ಪಾಕಿಸ್ತಾನ ವಿರುದ್ಧ 7ನೇ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾ


Team Udayavani, Jun 17, 2019, 1:16 AM IST

india

ಮ್ಯಾಂಚೆಸ್ಟರ್‌: ವಿಶ್ವಕಪ್‌ನಲ್ಲಿ ಪಾಕಿಸ್ಥಾನ ವಿರುದ್ಧ ಭಾರತದ ಗೆಲುವಿನ ಅಭಿಯಾನ 7ನೇ ಪಂದ್ಯಕ್ಕೆ ವಿಸ್ತರಿಸಿದೆ. ಕ್ರಿಕೆಟ್‌ ಜಗತ್ತು ಕುತೂಹಲದಿಂದ ವೀಕ್ಷಿಸಿದ ಈ ಹೋರಾಟದಲ್ಲಿ ಭಾರತ ಮತ್ತೆ ಆಲ್‌ರೌಂಡ್‌ ಪ್ರದರ್ಶನ ನೀಡಿ ತನ್ನ ಸಾಂಪ್ರ ದಾಯಿಕ ಎದುರಾಳಿಯನ್ನು ಮಣಿಸಲು ಯಶಸ್ವಿಯಾಗಿದೆ.

ಮಳೆಯೂ ಪಾಕಿಸ್ಥಾನ ನೆರವಿಗೆ ಬರಲಿಲ್ಲ. ಡಕ್‌ವರ್ತ್‌ ಲೂಯಿಸ್‌ ನಿಯಮದಡಿ ಭಾರತ 89 ರನ್ನುಗಳಿಂದ ಪಾಕಿಸ್ಥಾನದ ವಿರುದ್ಧ ಜಯಭೇರಿ ಬಾರಿಸಿದೆ.

ಆರಂಭಿಕ ರೋಹಿತ್‌ ಶರ್ಮ ಅವರ ಸ್ಫೋಟಕ ಶತಕ ಮತ್ತು ನಾಯಕ ಕೊಹ್ಲಿ ಅವರ ಬಿರುಸಿನ 77 ರನ್ನಿನಿಂದ ಭಾರತ 5 ವಿಕೆಟಿಗೆ 336 ರನ್ನುಗಳ ಬೃಹತ್‌ ಮೊತ್ತ ಪೇರಿಸಿತು. ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಪಾಕಿಸ್ಥಾನ ಮಳೆ ಬಂದು ಆಟ ನಿಂತಾಗ 35 ಓವರ್‌ಗಳಲ್ಲಿ 6 ವಿಕೆ‌ಟಿಗೆ 166 ರನ್‌ ಗಳಿಸಿ ಒದ್ದಾಡುತ್ತಿತ್ತು. ಆಬಳಿಕ ಡಿಎಲ್‌ ನಿಯಮದಡಿ 40 ಓವರ್‌ಗಳಲ್ಲಿ 302 ರನ್‌ ಗಳಿಸುವ ಗುರಿ ಪಡೆಯಿತು. ಆದರೆ ಪಾಕಿಸ್ಥಾನ 40 ಓವರ್‌ಗಳಲ್ಲಿ 212 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಅಸಾಧಾರಣ ನಿರ್ವಹಣೆ ನೀಡಿದ ಭಾರತೀಯ ತಂಡ ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ತನ್ನ ಅಜೇಯ ಸಾಧನೆಯನ್ನು ಮುಂದು ವರಿಸಿದೆ.

11.000 ರನ್‌ ಕೊಹ್ಲಿ ದಾಖಲೆ
ಏಕದಿನದಲ್ಲಿ ಅತ್ಯಂತ ವೇಗವಾಗಿ 11,000 ರನ್‌ ಗಳಿಸಿದ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದರು. 222 ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ ಅವರು 276 ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದ ಸಚಿನ್‌ ತೆಂಡುಲ್ಕರ್‌ ದಾಖಲೆಯನ್ನು ನೆಲಸಮ ಮಾಡಿದರು.

ರೋಹಿತ್‌ 358 ಸಿಕ್ಸರ್‌
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (ಟಿ20, ಏಕದಿನ, ಟೆಸ್ಟ್‌) ಒಟ್ಟು 358 ಸಿಕ್ಸರ್‌ ಬಾರಿಸಿದ ರೋಹಿತ್‌ ಭಾರತೀಯ ದಾಖಲೆ ನಿರ್ಮಿಸಿದರು. ಈ ವೇಳೆ 355 ಸಿಕ್ಸರ್‌ ಬಾರಿಸಿದ ಧೋನಿ ದಾಖಲೆ ಮೀರಿದರು.

2ನೇ ಶತಕ
ಈ ಕೂಟದಲ್ಲಿ ರೋಹಿತ್‌ 2ನೇ ಶತಕ ಬಾರಿಸಿದರು. ಅಷ್ಟು ಮಾತ್ರವಲ್ಲ ವಿಶ್ವಕಪ್‌ನಲ್ಲಿ ಪಾಕಿಸ್ಥಾನ ವಿರುದ್ಧ ಶತಕ ಬಾರಿಸಿದ 2ನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡರು. ಇದಕ್ಕೂ ಮುನ್ನ ಕೊಹ್ಲಿ ಪಾಕ್‌ ವಿರುದ್ಧ ಶತಕ ಬಾರಿಸಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.