ಮೀರಾರೋಡ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 28ನೇ ವಾರ್ಷಿಕ ಮಹೋತ್ಸವ

"ದೇವಾಲಯಗಳು ಧರ್ಮ ಬೋಧಕ ಕೇಂದ್ರಗಳಾಗಬೇಕು': ಸಾಂತಿಂಜ ಜನಾರ್ದನ ಭಟ್‌

Team Udayavani, Jun 16, 2019, 3:43 PM IST

1506MUM01

ಮುಂಬಯಿ: ದೂರ ಹೋಗಿರುವ ಬಂಧುಗಳನ್ನು ಆಯಸ್ಕಾಂತದಂತೆ ಮನೆಗೆ ಕರೆದು ತಂದು ಮನುಷ್ಯ ಒಂಟಿಯಲ್ಲ ಸಮಾಜ ಜೀವಿ ಎಂಬ ಸತ್ಯವನ್ನು ಊರಿನ ಜಾತ್ರೆಗಳು ಸಾರುತ್ತವೆ. ಇದರಲ್ಲಿ ದೈವಿಕ ಆರಾಧನೆಯೊಂದಿಗೆ ಊರ ಪರವೂರ ಜನರ ಒಡನಾಟ ಸಿಗುತ್ತದೆ. ಸಹಬಾಳ್ವೆಯ ಆದರ್ಶ ಇರುವ ಉತ್ಸವಗಳು ಜನರನ್ನು ಒಗ್ಗೂಡಿಸಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಮೂಡಿಸುತ್ತದೆ ಎಂದು ಮೀರಾರೋಡ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಾಣೂರು ಸಾತಿಂಜ ಜನಾರ್ಧನ್‌ ಭಟ್‌ ಅವರು ಅಭಿಪ್ರಾಯಿಸಿದರು.

ಜೂ. 14ರಂದು ಮೀರಾರೋಡ್‌ ಪೂರ್ವದ ಮೀರಾ ಕೋ. ಆಪರೇಟಿವ್‌ ಹೌಸಿಂಗ್‌ ಸೊಸೈಟಿ ಲಿಮಿಟೆಡ್‌, ರಾಷ್ಟ್ರೀಯ ಹೆ¨ªಾರಿ ಸಮೀಪದ ಹೊಟೇಲ್‌ ಅಮರ್‌ ಪ್ಯಾಲೇಸ್‌ ಹಿಂದುಗಡೆಯಿರುವ ಶ್ರೀ ಮಹಾಲಿಂಗೇಶ್ವರ ಟ್ರಸ್ಟ್‌ ಇದರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 28ನೇ ವಾರ್ಷಿಕ ಮಹೋತ್ಸವದ ಧರ್ಮ ಸಂದೇಶದಲ್ಲಿ ಆಶೀರ್ವಚನ ನೀಡಿದ ಅವರು, ದೇವಾಲಯಗಳು ಧರ್ಮ ಭೋದಕ ಕೇಂದ್ರಗಳಾಗಬೇಕು. ಸಾಂಸ್ಕೃತಿಕ ಅನಾವರಣ, ವಿಭಿನ್ನ ಸಂಸ್ಕಾರಗಳ ಕೊಂಡುಕೊಳ್ಳುವಿಕೆ ಅಲ್ಲಿ ವ್ಯವಸ್ಥಿವಾಗಿ ಆಯೋಜಿಸಬೇಕು. ಎಲ್ಲರ ಸಹಕಾರ ಹಾಗೂ ಸಹಯೋಗದಿಂದ ನೆರವೇರುವ ಪೂಜೆ ಪುನಸ್ಕಾರಗಳು ಸ್ಥಳದ ಪಾವಿತ್ರೆÂಯನ್ನು ಹೆಚ್ಚುತ್ತದೆ ಎಂದರು.

ಸಂಸ್ಥೆಯ ಸ್ಥಾಪಕ ಕೃಷ್ಣ ಜಿ. ಶೆಟ್ಟಿ, ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಶಿಮಂತೂರು ಮಜಲ ಗುತ್ತು ಬಾಬಾ ರಂಜನ್‌ ಶೆಟ್ಟಿ, ಪ್ರಧಾನ ಅರ್ಚಕ ಸಾಣೂರು ಸಾತಿಂಜ ಜನಾರ್ದನ್‌ ಭಟ್‌ ಅವರ ಮುಂದಾಳತ್ವದಲ್ಲಿ ವೇದಮೂರ್ತಿ ಕಾಪು ಕಲ್ಯಾ ರಜನೀಶ್‌ ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಆರ್ಚಕ ಸಾಂತಿಂಜ ಮಾಧವ ಭಟ್‌ ಅವರ ಪೌರೋಹಿತ್ಯದಲ್ಲಿಬೆಳಿಗ್ಗೆ ಗಣಹೋಮ, ರುದ್ರಾಭಿಷೇಕ, ಶ್ರೀ ಮಾಹಾಲಿಂಗೇಶ್ವರ ದೇವರಿಗೆ ನವಕ ಪ್ರಧಾನ ಅಭಿಷೇಕ, ನವಕ ಪ್ರಧಾನ ಹೋಮ, ದ್ವಾದಶಿ ನಾರಿಕೇಳ ಗಣಹೋಮ, ಶ್ರೀ ದುರ್ಗಾದೇವಿಗೆ ದುರ್ಗಾಹೋಮ, ಪ್ರಸನ್ನ ಪೂಜೆ, ಸಂಜೆ ಮಹಾ ರಂಗ ಪೂಜೆ, ಆನಂತರ ಕುಂಟಾಡಿ ಸುರೇಶ್‌ ಭಟ್‌ ಅವರಿಂದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ, ಪರಿವಾರ ದೇವರಾದ ಶ್ರೀ ಗಣಪತಿ, ಶ್ರೀ ದುರ್ಗೆ, ನವ ಗ್ರಹಗಳಿಗೆ ವಿಶೇಷ ಪೂಜೆ ನಡೆಯಿತು.

ವಿಜಯ ಶೆಟ್ಟಿ ದಂಪತಿ ಮತ್ತು ಮಹೇಶ್‌ ಶೆಟ್ಟಿ ಪೊಲ್ಯ ದಂಪತಿ ಅವರ ಸೇವಾರ್ಥ ಪ್ರಸಾದ ರೂಪದಲ್ಲಿ ಅನ್ನದಾನ ನೆರವೇರಿತು. ಗೌರಿ ಶಂಕರ ಕಾರಿಂಜ, ದೇವರಾಜ್‌ ಭಟ್‌, ರಾಘವೇಂದ್ರ ಉಪಾಧ್ಯಾಯ, ಅನಂತ ಭಟ್‌, ಶ್ರೀಶ ಭಟ್‌, ವಾಸುದೇವ ಭಟ್‌, ಶೀ ವತ್ಸ ಭಟ್‌ ಮತ್ತಿತ್ತರು ವೈದಿಕ ತತ್ವದಡಿ ಸಹಕರಿಸಿದರು. ಟ್ರಸ್ಟಿಗಳಾದ ಸುಂದರ ಶೆಟ್ಟಿಗಾರ್‌, ಅನಿಲ್‌ ಶೆಟ್ಟಿ, ಪ್ರಸನ್ನ ಶೆಟ್ಟಿ ಕುರ್ಕಾಲ್‌, ಪ್ರಸನ್ನ ಶೆಟ್ಟಿ ಬೋಳ ಅವರು ಉಪಸ್ಥಿತರಿದ್ದರು. ಮೀರಾ ಸೊಸೈಟಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮುದಾಯ ಸಂಘಟನೆಗಳ ಪದಾಧಿಕಾರಿಗಳು, ಕನ್ನಡೇತರು ಕಾರ್ಯ ಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವಿಕರಿಸಿದರು.

ಚಿತ್ರ-ವರದಿ : ರಮೇಶ ಅಮೀನ್‌

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.