ಗೋಕರ್ಣ ಸಮೀಪ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆ


Team Udayavani, Jun 18, 2019, 3:02 AM IST

gokarna

ಬೆಂಗಳೂರು: ವೇದ, ಪುರಾಣ, ಸಮರ ಕಲೆ ಸಹಿತವಾಗಿ ಆಧುನಿಕ ಶಿಕ್ಷಣವನ್ನು ಭಾರತೀಯ ವ್ಯವಸ್ಥೆಯೊಳಗೆ ನೀಡಲು ಗೋಕರ್ಣದ ಸಮೀಪದಲ್ಲಿ ತಕ್ಷಶಿಲಾ ಮಾದರಿಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಸ್ಥಾಪನೆ ಮಾಡಲಿದ್ದೇವೆ ಎಂದು ರಾಮಚಂದ್ರಪುರ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಘೋಷಿಸಿದರು.

ಸರ್ಕಾರದ ಸಹಾಯಧನ ಹಾಗೂ ಮಾನ್ಯತೆ ಇಲ್ಲದೆಯೇ ತಕ್ಷಶಿಲೆ ಮಾದರಿಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಆರಂಭಿಸಲಿದ್ದೇವೆ. ವಿಶ್ವವಿದ್ಯಾಲಯ, ಪಠ್ಯಕ್ರಮ ಮತ್ತು ಬೋಧನಾ ವಿಧಾನ ಇತ್ಯಾದಿಗಳನ್ನು ಹಂತ ಹಂತವಾಗಿ ಸಿದ್ಧಪಡಿಸಿಕೊಂಡು 2020ರ ಏಪ್ರಿಲ್‌ 26ರಂದು ಉದ್ಘಾಟನೆ ನೆರವೇರಿಸಲಿದ್ದೇವೆ.

ಬಹುಮಹಡಿ ಕಟ್ಟಡಗಳನ್ನು ನಿರ್ಮಿಸದೆ, ಕುಟೀರಗಳು ಹಾಗೂ ಪ್ರಕೃತಿಯ ಮಡಿಲಲ್ಲಿ ಮಕ್ಕಳಿಗೆ ಭಾರತೀಯ ಶಿಕ್ಷಣ ಪದ್ಧತಿಯಂತೆ ವಿದ್ಯಾಭ್ಯಾಸ ನೀಡುವ ವ್ಯವಸ್ಥೆ ಇದಾಗಿದೆ ಎಂದು ಸೋಮವಾರ ಗಿರಿನಗರದ ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿ ಮಾಹಿತಿ ನೀಡಿದರು.

ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ಜೂನ್‌ 20ರಿಂದ ಧಾರಾ ರಾಮಾಯಣ ಪ್ರವಚನ ನಡೆಯಲಿದೆ. ಸಾಮವೇದ ಒಂದು ಕಾಲದಲ್ಲಿ ಸಹಸ್ರ ಶಾಖೆಗಳನ್ನು ಹೊಂದಿತ್ತು. ಈಗ ಮೂರು ಶಾಖೆಗಳು ಮಾತ್ರ ಉಳಿದುಕೊಂಡಿದೆ. ಭಾರತೀಯ ಮೂಲದ ಪ್ರತಿ ವಿದ್ಯೆಯ ಕಥೆಯೂ ಹೀಗೆ ಇದೆ.

ನಮ್ಮ ಪೂರ್ವಜರು ಕಂಡುಕೊಂಡ ಒಂದೊಂದು ವಿದ್ಯೆಯೂ ಪಾಶ್ಚಿಮಾತ್ಯರ ದಾಳಿಯಿಂದ ಅರ್ಥಕಳೆದು ಹೋಗುತ್ತಿದೆ. ಅಳಿವಿನ ಅಂಚಿನಲ್ಲಿರುವ ಭಾರತೀಯ ವಿದ್ಯೆಯ ಪ್ರಕಾರದ ಪುನರುಜ್ಜಿವನಕ್ಕಾಗಿ ತಕ್ಷಶಿಲೆ ಮಾದರಿಯಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ರಚನೆ ಮಾಡುವ ಯೋಜನೆ ಇದಾಗಿದೆ ಎಂದು ವಿವರ ನೀಡಿದರು.

ಭಾರತೀಯತೆಯೇ ಈ ವಿಶ್ವವಿದ್ಯಾಲಯಕ್ಕೆ ಸೇರಲು ಬೇಕಿರುವ ಅರ್ಹತೆಯಾಗಿದೆ. ಜಾತಿ, ಮತ ಪಂಥ ಬೇಧವಿಲ್ಲದೆ ಎಲ್ಲರೂ ದಾಖಲಾಗಬಹುದು ಎಂದು ತಿಳಿಸಿದರು. ವೇದ- ಶಾಸ್ತ್ರಗಳು, ಪರಂಪರೆ- ಪದ್ಧತಿಗಳನ್ನು ಒಳಗೊಂಡ ಸಮಗ್ರ ಭಾರತೀಯ ಸಂಸ್ಕೃತಿಯ ಮಹತ್ವದ ಸಂಗತಿಗಳ ಕುರಿತು ಸಂಶೋಧನೆ ನಡೆಸಲು ಸಂಶೋಧನಾಲಯವನ್ನು ಸ್ಥಾಪಿಸಲಾಗುತ್ತದೆ.

ಇಡೀ ದೇಶದಲ್ಲೇ ವಿಭಿನ್ನವಾದ ವಿಶ್ವವಿದ್ಯಾಲಯವಾಗಿ ಇದು ರೂಪುಗೊಳ್ಳಲಿದೆ. ಹಾಗೆಯೇ ಅಲ್ಲೇ ಸಮೀಪದ ಮಲ್ಲಿಕಾರ್ಜುನ ದೇವಸ್ಥಾನದ ಪರಿಸರದಲ್ಲಿ ಶಂಕರ ಥೀಮ್‌ ಪಾರ್ಕ್‌ ನಿರ್ಮಾಣ ಮಾಡಲಾಗುತ್ತದೆ. ಅವರ ಜೀವನ ಸಾಧನೆಗಳನ್ನು ಶಿಲ್ಪ ಕಲೆಗಳ ಮೂಲಕ ಅನಾವರಣಗೊಳಿಸಲಾಗುತ್ತದೆ.

ದಿವ್ಯೌಷಧವನ, ಸಂಶೋಧನಾಲಯ, ಆಡಿಯೋ, ವಿಡಿಯೋ ಪ್ರದರ್ಶಿನಿ, ವಸ್ತುಸಂಗ್ರಹಾಲಯ ಹಾಗೂ ಬೃಹತ್‌ ಶಾಂಕರ ಗ್ರಂಥ ಸಂಗ್ರಹಾಗಾರ ನಿರ್ಮಿಸಲಿದ್ದೇವೆ ಎಂದು ತಿಳಿಸಿದರು. ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್‌, ಧಾರಾ ರಾಮಾಯಣ ಕ್ರಿಯಾ ಸಮಿತಿ ಅಧ್ಯಕ್ಷೆ ಡಾ.ಶಾರದಾ ಜಯಗೋವಿಂದ್‌, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

5 ಲಕ್ಷ ದೇಣಿಗೆ: ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗಾಗಿ ಹೊರನಾಡು ಕ್ಷೇತ್ರದ ವತಿಯಿಂದ 5 ಲಕ್ಷ ರೂ. ಮೊದಲ ದೇಣಿಗೆಯಾಗಿ ಧರ್ಮದರ್ಶಿ ಭೀಮೇಶ್ವರ ಜೋಶಿಯವರು ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಸಮರ್ಪಿಸಿದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.