ಮಕ್ಕಳಿಗೆ ವನ್ಯಜೀವಿ ರಕ್ಷಣೆ ಜಾಗೃತಿ

•ವನ್ಯಜೀವಿ ಛಾಯಾಗ್ರಾಹಕರಿಂದ ಹೊಸ ಪ್ರಯತ್ನ•ಜಿಲ್ಲೆಯಲ್ಲಿವೆ ಅಪರೂಪದ ಪ್ರಾಣಿ ಪ್ರಭೇದ

Team Udayavani, Jun 16, 2019, 11:59 AM IST

kopala-tdy-3..

ಕುಷ್ಟಗಿ: ಶಾಲೆಯೊಂದರಲ್ಲಿ ವನ್ಯ ಜೀವಿ ಸಂರಕ್ಷಣೆಯ ಜಾಗೃತಿ ಪಾಠ ಮಾಡುತ್ತಿರುವುದು.

ಕುಷ್ಟಗಿ: ಪರಿಸರ ದಿನಾಚರಣೆ ಸಂದರ್ಭದಲ್ಲಿ ಫೋಟೋಗಾಗಿ ಗಿಡ ನೆಡುವುದು, ಒಂದಿಷ್ಟು ಪರಿಸರ, ವನ್ಯ ಜೀವಿಯ ರಕ್ಷಣೆ ಕಾಳಜಿ ವ್ಯಕ್ತಪಡಿಸುವುದು. ಇಷ್ಟಕ್ಕೇ ಮುಗಿದು ಹೋಗುತ್ತದೆ ಪರಿಸರ ದಿನಾಚರಣೆ ಹಾಗೂ ಪರಿಸರದ ಮೇಲಿನ ಪ್ರೀತಿ. ಏತನ್ಮಧ್ಯೆ ಕುಷ್ಟಗಿ ಪಟ್ಟಣದ ಇಬ್ಬರು ಯುವಕರು ಪರಿಸರ ದಿನಾಚರಣೆ ನಿಮಿತ್ತ ಜಿಲ್ಲೆಯಲ್ಲಿರುವ ಅಪರೂಪದ ವನ್ಯಜೀವಿಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಪಟ್ಟಣದ ವನ್ಯಜೀವಿ ಛಾಯಾಗ್ರಾಹಕ ಸುಜಿತ್‌ ಶೆಟ್ಟರ್‌ ಹಾಗೂ ವಿನಯ್‌ ಕಂದಕೂರು ಅವರೇ ವನ್ಯ ಜೀವಿ ಸಂರಕ್ಷಣೆಗೆ ಟೊಂಕ ಕಟ್ಟಿದ ಯುವಕರು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕನಿಷ್ಟ 200 ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ವನ್ಯಜೀವಿ ಉಳಿವು ಜಾಗೃತಿ ಪಾಠ ಮಾಡಲು ಯೋಜಿಸಿದ್ದು, ಪರಿಸರ ದಿನಾಚರಣೆ ಹೀಗೂ ಆಚರಿಸಬಹುದು ಎಂದು ನಿರೂಪಿಸಿದ್ದಾರೆ.

ಕುಷ್ಟಗಿ ತಾಲೂಕು ಬಯಲು ಸೀಮೆ, ಮಳೆ ಕಡಿಮೆ ಬೀಳುವ ಪ್ರದೇಶ. ಇಂತಹ ಪ್ರದೇಶದಲ್ಲಿ ವನ್ಯಜೀವಿಗಳಿಲ್ಲ. ಅವೆಲ್ಲ ಮಲೆನಾಡಿಗೆ ಸೀಮಿತ ಎನ್ನುವ ವಾದವಿದೆ. ಆದರೆ ನಮ್ಮಲ್ಲೂ ತೀರ ಅಪರೂಪವೆನಿಸುವ ವನ್ಯಜೀವಿ ಪ್ರಭೇದಗಳಿದ್ದು, ಅವುಗಳೆಲ್ಲವೂ ಈ ವನ್ಯಜೀವಿ ಛಾಯಾಗ್ರಾಹಕರಿಂದ ಬೆಳಕಿಗೆ ಬರುತ್ತಿವೆ. ಜಿಲ್ಲೆಯಲ್ಲಿ ಕರಡಿ, ತೋಳ, ನರಿ, ಕಾಡು ಹಂದಿ, ಮುಂಗುಸಿ, ಕತ್ತೆಕಿರುಬ, ಮೊಲ, ಮುಳ್ಳು ಹಂದಿ, ಕಾಡು ಬೆಕ್ಕು, ಜಿಂಕೆ, ನವಿಲು, ಬಾವಲಿ, ಸರಿಸೃಪ ಹಾಗೂ ಅಪರೂಪವೆನಿಸುವ ಕೀಟಗಳನ್ನು ಕಾಣಬಹುದಾಗಿದೆ.

ಸತತ ಬರಗಾಲ, ತಾಪಮಾನ ಏರಿಕೆಯಿಂದ ಸೀಮಿತ ಅರಣ್ಯ ಪ್ರದೇಶದಲ್ಲಿ ಹುಲ್ಲುಗಾವಲು, ಹಳ್ಳ ಕೊಳ್ಳಗಳಲ್ಲಿ ನೀರು ಕಡಿಮೆಯಾಗಿದೆ. ಇದರಿಂದಾಗಿ ಸಸ್ಯಹಾರಿ ಪ್ರಾಣಿಗಳು ಕಡಿಮೆಯಾಗುತ್ತಿವೆ. ಈ ಪ್ರಾಣಿಗಳನ್ನು ಭೇಟೆಯಾಡಿ ತಿನ್ನುವ ಮಾಂಸಹಾರಿ ಪ್ರಾಣಿಗಳಿಗೂ ಆಹಾರ ಅಭಾವ ಸೃಷ್ಟಿಯಾಗಿದೆ. ಈ ನಡುವೆಯೂ ಕಳ್ಳ ಭೇಟೆಯಿಂದ ಪ್ರಾಣಿ ಸಂಕುಲ ಕ್ಷೀಣಿಸಲಾರಂಭಿಸುತ್ತಿದ್ದು, ಪರಿಸರ ಅಸಮಾತೋಲನಕ್ಕೆ ಕಾರಣ ಎಂದು ವನ್ಯಜೀವಿ ಛಾಯಾಗ್ರಾಹಕ ಸುಜಿತ್‌ ಶೆಟ್ಟರ್‌, ವಿನಯ್‌ ಕಂದಕೂರ ನೋವಿನಿಂದ ವಿವರಿಸುತ್ತಾರೆ. ಸರ್ಕಾರಿ ಶಾಲೆ ಅದರಲ್ಲೂ ಬುಡಕಟ್ಟು ಜನಾಂಗದವರು ವಾಸಿಸುವ ಮಕ್ಕಳು ಕಲಿಯುತ್ತಿರುವ ಶಾಲೆಗಳಲ್ಲಿ ವನ್ಯ ಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ಪಾಠ ಮಾಡುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾವು ಕೊಪ್ಪಳ ಜಿಲ್ಲೆಯಲ್ಲಿ ಸೆರೆಹಿಡಿದ ಅಪರೂಪ ಛಾಯಾಚಿತ್ರಗಳನ್ನು ಮಕ್ಕಳಿಗೆ ಮನಮುಟ್ಟುವಂತೆ ತಮ್ಮ ಪ್ರೊಜೆಕ್ಟರ್‌ ಹಾಗೂ ಲ್ಯಾಪ್‌ಟಾಪ್‌ ಮೂಲಕ ಪ್ರದರ್ಶಿಸುವುದಲ್ಲದೇ, ಇದಕ್ಕೆ ಪೂರಕ ಮಾಹಿತಿ ನೀಡುತ್ತಾರೆ. ಮಕ್ಕಳೊಂದಿಗೆ ಸಂವಾದ ನಡೆಸುತ್ತಿರುವುದು ಗಮನಾರ್ಹವೆನಿಸಿದೆ. ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸಿದ ಶಾಲೆಗಳಲ್ಲಿ ಕಡ್ಡಾಯವಾಗಿ ಸಸಿಗಳನ್ನು ನೆಡಲಾಗುತ್ತಿದೆ.

ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿಯ ಸರ್ಕಾರಿ ಪಪೂ ಕಾಲೇಜಿನಲ್ಲಿ ಜಾಗೃತಿ ಪಾಠದಿಂದ ಓರ್ವ ವಿದ್ಯಾರ್ಥಿ ತಮ್ಮ ಪಾಲಕರು, ಮೊಲಗಳನ್ನು ಬೇಟೆಯಾಡಿ ತಿನ್ನುತ್ತಾರೆ. ಇನ್ಮುಂದೆ ತಿನ್ನುವುದಿಲ್ಲ ಎಂದು ಪಾಲಕರಿಗೆ ಮನವರಿಕೆ ಮಾಡಿಕೊಡುವ ವಾಗ್ಧಾನ ಮಾಡಿರುವುದನ್ನು ವನ್ಯಜೀವಿ ಛಾಯಾಗ್ರಾಹಕ ವಿನಯ್‌ ಕಂದಕೂರ ತಿಳಿಸಿದರು.

ಪ್ರಾಣಿ ಕೊಲ್ಲದಿರಿ: ವನ್ಯ ಜೀವಿಗಳನ್ನು ಕೊಲ್ಲುವುದರಿಂದ ಪರಿಸರದಲ್ಲಿ ಅಸಮತೋಲನ ಸೃಷ್ಟಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹೀಗಾಗಿ ಅಪರೂಪದ ಪ್ರಾಣಿಗಳನ್ನು ಕಂಡರೆ ಕೊಲ್ಲಬೇಡಿ, ಕೂಡಲೇ ನಮ್ಮ ಮೊಬೈಲ್ ಸಂಖ್ಯೆ 9880894111, 9900555865ಗೆ ಕರೆ ಮಾಡಲು ಸಲಹೆ ನೀಡಿದ್ದಾರೆ.

•ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.