ಬಾಲ್ಯದಲ್ಲಿಯೇ ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸಲು ಸಲಹೆ
ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಸಂವಾದ
Team Udayavani, Jun 17, 2019, 2:18 PM IST
ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಸ್ಕೂಲ್ ಚಂದನದಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ 'ಸತ್ಕಾರ ಚಂದನ' ಗೌರವ ಸ್ವೀಕರಿಸಿದರು.
ಲಕ್ಷ್ಮೇಶ್ವರ: ಶಾಲೆ ಮತ್ತು ಮನೆಗಳಲ್ಲಿ ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಆತ್ಮಸ್ಥೈರ್ಯ, ನೈತಿಕ ಮೌಲ್ಯ, ನಾಯಕತ್ವಗುಣ ಬೆಳೆಸಬೇಕು. ಇಂತಹ ವಾತಾವರಣ ನಿರ್ಮಿಸಬೇಕು ಎಂದು ರಾಜ್ಯದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹೇಳಿದರು.
ಭಾನುವಾರ ಪಟ್ಟಣದ ಸ್ಕೂಲ್ ಚಂದನ ವಿದ್ಯಾರ್ಥಿಗಳೊಂದಿಗೆ ಚಂದನ-ಸ್ಪಂದನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರತಿ ಮಗುವೂ ವಿಶೇಷ-ವಿಭಿನ್ನವಾದ ಪ್ರತಿಭೆ ಹೊಂದಿರುತ್ತದೆ. ಕಲಿಕಾ ಹಂತದಲ್ಲಿ ದೇಹ, ಮನಸ್ಸು, ಭಾವ ಶುದ್ಧಿಯಾಗಿದ್ದಾಗ ಗ್ರಹಣ ಶಕ್ತಿ ಚನ್ನಾಗಿರುತ್ತದೆ. ಆದ್ದರಿಂದ ಮಕ್ಕಳನ್ನು ಸಾಧನೆ ಹಾದಿಯಲ್ಲಿ ಕರೆದೊಯ್ಯುವ ಪ್ರಾಮಾಣಿಕ ಪ್ರಯತ್ನ ಶಿಕ್ಷಕ ಮತ್ತು ಪಾಲಕರದ್ದಾಗಿದೆ ಎಂದರು.
ಕಾರ್ಯಕ್ರಮದ ಮೊದಲು ಚಂದನ ಶಾಲೆ ಬ್ಯಾಂಡ್ ಮ್ಯೂಸಿಕ್ನ ವಿದ್ಯಾರ್ಥಿಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ರವಿ ಡಿ. ಚನ್ನಣ್ಣನವರಿಗೆ ಶಾಲೆಯಿಂದ ‘ಸತ್ಕಾರ ಚಂದನ’ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಸಂಸ್ಥಾಪಕರಾದ ಟಿ. ಈಶ್ವರ ಮಾತನಾಡಿದರು. ಡಿವೈಎಸ್ಪಿ ಕಲ್ಲೇಶಪ್ಪ, ಎಚ್.ಸಿ. ರಟಗೇರಿ, ಡಿ.ಬಿ. ತಟ್ಟಿ, ವಿ.ಜಿ. ಪಡಗೇರಿ, ವಿಜಯ ಕರಡಿ, ನವೀನ ಕಗ್ಗಲಗೌಡರ, ಪ್ರಾಚಾರ್ಯ ಆರ್.ಜಿ. ಬಾವನವರ, ಪಟ್ಟಣದ ಗಣ್ಯರು, ಪಾಲಕರು, ವಿವಿಧೆಡೆಯಿಂದ ಆಗಮಿಸಿದ್ದ ಐಎಎಸ್, ಐಪಿಎಸ್ ಸೇರಿ ಸರ್ಧಾತ್ಮಕ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಚೈತ್ರಾ, ರಿಹಾನ್ ಮಲೀಕ, ನವ್ಯಾ, ಕಾರ್ತಿಕ, ಸ್ನೇಹಾ, ಸಂಕೇತ ನಿರ್ವಹಿಸಿದರು. ನಂತರಚಂದನ ಸಂದನ ಸಂವಾದ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ