ಕಾರಾಗೃಹ ಸಿಬ್ಬಂದಿಗೂ ಆದ್ಯತೆ

•ಕೈದಿಗಳಿಂದ ಸಮಾಜ ರಕ್ಷಣೆ ಮಹತ್ತರ ಹೊಣೆ •ಜೈಲು ಸುಧಾರಣೆಗಾಗಿ ಸಿಬ್ಬಂದಿ ನೇಮಕಕ್ಕೆ ಆದ್ಯತೆ

Team Udayavani, Jun 16, 2019, 1:25 PM IST

16-June-25

ಕಲಬುರಗಿ: ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಒಂದನೇ ತಂಡದ ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳಿಗೆ ಪೊಲೀಸ್‌ ಮಹಾ ನಿರ್ದೇಶಕ ರಾಘವೇಂದ್ರ ಎಚ್. ಔರಾದಕರ್‌ ಮತ್ತು ಎನ್‌.ಎಸ್‌. ಮೇಘರಿಕ್‌ ಪ್ರಶಸ್ತಿ ಪ್ರದಾನ ಮಾಡಿದರು.

ಕಲಬುರಗಿ: ಪೊಲೀಸ್‌ ಇಲಾಖೆ ಸಿಬ್ಬಂದಿಗೆ ನೀಡುವಷ್ಟೇ ಆದ್ಯತೆಯನ್ನು ಕಾರಾಗೃಹ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೂ ನೀಡಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮಹಾನಿರ್ದೇಶಕ ಮತ್ತು ರಾಜ್ಯ ಪೊಲೀಸ್‌ ಗೃಹ ನಿರ್ಮಾಣ ನಿಗಮ ಅಧ್ಯಕ್ಷ ರಾಘವೇಂದ್ರ ಎಚ್. ಔರಾದಕರ್‌ ಹೇಳಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಶನಿವಾರ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯ ಒಂದನೇ ತಂಡದ ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಪರಿವೀಕ್ಷಣೆ ಮಾಡಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ನ್ಯಾಯಾಂಗ, ಪೊಲೀಸ್‌, ಕಾರಾಗೃಹ ಎಲ್ಲವೂ ಕ್ರಿಮಿನಲ್ ಜಸ್ಟಿಸ್‌ ವ್ಯವಸ್ಥೆಯ ಒಂದು ಭಾಗವಾಗಿವೆ. ಕಾರಾಗೃಹ ನಿರ್ಲಕ್ಷಿತ ಇಲಾಖೆ ಎನ್ನುವ ಭಾವನೆ ಇತ್ತು. ಪೊಲೀಸರಿಗೆ ಸಿಗುವ ಪ್ರಾತಿನಿಧ್ಯ ಕಾರಾಗೃಹ ಸಿಬ್ಬಂದಿಗೆ ಸಿಗಬೇಕೆಂದು ಹಲವು ಸುಧಾರಣೆಗಳನ್ನು ಮಾಡಲಾಗಿದೆ. ಕಾರಾಗೃಹ ಇಲಾಖೆ ಆರ್ಥಿಕವಾಗಿ ಸದೃಢವೂ ಆಗುತ್ತಿದೆ ಎಂದರು.

ಪ್ರಶಿಕ್ಷಣಾರ್ಥಿಗಳು ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಂತೆ ಕಾಲ ಕಳೆದಿರಬಹುದು. ಆದರೆ, ಈಗ ಪರೇಡ್‌ ಗೆರೆ ದಾಟುತ್ತಿದ್ದಂತೆ ನೀವು ಸಮಾಜದ ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿದ್ದಿರಿ. ಕೈದಿಗಳಿಗೆ ರಕ್ಷಣೆ ಕೊಡುವುದು ಮತ್ತು ಕೈದಿಗಳಿಂದ ಸಮಾಜವನ್ನು ರಕ್ಷಣೆ ಮಾಡುವ ಮಹತ್ತರ ಹೊಣೆ ನಿಮ್ಮ ಮೇಲಿದೆ ಎಂಬ ಕರ್ತವ್ಯ ಪ್ರಜ್ಞೆಯನ್ನು ತಿಳಿಸಿದರು.

ಜೈಲಿಗೆ ಬರುವ ಕೈದಿಗಳು ಎರಡು ವಿಧದಲ್ಲಿ ಇರುತ್ತಾರೆ. ಒಬ್ಬ ಅಪರಾಧ ಕೃತ್ಯಗಳನ್ನೇ ಮಾಡುತ್ತಾ ಜೈಲಿಗೆ ಬಂದರೆ, ಮತ್ತೂಬ್ಬ ಯಾವುದೋ ಸಂದರ್ಭಕ್ಕೊಳಗಾಗಿ ಜೈಲು ಸೇರಿರುತ್ತಾನೆ. ಈ ಕೈದಿಗಳ ಗುರುತಿಸುವಿಕೆ ಕಲೆಯನ್ನು ಜೈಲು ವೀಕ್ಷಕರು ಕರಗತ ಮಾಡಿಕೊಳ್ಳಬೇಕು. ಯಾವುದೇ ಆಮಿಷಕ್ಕೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಬಹುಮಾನ ವಿತರಿಸಿದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮತ್ತು ರಾಜ್ಯ ಕಾರಾಗೃಹಗಳ ಮಹಾ ನಿರೀಕ್ಷಕ ಎನ್‌.ಎಸ್‌. ಮೇಘರಿಖ್‌ ಮಾತನಾಡಿ, ಜೈಲುಗಳ ಸುಧಾರಣೆಗಾಗಿ ಸಿಬ್ಬಂದಿ ನೇಮಕಕ್ಕೆ ಪ್ರಥಮ ಆದ್ಯತೆ ಕೊಡಲಾಗುತ್ತಿದೆ. ಈಗಾಗಲೇ 1,020 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೂ.23ರಂದು 700 ಅಭ್ಯರ್ಥಿಗಳು ಲಿಖೀತ ಪರೀಕ್ಷೆ ಬರೆಯಲಿದ್ದಾರೆ. ಕಾರಾಗೃಹ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ತರಬೇತಿ ಪಡೆದ ಸಿಬ್ಬಂದಿ ಶಿಸ್ತಿನಿಂದ ಕೂಡಿರಬೇಕು. ಪ್ರತಿಜ್ಞೆ ಸ್ವೀಕರಿಸುವ ಪ್ರತಿ ಪದಕ್ಕೂ ಒಂದು ಅರ್ಥವಿದೆ. ಅದನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜ ಮತ್ತು ಇಲಾಖೆ ಅಭಿವೃದ್ಧಿಗೆ ಪ್ರತಿ ಸಿಬ್ಬಂದಿಯೂ ಸಹಕರಿಸಬೇಕು ಎಂದು ಹೇಳಿದರು.

ಕಾರಾಗೃಹ ಇಲಾಖೆ ಪೊಲೀಸ್‌ ಮಹಾನಿರೀಕ್ಷಕ ಎಚ್.ಎಸ್‌. ರೇವಣ್ಣ ವರದಿ ವಾಚನ ಮಾಡಿ, ಪೊಲೀಸ್‌ ಇಲಾಖೆ ಮತ್ತು ಕಾರಾಗೃಹ ಇಲಾಖೆ ನಡುವೆ ಬಾಂಧವ್ಯ ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಕಾರಾಗೃಹದ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದರು.

ಒಂದೇ ವರ್ಷದಲ್ಲಿ ಬೀದರ್‌, ಹಾಸನ, ಬೆಂಗಳೂರು, ಮಂಗಳೂರು ಮತ್ತು ವಿಜಯಪುರದಲ್ಲಿ ಬಂಧಿಖಾನೆಗಳನ್ನು ನಿರ್ಮಿಸಲಾಗಿದೆ. ಜೈಲಿನಲ್ಲಿ ಆಧುನಿಕ ತಾಂತ್ರಿಕ ಉಪಕರಣಗಳನ್ನು ಒದಗಿಸಲಾಗುತ್ತಿದೆ. ಪ್ರತಿ ಸೆಲ್ನ ಮೇಲೆ ನಿಗಾ ವಹಿಸಲು ಎಲ್ಇಡಿ ಪರದೆಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ಎಲ್ಲ ಪ್ರಶಿಕ್ಷಣಾರ್ಥಿಗಳು ಪರೇಡ್‌ ಮೂಲಕ ಶಿಸ್ತಿನಿಂದ ಗೌರವ ವಂದನೆ ಸಲ್ಲಿಸಿದರು. ಪೊಲೀಸ್‌ ವಾದ್ಯ ತಂಡದವರು ಸುಶ್ರಾವ್ಯವಾಗಿ ವಾದ್ಯ ನುಡಿಸಿದರು.

ಈಶಾನ್ಯ ವಲಯ ಐಜಿಪಿ ಮನೀಷ್‌ ಕರ್ಬಿಕರ್‌, ಎಸ್‌ಪಿ ಯಾಡ ಮಾರ್ಟಿನ್‌ ಮಾರ್ಬನ್ಯಾಂಗ್‌, ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ ಪ್ರಾಂಶುಪಾಲ ಹಾಗೂ ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ, ಜಿಲ್ಲಾ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಹಾಗೂ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳ ಪೋಷಕರು, ಕುಟುಂಬಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.