ಕಮಲಾಪುರವನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಿ

ಜಲಾಶಯದ ಉಳಿವಿಗೆ ಕೇಂದ್ರ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿ: ಉಗ್ರಪ್ಪ

Team Udayavani, Jun 17, 2019, 4:14 PM IST

17-June-34

ಹೊಸಪೇಟೆ: ಕಮಲಾಪುರ ಪಟ್ಟಣ ಪಂಚಾಯಿತಿ ನೂತನ ಕಾಂಗ್ರೆಸ್‌ ಸದಸ್ಯರನ್ನು ಸನ್ಮಾನಿಸಲಾಯಿತು.

ಹೊಸಪೇಟೆ: ವಿಶ್ವ ಪ್ರಸಿದ್ಧ ಹಂಪಿಯ ಕೂಗಳತೆ ದೂರದಲ್ಲಿರುವ ಐತಿಹಾಸಿಕ ಕಮಲಾಪುರವನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ನೂತನ ಪಟ್ಟಣ ಪಂಚಾಯ್ತಿ ಸದಸ್ಯರು ಶ್ರಮವಹಿಸಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಸಲಹೆ ನೀಡಿದರು.

ನಗರದ ಶಾಸಕ ಆನಂದ ಸಿಂಗ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಮಲಾಪುರ ಪಟ್ಟಣ ಪಂಚಾಯಿತಿ ನೂತನ ಕಾಂಗ್ರೆಸ್‌ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಂಪಿಗೆ ಭೇಟಿ ನೀಡುವ ದೇಶ-ವಿದೇಶ ಪ್ರವಾಸಿಗರು, ಕಮಲಾಪುರ ಮೂಲಕ ಹಾದುಹೋಗುವುದರಿಂದ ಇಲ್ಲಿನ ವಸತಿ ಸಮಸ್ಯೆ, ಕುಡಿಯುವ ನೀರು, ರಸ್ತೆ, ಮಹಿಳೆಯರ ಸ್ನಾನಗೃಹದ ಸಮಸ್ಯೆ ಕಾಡುತ್ತಿದ್ದು, ನೂತನ ಕಮಲಾಪುರ ಪಟ್ಟಣ ಪಂಚಾಯ್ತಿಗೆ ಆಯ್ಕೆಯಾಗಿರುವ 17 ಜನ ನೂತನ ಸದಸ್ಯರು, ಆ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಅಸ್ಥಿರತೆ ಕಾಡುತ್ತಿದೆ. ಕಾರಣ ಪಕ್ಷ ನಿಷ್ಠೆ ಮರೆತಿರುವುದು. ಗ್ರಾ.ಪಂ, ತಾ.ಪಂ, ಜಿ.ಪಂ, ಶಾಸಕರು ಗೆದ್ದ ಕೂಡಲೇ ಪಕ್ಷಾಂತರ ಮಾಡುತ್ತಿದ್ದಾರೆ. ಪಕ್ಷ ದ್ರೋಹ ಮಾಡಬೇಡಿ. ಅಂತಹವರಿಗೆ ಹಂಪಿ ವಿರೂಪಾಕ್ಷೇಶ್ವರ ಬುದ್ಧಿ ಕಲಿಸುತ್ತಾನೆ ಎಂದರು.

ಮೋದಿ ಅವರು ದೇವಸ್ಥಾನಕ್ಕೆ ತೆರಳಿ ತುಲಾಭಾರ ಮಾಡಿಸಿಕೊಳ್ಳುವುದರಿಂದ ಅಭಿವೃದ್ಧಿ ಆಗುವುದಿಲ್ಲ. ತುಂಗಭದ್ರಾ ಜಲಾಶಯ 33 ಅಡಿಯಷ್ಟು ಹೂಳು ತುಂಬಿದೆ. ಇದರಿಂದ ನೀರಿನ ಶೇಖರಣೆ ಕುಸಿದಿದೆ. ಜಲಾಶವಿದ್ದರೂ ಸಹ ಬಳ್ಳಾರಿಯಲ್ಲಿ 15 ದಿನಕ್ಕೊಮ್ಮೆ ನೀರನ್ನು ಬಿಡಲಾಗುತ್ತಿದೆ. ಹೊಳೆತ್ತುವುದಕ್ಕೆ 12,500 ಕೋಟಿ ಹಾಗೂ ಹೂಳನ್ನು ಹಾಕಲು 65 ಸಾವಿರ ಎಕರೆ ಬೇಕಾಗುತ್ತದೆ. ಅದೇ, ಸಮಾನಂತರ ಜಲಾಶಯ ನಿರ್ಮಾಣ ಮಾಡುವುದಕ್ಕೆ 9 ಸಾವಿರ ಕೋಟಿ ಬೇಕಾಗುತ್ತದೆ. ಕಳೆದ ವರ್ಷ 193 ಟಿಎಂಸಿ ನೀರು ಹರಿದು ಹೋಗಿದೆ. ಜಲಾಶಯದ ಉಳಿವಿಗೆ ಕೇಂದ್ರ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರ ತುಂಗಭದ್ರಾ ಜಲಾಶಯದ ಮಂಡಳಿಯ ಅಧ್ಯಕ್ಷರನ್ನು ನೇಮಕ ಮಾಡುತ್ತಾರೆ. ಮಂಡಳಿಯಲ್ಲಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳು ಇರಬಾರದು ಎಂದು ಕಾನೂನು ಇದ್ದರೇ, ಈ ಕುರಿತು ಹೋರಾಟ ಮಾಡಲಾಗುವುದು. ಜಿಂದಾಲ್ ಸಂಸ್ಥೆಯ ಭೂಮಿ ಮಾರಾಟ ಮಾಡುವ ಕುರಿತು ಉಪ ಸಮಿತಿ ರಚಿಸಲಾಗಿದೆ. ಅಲ್ಲದೇ, ಮಾರಾಟ ಮಾಡುವ ಕುರಿತು ಸ್ಪಷ್ಟತೆ ಇಲ್ಲ. ಸರಕಾರ ಮತ್ತು ಜಿಂದಾಲ್ ಸಂಸ್ಥೆ ಭೂಮಿ ಮಾರಾಟ ಕುರಿತು ಹೇಳಿಕೆ ನೀಡಿಲ್ಲ. ಹಾಗಾಗಿ ಈ ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ. ಶಾಸಕ ಆನಂದ ಸಿಂಗ್‌ ಅವರ ಸ್ವಂತ ಅಭಿಪ್ರಾಯವಾಗಿದೆ. ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಸ್ವಾತಂತ್ರವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಖಂಡ ಸಂದೀಪ ಸಿಂಗ್‌ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಗಿರೀಶ್‌ ಕಾರ್ನಾಡ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಕಮಲಾಪುರ ಪಟ್ಟಣ ಪಂಚಾಯಿತಿ ಚುನಾಯಿತ ಸದಸ್ಯರಿಗೆ ಗೌರವಿಸಲಾಯಿತು.

ಕಾಂಗ್ರೆಸ್‌ ಗ್ರಾಮೀಣ ಜಿಲ್ಲಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ಶಿವಯೋಗಿ, ಬ್ಲಾಕ್‌ ಅಧ್ಯಕ್ಷರಾದ ಟಿ.ರಫೀಕ್‌, ಅಮಾಜಿ ಹೇಮಣ್ಣ, ಮುಖಂಡರಾದ ಎಚ್.ಎನ್‌.ಎಫ್.ಇಮಾಮ್‌ ನಿಯಾಜಿ, ಎಲ್.ಸಿದ್ದನಗೌಡ, ಅಯ್ನಾಳಿ ತಿಮ್ಮಪ್ಪ, ಗುಜ್ಜಲ ರಘು, ವೀರಸ್ವಾಮಿ, ಫ‌ಯಿಮ್‌ ಬಾಷಾ, ಡಿ.ವೆಂಕಟರಮಣ, ಉದ್ದಾನಪ್ಪ, ಕೆ.ಮುಕ್ತಿಯಾರ ಪಾಷಾ, ನಿಂಬಗಲ್ ರಾಮಕೃಷ್ಣ, ಎನ್‌.ವೆಂಕಟೇಶ, ವಿ.ಸೋಮಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.