ಆರೋಗ್ಯ ಇಲಾಖೆಗೆ ಸಿಎಂ ಸೂಚನೆ
Team Udayavani, Jun 18, 2019, 3:00 AM IST
ಬೆಂಗಳೂರು: ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಭಾರತೀಯ ವೈದ್ಯಕೀಯ ಸಂಘವು ದೇಶಾದ್ಯಂತ ಮುಷ್ಕರ ಹಮ್ಮಿಕೊಂಡಿರುವುದರಿಂದ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ/ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದ್ದಾರೆ.
ಎಲ್ಲ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಯಾವುದೇ ರಜೆಯ ಮೇಲೆ ತೆರಳದೆ ಕರ್ತವ್ಯ ನಿರ್ವಹಿಸಲು ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರು ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.