ವಿಡಿಯೋ ಮಾಡಿ ಆತ್ಮಹತ್ಯೆ : ಕೆ.ಆರ್.ಪೇಟೆ ರೈತನ ಮನೆಗೆ ಸಿಎಂ
ಕುಟುಂಬಸ್ಥರಿಗೆ ಪರಿಹಾರ ಧನ ವಿತರಣೆ
Team Udayavani, Jun 18, 2019, 12:24 PM IST
ಕೆ.ಆರ್.ಪೇಟೆ: ಸಾಲಬಾಧೆ ತಾಳಲಾರದೆ ಸೆಲ್ಪಿ ವಿಡಿಯೋ ಮಾಡಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್ ನಿವಾಸಕ್ಕೆಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ಅನ್ನು ಕುಟುಂಬಸ್ಥರಿಗೆ ನೀಡಿದರು.
ಬರಪೀಡಿತ ಸಂತೇಬಾಚಹಳ್ಳಿಹೋಬ ಳಿಯ ಕೆರೆಗಳಿಗೆ ನೀರು
ತುಂಬಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದ 50 ವರ್ಷದ ರೈತ ಸುರೇಶ್ ತಮ್ಮ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸುಮಾರು ಎರಡೂವರೆ ಎಕರೆ ಜಮೀನು ಮತ್ತು ತೋಟ ಹೊಂದಿದ್ದ ಸುರೇಶ್ ತೋಟದ ಅಭಿವೃದ್ಧಿಗಾಗಿ ಅಘಲಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪತ್ನಿ ಜಯಶೀಲ ಹೆಸರಿನಲ್ಲಿ ಸಾಲ ಪಡೆದಿದ್ದರು. ಅಲ್ಲದೆ ಬೇಸಾಯಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಲಕ್ಷಾಂತರ ರೂ. ಸಾಲ ಮಾಡಿದ್ದರೆನ್ನ ಲಾಗಿದೆ. ಮಳೆ ಇಲ್ಲದೆ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಗ್ರಾಮದ ಕೆರೆ ತುಂಬಿರಲಿಲ್ಲ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದರಿಂದ ತೋಟದಲ್ಲಿನ ತೆಂಗು, ಅಡಕೆ ಮರಗಳು ಒಣಗುತ್ತಿದ್ದವು. ಇದನ್ನು ನೋಡಲಾಗದೇ ತನ್ನಮೊಬೈಲ್ನಲ್ಲಿ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಾನು ಮುಖ್ಯಮಂತ್ರಿ ಕುಮಾರಸ್ವಾಮಿಯವರಕಟ್ಟಾಭಿಮಾನಿ. ನನ್ನ ಅಂತಿಮ ದರ್ಶನಕ್ಕೆ ನೀವು ಬರಬೇಕು ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಅಲ್ಲದೆ, ಹೋಬಳಿಯ ಅಭಿವೃದ್ಧಿಗಾಗಿ ಸಚಿವ ಪುಟ್ಟರಾಜು, ಶಾಸಕ ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಾನಕಿರಾಮ್ ಸೇರಿದಂತೆ ಎಲ್ಲರೂ ಪಕ್ಷಾತೀತವಾಗಿ ಶ್ರಮಿಸಿ ಹೋಬಳಿಯ ಎಲ್ಲಾ ಕೆರೆಗಳನ್ನು ತುಂಬಿಸುವಂತೆ ವಿಡಿಯೋದಲ್ಲಿ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ