ಕುಂದಾಪುರ: ಖಾಸಗಿ ಆಸ್ಪತ್ರೆ ವೈದ್ಯರ ಪ್ರತಿಭಟನೆ
Team Udayavani, Jun 18, 2019, 6:18 AM IST
ಕುಂದಾಪುರ: ಕರ್ತವ್ಯ ನಿರತ ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಕೇಂದ್ರ ಐ.ಎಂ.ಎ.ಯ ಕರೆಯ ಮೇರೆಗೆ ಸೋಮವಾರ 24 ತಾಸುಗಳ ವೈದ್ಯಕೀಯ ಪ್ರತಿಭಟನೆ ಆರಂಭಿಸಲಾಯಿತು. ಬೆಳಗ್ಗೆ 6 ಗಂಟೆಗೆ ಆರಂಭವಾದ ಪ್ರತಿಭಟನೆ ಮಂಗಳವಾರ ಬೆಳಗ್ಗೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ.
ಕೆಲವು ದಿನಗಳ ಹಿಂದೆ ಕೊಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಗುಂಪೊಂದರ ಹಲ್ಲೆಯಿಂದ ಡಾ| ಪರಿಭಾ ಮುಖರ್ಜಿಯೆಂಬ ಕಿರಿಯ ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೈದ್ಯರಕ್ಷಣೆಯ ನಿಟ್ಟಿನಲ್ಲಿ ರಾಷ್ಟ್ರೀಯ ಕಾಯಿದೆಯನ್ನು ರೂಪಿಸಿ ಅನುಷ್ಠಾನ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವೈದ್ಯರು ಸಾಂಕೇತಿಕವಾಗಿ ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸುವುದರ ಮೂಲಕ ಸಾರ್ವಜನಿಕರ ಗಮನ ಸೆಳೆಯುವುದರೊಂದಿಗೆ ಸಾಂಘಿಕ ಪ್ರತಿಭಟನೆ ನಡೆಸಲಾಗಿತ್ತು. ಕುಂದಾಪುರ ಉಪ ಆಯುಕ್ತರ ಮೂಲಕ ಪ್ರಧಾನಿ ಮತ್ತು ಗƒಹ ಸಚಿವರಿಗೆ ಲಿಖೀತ ಮನವಿ ಪತ್ರ ಸಲ್ಲಿಸಲಾಗಿತ್ತು.
ಈಗ ಅದರ ಮುಂದುವರಿದ ಭಾಗವಾಗಿ ರೋಗಿಗಳ ತಪಾಸಣೆ ನಡೆಸದೇ ಮುಷ್ಕರ ನಡೆಸಲಾಗಿದೆ. ಹೊರರೋಗಿಗಳ ತಪಾಸಣೆಯನ್ನು ಪೂರ್ಣವಾಗಿ ನಿಲ್ಲಿಸಲಾಗಿತ್ತು. ತುರ್ತು ಚಿಕಿತ್ಸೆ ಹಾಗೂ ಒಳರೋಗಿಗಳ ಚಿಕಿತ್ಸೆಯನ್ನಷ್ಟೇ ನೀಡಲಾಗುತ್ತಿತ್ತು. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಮುಷ್ಕರದ ಕುರಿತು ತಿಳಿವಳಿಕೆ ಮೂಡಿಸುವ, ಹೊರರೋಗಿ ಚಿಕಿತ್ಸೆ ಇಲ್ಲ ಎನ್ನುವ ಫಲಕಗಳನ್ನು ಪ್ರವೇಶದ್ವಾರದಲ್ಲೇ ಅಳವಡಿಸಲಾಗಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಸಿಬಂದಿಯನ್ನು ನಿಯೋಜಿಸದಿದ್ದರೂ ಹೆಚ್ಚುವರಿ ರೋಗಿಗಳಂತೂ ಇದ್ದರು. ಎಂದಿಗಿಂತ ತುಸು ಹೆಚ್ಚೇ ರೋಗಿಗಳ ಸಂಖ್ಯೆ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್