“ಕನ್ನಡ ಕಣ್ಮಣಿ’ ಗೆದ್ದ ಉಡುಪಿಯ ಸಂಹಿತಾ
Team Udayavani, Jun 17, 2019, 9:52 AM IST
ಉಡುಪಿ: ಝೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ “ಕನ್ನಡ ಕಣ್ಮಣಿ’ಯ ಅಂತಿಮ ಸುತ್ತಿನಲ್ಲಿ ಉಡುಪಿಯ ಸಂಹಿತಾ ಜಿ.ಪಿ. “ಕನ್ನಡ ಕಣ್ಮಣಿ’ ಕಿರೀಟ ಧರಿಸಿ ಪ್ರಥಮ ಸ್ಥಾನಿಯಾಗಿದ್ದಾಳೆ. ಶನಿವಾರ ನಡೆದ ಅಂತಿಮ ಸ್ಪರ್ಧೆಯಲ್ಲಿ ಈಕೆ 2 ಲ.ರೂ. ಬಹುಮಾನದೊಂದಿಗೆ ಟ್ರೋಫಿ ಗೆದ್ದಳು.
ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇತರಗತಿ ಓದುತ್ತಿರುವ, ಪರ್ಕಳದ ನಿವಾಸಿ ಈಕೆ ಕನ್ನಡದಲ್ಲಿ ಅರಳು ಹುರಿದಂತೆ ಮಾತಾಡಿ ತೀರ್ಪುಗಾರರ ಮನಸೆಳೆದಳು. ಈಕೆ ಶಿಕ್ಷಕ ಜಿ.ಪಿ. ಪ್ರಭಾಕರ ತುಮರಿ ಮತ್ತು ಮಣಿಪಾಲ ವಿ.ವಿ. ಉದ್ಯೋಗಿ ಕಲ್ಪನಾ ಪಿ. ದಂಪತಿಯ ಪುತ್ರಿ.
“ಕನ್ನಡ ಕಣ್ಮಣಿ’ಯಲ್ಲಿ ರಾಜ್ಯದ 32 ಕೇಂದ್ರಗಳಿಂದ ಸುಮಾರು 30 ಸಾವಿರ ಮಕ್ಕಳಿಗೆ ಆಡಿಷನ್ ನಡೆಸಲಾಗಿತ್ತು. ಫೆಬ್ರವರಿಯಲ್ಲಿ ಆರಂಭಗೊಂಡ ಕಾರ್ಯಕ್ರಮ ಈಗ ಸಮಾಪ್ತಿಗೊಂಡಿದೆ. ತೀರ್ಪುಗಾರರಾಗಿ ನಟ ಜಗ್ಗೇಶ್, ಕವಿ ಜಯಂತ ಕಾಯ್ಕಿಣಿ, ಹಾಸ್ಯ ಕಲಾವಿದ ಪ್ರಾಣೇಶ ಗಂಗಾವತಿ ಭಾಗವಹಿಸಿದ್ದರು. ಬಿಗ್ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ಕಾರ್ಯಕ್ರಮದ ನಿರೂಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್