ಮೆಟ್ರೋ ಕಾಮಗಾರಿ: ಸಂಚಾರ ನಿರ್ಬಂಧ


Team Udayavani, Jun 18, 2019, 3:06 AM IST

Metro-(1)

ಬೆಂಗಳೂರು: ನಗರದ “ಹಾಟ್‌ ಸ್ಪಾಟ್‌’ ಎಂ.ಜಿ.ರಸ್ತೆ ಹಾಗೂ ಅದಕ್ಕೆ ಕೂಡುವ ರಸ್ತೆಗಳ ಆಯ್ದ ಮಾರ್ಗಗಳಲ್ಲಿ ಇನ್ನುಮುಂದೆ ಎಂದಿಗಿಂತ ಹೆಚ್ಚು ವಾಹನದಟ್ಟಣೆ ಸಮಸ್ಯೆ ಉಂಟಾಗಲಿದೆ. ಅದೂ ಒಂದಲ್ಲ, ಎರಡಲ್ಲ; ಮುಂದಿನ ಸುಮಾರು ಮೂರು ವರ್ಷ ಈ ಸಮಸ್ಯೆ ಎದುರಿಸಲು ಸಾರ್ವಜನಿಕರು ಮಾನಸಿಕವಾಗಿ ಸಜ್ಜಾಗಬೇಕಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು “ನಮ್ಮ ಮೆಟ್ರೋ’ ಎರಡನೇ ಹಂತದ ಸುರಂಗ ಮಾರ್ಗ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉದ್ದೇಶಿತ ಎಂ.ಜಿ. ರಸ್ತೆಯ ಹಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ, ಪರ್ಯಾಯ ರಸ್ತೆಗಳಲ್ಲಿ ಎಂದಿಗಿಂತ ವಾಹನಗಳ ಸಂಚಾರ ಅಧಿಕವಾಗಲಿದೆ. ಅದರಲ್ಲೂ ಪೀಕ್‌ ಅವರ್‌ನಲ್ಲಿ ಇದರ ಬಿಸಿ ಜನರಿಗೆ ತುಸು ಜೋರಾಗಿಯೇ ತಟ್ಟಲಿದೆ.

ಏಕಾಏಕಿ ನಿರ್ಬಂಧ ವಿಧಿಸಿದ್ದರಿಂದ ಭಾನುವಾರದಿಂದಲೇ ವಾಹನ ಸವಾರರು ಗೊಂದಲಕ್ಕೀಡಾದರು. ಸೋಮವಾರ ಇದು ಹೆಚ್ಚು ಕಿರಿಕಿರಿ ಉಂಟುಮಾಡಿತು. ವಾರಾಂತ್ಯ ರಜೆ ಮುಗಿಸಿಕೊಂಡು ಎಂದಿನಂತೆ ಕೆಲಸಕ್ಕೆ ಹೊರಟವರಿಗೆ ಮೆಟ್ರೋ ಬ್ಯಾರಿಕೇಡ್‌ಗಳು ಬ್ರೇಕ್‌ ಹಾಕಿದವು. ಗಲಿಬಿಲಿಗೊಂಡ ವಾಹನ ಸವಾರರಿಗೆ ಸಂಚಾರ ಪೊಲೀಸರು ನೆರವಾದರು. ಪರ್ಯಾಯ ಮಾರ್ಗಗಳನ್ನು ಬಳಸಲು ಸಲಹೆ ನೀಡಿದರು.

ಎರಡನೇ ಹಂತದಲ್ಲಿ ಡೈರಿ ವೃತ್ತದಿಂದ ನಾಗವಾರದವರೆಗೆ ಸುರಂಗ ಮಾರ್ಗ ನಿರ್ಮಾಣ ಆಗಲಿದ್ದು, ಇದು ಎಂ.ಜಿ. ರಸ್ತೆ ಮೂಲಕ ಹಾದುಹೋಗಲಿದೆ. ಎಂ.ಜಿ.ರಸ್ತೆಯ ನೆಲದಡಿಯ ಮೆಟ್ರೊ ನಿಲ್ದಾಣ ಕಾಮಗಾರಿ ಕಾಮರಾಜ ರಸ್ತೆಯಲ್ಲೇ ನಡೆಯಲಿದೆ. ಹಾಗಾಗಿ ಕಾಮರಾಜ ರಸ್ತೆಯಲ್ಲಿ ಎಂ.ಜಿ.ರಸ್ತೆ ಹಾಗೂ ಕಬ್ಬನ್‌ ರಸ್ತೆ ನಡುವೆ ವಾಹನ ಸಂಚಾರವನ್ನು ಭಾನುವಾರದಿಂದ ನಿರ್ಬಂಧಿಸಲಾಗಿದೆ.

ಬಿಎಂಆರ್‌ಸಿಯು ಈ ಸುರಂಗ ಮಾರ್ಗ ಹಾಗೂ ನೆಲದಡಿಯ ನಿಲ್ದಾಣ ಕಾಮಗಾರಿಗಳನ್ನು 42 ತಿಂಗಳುಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದರು. ಸುರಂಗ ಮಾರ್ಗದ ಮೆಟ್ರೊ ನಿಲ್ದಾಣಗಳನ್ನು ರಸ್ತೆಯಲ್ಲೇ ನಿರ್ಮಿಸಬೇಕಾದ ಕಡೆ ವಾಹನ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯ.

ಕಾಮಗಾರಿ ಪೂರ್ಣಗೊಂಡ ಬಳಿಕ ನಿಗಮದಿಂದಲೇ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದೂ ಅಧಿಕಾರಿಗಳು ಸ್ಪಷ್ಟಪಡಿಸಿದರು. ಕಾಮರಾಜ ರಸ್ತೆಗೆ ಬದಲಿಯಾಗಿ ಬಳಸುವ ಎಂ.ಜಿ.ರಸ್ತೆ ಹಾಗೂ ಆಸುಪಾಸಿನ ರಸ್ತೆಗಳಲ್ಲಿ ವಾಹನ ನಿಲ್ಲಿಸುವುದನ್ನೂ ನಿಷೇಧಿಸಲಾಗಿದೆ. ಈ ಹಿಂದೆ 2006-07ರಲ್ಲಿ ಎಂ.ಜಿ. ರಸ್ತೆಯಲ್ಲಿ ಮೆಟ್ರೋ ಎತ್ತರಿಸಿದ ಮಾರ್ಗ ನಿರ್ಮಾಣಕ್ಕಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.