ಶೋಷಿತ ವರ್ಗದಲ್ಲಿ ಅಕ್ಷರ ಕ್ರಾಂತಿಯಾಗಲಿ

ಅಭಿವೃದ್ಧಿ ಪಥದತ್ತ ಸಾಗಲು ಸಾಕ್ಷರತೆ-ಸಂಸ್ಕಾರ ಅಗತ್ಯ: ಡಾ| ಶಿವಮೂರ್ತಿ ಮುರುಘಾ ಶರಣರು

Team Udayavani, Jun 17, 2019, 1:09 PM IST

17-June-18

ಚಿತ್ರದುರ್ಗ: ದಶಮಾನೋತ್ಸವ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

ಚಿತ್ರದುರ್ಗ: ಶೋಷಿತ ತಳ ಸಮುದಾಯಗಳು ಸೇರಿದಂತೆ ಮಧ್ಯಮ ವರ್ಗದ ಕುಟುಂಬಗಳಲ್ಲಿ ಅಕ್ಷರ ಕ್ರಾಂತಿಯಾದರೆ ಸ್ವಾಭಿಮಾನದ ಕ್ರಾಂತಿ ಉದಯವಾಗಲಿದೆ ಎಂದು ಡಾ| ಶಿವಮೂರ್ತಿ ಶರಣರು ಹೇಳಿದರು.

ನಗರದ ಅಮೋಘ ಇಂಟರ್‌ನ್ಯಾಷನಲ್ ಹೋಟೆಲ್ನಲ್ಲಿ ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ದಶಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.

ಸ್ವಾಭಿಮಾನದ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾದಾನದ ಜೊತೆಗೆ ಅನ್ನದಾನವೂ ಆಗಬೇಕು. ವಿದ್ಯಾ ಕ್ರಾಂತಿ, ದಾಸೋಹ ಕ್ರಾಂತಿ ಹೆಚ್ಚೆಚ್ಚು ನಡೆದರೆ ಅನೇಕ ಸಮುದಾಯಗಳು ಮುಖ್ಯವಾಹಿನಿಗೆ ಬರಲಿವೆ ಎಂದರು.

ಅವಕಾಶ ವಂಚಿತ ಕುಟುಂಬಗಳ ಮಕ್ಕಳಿಗೆ ಅನ್ನದಾನ ಮಾಡದೆ ಹೋದರೆ ವಿದ್ಯೆ ದಾನ ಮಾಡಲು ಆಗುವುದಿಲ್ಲ. ಇವೆರಡು ಪರಸ್ಪರ ಪೂರಕ ಎಂಬ ಪ್ರಜ್ಞೆ ಜಯದೇವ ಜಗದ್ಗುರುಗಳಲ್ಲಿ ಇತ್ತು. ಅಂದಿನಿಂದ ಇಂದಿನಿವರೆಗೂ ನಮ್ಮ ಮಠ ಅನ್ನದಾನ ಹಾಗೂ ಅಕ್ಷರ ದಾನ ಎರಡನ್ನು ಮಾಡಿಕೊಂಡು ಬರುತ್ತಿದೆ. ನಾಡಿನ ಬಹುತೇಕ ಮಠಗಳು ಇಂತಹ ಕಾರ್ಯಕ್ರಮ ಮಾಡಿಕೊಂಡು ಬರುತ್ತಿರುವುದರಿಂದ ಮಠಗಳಿಗೆ ಸೈದ್ಧಾಂತಿಕ ಹಿನ್ನೆಲೆಯಿದೆ. ಸ್ವಾಭಿಮಾನವನ್ನು ಕಟ್ಟಿಕೊಡುವ ಕಾರ್ಯ ಮಾಡುತ್ತಿವೆ ಎಂದು ತಿಳಿಸಿದರು.

ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜ ಅಕ್ಷರ ಸಂಸ್ಕೃತಿಗೆ ಒಳಗಾಗಬೇಕು. ಕುಂಚಿಟಿಗ ಸಮಾಜ ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿದೆ. ಎಲ್ಲ ರೀತಿಯ ಮೌಡ್ಯಗಳನ್ನು ಬಿಟ್ಟು ಬಡತನಕ್ಕೆ ಅಂಜದೆ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ಕೊಡಿ. ಕೆಲವು ಸಮಾಜಗಳಲ್ಲಿ ಅಕ್ಷರ ಸಂಸ್ಕೃತಿ ಇದೆ, ಆದರೆ ನಾಗರೀಕ ಸಂಸ್ಕೃತಿಯೇ ಇರುವುದಿಲ್ಲ ಎಂದು ವಿಷಾದಿಸಿದರು.

ವಿದ್ಯಾವಂತರಾದವರ ಬದುಕು ಪ್ರಕಾಶಮಾನವಾಗಿರುತ್ತದೆ. ಪ್ರತಿಭೆ ಯಾವುದೇ ಸಮುದಾಯಕ್ಕೆ ಸೀಮಿತವಲ್ಲ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು. ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 95 ಕ್ಕೂ ಹೆಚ್ಚು ಅಂಕಗಳನ್ನು ಪಡೆದಿದ್ದಾರೆಂದರೆ ನಿಜಕ್ಕೂ ದೊಡ್ಡ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಕ್ಷರತೆ, ಸಂಸ್ಕಾರ ಎರಡೂ ಜೀವನಕ್ಕೆ ಅತ್ಯವಶ್ಯಕ. ಸಂಸ್ಕಾರದ ಜೊತೆ ಸಾಗಿದಾಗ ಮಾತ್ರ ಪ್ರಗತಿ ಪಥದತ್ತ ಸಾಗಲು ಸಾಧ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಬೇಕಾಗಿರುವುದರಿಂದ ಒಂದೊಂದು ಅಂಕಕ್ಕೂ ಮೌಲ್ಯವಿದೆ. ನಿರಂತರ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಎಲ್.ಬಿ. ರಾಜಶೇಖರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಕುಂಚಿಟಿಗ ಲಿಂಗಾಯತ ಸಮಾಜವನ್ನು ಸಂಘಟಿಸಲು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಪ್ರತಿ ವರ್ಷ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಬೇಕಾದರೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಮಾಜಕ್ಕೆ ಆರ್ಥಿಕ ನೆರವು ನೀಡಿದಾಗ ಮಾತ್ರ ಕುಂಚಿಟಿಗ ವೀರಶೈವ ಲಿಂಗಾಯತರು ಅಭಿವೃದ್ಧಿ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ. ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಮುಖಂಡರುಗಳಾದ ಪರಮೇಶ್ವರಪ್ಪ, ನಿವೃತ್ತ ಉಪನ್ಯಾಸಕ ಕುಬೇರಪ್ಪ, ವಿಶ್ವನಾಥ್‌, ಶಿವಪ್ರಕಾಶ್‌, ಜಿ.ಎಸ್‌. ಉಜ್ಜಿನಪ್ಪ, ದಗ್ಗೆ ಶಿವಪ್ರಕಾಶ್‌ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಡಿವೈಎಸ್ಪಿ ರಾಜಪ್ಪ ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ ಡಾಕ್ಟರೆಟ್ ಪಡೆದಿರುವ ಮಂಜಣ್ಣ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.