎಲ್ಲ ಮೂಲಸೌಕರ್ಯಗಳುಳ್ಳ ಶಾಲೆ ನಿರ್ಮಿಸಲಾಗಿದೆ. ಪ್ರಸ್ತುತ ಶಾಲೆಯಲ್ಲಿ 1200ಕ್ಕೂ ಹೆಚ್ಚು ಮಕ್ಕಳು ಓದುತ್ತಿರುವುದು ಸಂತಸ ತಂದಿದೆ. ಯಾವುದಕ್ಕೂ ಕೊರತೆಯಾಗದಂತೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್‌ನಿಂದ ಕೋಟ್ಯಂತರ ಮೌಲ್ಯದ ಸಾಮಗ್ರಿ, ಧನಸಹಾಯ ಮಾಡಲಾಗಿದೆ. ನನ್ನ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಈ ಕಾರ್ಯ ಸಾಕಷ್ಟು ಹೆಮ್ಮೆ ತಂದಿದೆ. ರಾಜ್ಯಕ್ಕೆ ಪ್ರಥಮ ಬಂದಿದ್ದು, ಸ್ಮರಣೀಯ ಕ್ಷಣ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ, ಶಾಸಕ ರೋಷನ್‌ಬೇಗ್‌, ವಿಧಾನ ಪರಿಷತ್‌ ಸದಸ್ಯರಾದ ಐ.ಕೆ. ಚವರಡ್ಡಿ, ಎಸ್‌.ಜಿ. ಬೋಜೆಗೌಡರು, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ, ಆಯಕ್ತ ಡಾ| ಟಿ.ಸಿ. ಜಾಫರ, ಪ್ರಾಚಾರ್ಯರಾದ ವಿಜಯಲಕ್ಷ್ಮೀ ಪೆಟ್ಲೂರ, ಶೇಖರ ಲಚ್ಯಾಣಿ, ಪ್ರಥಮ ದರ್ಜೆ ಸಹಾಯಕ ಬಸವರಾಜ ಚೌಕಿವåಠ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.