ಕಾರ್ನಾಡ್‌ರಂಥ ಪ್ರಖರ ಚಿಂತಕ ಮತ್ತೊಬ್ಬರಿಲ್ಲ


Team Udayavani, Jun 17, 2019, 3:00 AM IST

Udayavani Kannada Newspaper

ಬೆಂಗಳೂರು: “ಗಿರೀಶ್‌ ಕಾರ್ನಾಡ್‌ ಅವರನ್ನು ಎಡಪಂಥೀಯ ಎನ್ನುವುದರ ಬಗ್ಗೆ ನನಗೆ ಆಕ್ಷೇಪಣೆ ಇದೆ. ಕನ್ನಡ ಚಿತ್ರರಂಗದಲ್ಲಿ ಅವರಂತಹ ಪ್ರಖರ ಚಿಂತಕ ಮತ್ತೊಬ್ಬರಿಲ್ಲ ‘ ಎಂದು ಹಿರಿಯ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಭಾನುವಾರ ಆಯೋಜಿಸಿದ್ದ “ಗಿರೀಶ್‌ ಕಾರ್ನಾಡ್‌’ ನಮನ ಸಲ್ಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ನಾಡ್‌ ನನಗೆ ಸಿನಿಮಾ ವ್ಯಕ್ತಿಗಿಂತ ಹೆಚ್ಚಾಗಿ ಇಷ್ಟವಾಗೋದು ರಂಗಕರ್ಮಿಯಾಗಿ. ರಂಗಭೂಮಿಗೆ ಹೊಸ ಆಯಾಮವನ್ನು ಅವರು ಕೊಟ್ಟವರು. ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಅತಿ ದೊಡ್ಡ ನಷ್ಟ. ಕನ್ನಡ ಚಿತ್ರರಂಗ ಅವರನ್ನು ಸಮರ್ಥವಾಗಿ ಬಳಸಿಕೊಳ್ಳಲಿಲ್ಲ. ಕನ್ನಡ ಚಿತ್ರರಂಗಕ್ಕೆ ಕಾರ್ನಾಡರು ಕೊಟ್ಟಷ್ಟು ಕೊಡುಗೆ ಬೇರೆ ಯಾರೂ ಕೊಟ್ಟಿಲ್ಲ.

ಆದರೂ, ಅವರನ್ನು ಕನ್ನಡ ಚಿತ್ರರಂಗ ಸರಿಯಾಗಿ ಗುರುತಿಸಲಿಲ್ಲ. ಎಂಥೆಂಥವರಿಗೋ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿಯನ್ನು ಕೊಡುತ್ತಾರೆ. ಆದರೆ, ಗಿರೀಶ್‌ ಕಾರ್ನಾಡ್‌ ಅವರಿಗೆ ಕೊನೆಗೂ ಅದು ಸಿಗಲೇ ಇಲ್ಲ. ಕಾರ್ನಾಡರು ಎಂದಿಗೂ ಇಂಥದ್ದನ್ನು ಬಯಸಿದವರೂ ಅಲ್ಲ. ಆದರೆ, ಕನ್ನಡ ಚಿತ್ರರಂಗ ಅವರನ್ನು ಹೊರಗಟ್ಟಿತು ಎಂಬುದು ನನ್ನ ಭಾವನೆ’ ಎಂದು ಗಿರೀಶ್‌ ಕಾಸವರಳ್ಳಿ ಹೇಳಿದರು.

ಕರ್ನಾಟಕ ಚಲಚಿತ್ರ ಅಕಾಡೆಮಿ ಅಧ್ಯಕ್ಷರಾದ ನಾಗತಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಕಾರ್ನಾಡರ ಕೃತಿ, ನಾಟಕ, ಚಿತ್ರಗಳಿಗೆ ಎಂದೂ ಸಾವಿಲ್ಲ. ಅವರು ನಂಬಿದ ಸಿದ್ಧಾಂತದ ನೆಲೆಯಲ್ಲೇ ಬದುಕಿದವರು. ಅವರದ್ದು ಬಹುಮುಖ ವ್ಯಕ್ತಿತ್ವ. ಮರಾಠಿ, ಹಿಂದಿ, ಇಂಗ್ಲೀಷ್‌ ಹೀಗೆ ಹಲವು ಭಾಷೆಗಳಲ್ಲಿ ಹಿಡಿತವಿದ್ದರೂ, ಅವರ ಸಾಹಿತ್ಯ ಕೃಷಿ ಸಾಗಿದ್ದು ಮಾತ್ರ ಕನ್ನಡ ನೆಲದಲ್ಲಿ.

ನಟರಾಗಿ, ಬರಹಗಾರರಾಗಿ, ಸಾಹಿತಿಯಾಗಿ, ನಿರ್ದೇಶಕರಾಗಿ ಅವರು ಜನಮಾನಸದಲ್ಲಿ ಸಾರ್ವಕಾಲಿಕವಾಗಿ ನಿಲ್ಲುತ್ತಾರೆ’ ಎಂದು ನಾಗತಿಹಳ್ಳಿ ಚಂದ್ರಶೇಖರ್‌ ಹೇಳಿದರು. ನಿರ್ದೇಶಕ ನಾಗಾಭರಣ ಮಾತನಾಡಿ, “ನನ್ನ ಸಿನಿಮಾ ಜರ್ನಿಯಲ್ಲಿ ಕಾರ್ನಾಡ್‌ ಅವರ ಪಾತ್ರ ಮಹತ್ವವಾದದ್ದು. ಅವರೊಂದಿಗೆ ನನ್ನ ಸಿನಿಮಾರಂಗದ ಪಯಣ ಶುರುವಾಯಿತು.

ನಾಟಕಕ್ಕೆ ಕಾರಂತರು ಗುರುವಾದರೆ, ಸಿನಿಮಾಗೆ ಗಿರೀಶ್‌ ಕಾರ್ನಾಡ್‌ ನನ್ನ ಗುರು. ಕಾರಂತರು ರಂಗಭೂಮಿಯಲ್ಲಿ ಶಿಸ್ತು ಹೇಳಿಕೊಟ್ಟರೆ, ಕಾರ್ನಾಡರು ಸಿನಿಮಾರಂಗದಲ್ಲಿ ಶಿಸ್ತು ಕಲಿಸಿಕೊಟ್ಟರು. ಕಾರ್ನಾಡ್‌ ಅವರು ಸಿನಿಮಾ ಹೇಗೆ ಮಾಡಬೇಕು, ಸವಾಲುಗಳನ್ನು ಯಾವ ರೀತಿ ಎದುರಿಸಬೇಕು ಎಂಬುದನ್ನು ಹೇಳಿಕೊಟ್ಟ ಮಹಾನ್‌ ಗುರು’ ಎಂದರು.

ಹಿರಿಯ ಕಲಾವಿದೆ ಬಿ.ಜಯಶ್ರೀ ಮಾತನಾಡಿ, “ನಾನು “ಹಯವದನ’ ನಾಟಕದಲ್ಲಿ ನಟಿಸುವಾಗ, ನಾಟಕ ನೋಡಲು ಕಾರ್ನಾಡರು ಬರುತ್ತಿದ್ದರು. ಆ ನಾಟಕದ ಲೇಖಕರು ನಾಟಕ ನೋಡಲು ಬರುತ್ತಾರೆ ಅಂದಾಗ, ಎಲ್ಲೋ ಒಂದು ಕಡೆ ಭಯ ಸಹಜವಾಗಿರುತ್ತಿತ್ತು. ಆದರೆ, ಪ್ರದರ್ಶನದ ಬಳಿಕ ಅವರು ಪ್ರತಿ ಸಲವೂ ಮೆಚ್ಚುಗೆ ವ್ಯಕ್ತಪಡಿಸಿ, ಕೆಲ ಸಲಹೆ ಕೊಟ್ಟು ಹೋಗುತ್ತಿದ್ದರು.

ಕಲಾವಿದರ ಜತೆ ಬಾಂಧವ್ಯ ಇಟ್ಟುಕೊಂಡ ಆ ರೀತಿಯ ಲೇಖಕರು ಕಡಿಮೆ,’ ಎಂದು ಹಳೆಯ ನೆನಪುಗಳನ್ನು ಬಿ.ಜಯಶ್ರೀ ಮೆಲುಕು ಹಾಕಿದರು. ಈ ಸಂದರ್ಭದಲ್ಲಿ ನಿರ್ದೇಶಕ ಕೆ.ಎಂ.ಚೈತನ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಿರೀಶ್‌ ಕಾರ್ನಾಡ್‌ ಅವರ ಆಪ್ತರು, ಶಿಷ್ಯಂದಿರು, ಅಭಿಮಾನಿಗಳು ಹಾಗು ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.