ಉಚಿತ ಬಸ್ಪಾಸ್ಗೆ ಆಗ್ರಹ
Team Udayavani, Jun 19, 2019, 3:00 AM IST
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ 2018-19ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿರುವಂತೆ ಎಸ್ಸಿ, ಎಸ್ಟಿ ಹಾಗೂ ರಾಜ್ಯದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ಪಾಸ್ನ್ನು ಈ ಶೈಕ್ಷಣಿಕ ವರ್ಷದಿಂದಲೇ ವಿತರಿಸಬೇಕೆಂದು ಮಂಗಳವಾರ ಜಿಲ್ಲಾ ಕೇಂದ್ರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಮುಖ್ಯ ರಸ್ತೆಗಳಲ್ಲಿ ಬೃಹತ್ ಪ್ರತಿಭಟನಾ ನಡೆಸಿದ ಬಳಿಕ ಸ್ಥಳೀಯ ತಾಲೂಕು ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ಕಾಲೇಜು ವಿದ್ಯಾರ್ಥಿಗಳು, ಸರ್ಕಾರ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಸಮೀಪಿಸುತ್ತಿದ್ದರೂ ಉಚಿತ ಬಸ್ಪಾಸ್ ವಿತರಣೆಗೆ ಮುಂದಾಗದಿರುವುದನ್ನು ಖಂಡಿಸಿ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಾರಿಗೆ ಬಾರದ ಘೋಷಣೆ: ಶಿಕ್ಷಣವೆಂಬುದು ಸರ್ವರಿಗೂ ಸಿಗಬೆಕಾಗಿರುವ ಅಮೂಲ್ಯ ಸಂಪತ್ತು. ಜಾತಿ, ಮತ, ಬಡವ ಮತ್ತು ಶ್ರೀಮಂತ ಎನ್ನದೇ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ಆದರೆ 2018-19ನೇ ಸಾಲಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು.
ಆದರೆ ಇಂದಿಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಬಗ್ಗೆ ನಿರ್ಲಕ್ಷ ವಹಿಸಿರುವುದು ಎದ್ದು ಕಾಣುತ್ತಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರದ ಧೋರಣೆ ಖಂಡಿಸಿದರು.
ಎಲ್ಲಾ ವರ್ಗದವರಿಗೂ ನೀಡಲಿ: ಎಬಿವಿಪಿ ವಿಭಾಗೀಯ ಸಂಚಾಲಕ ಮಂಜುನಾಥ ರೆಡ್ಡಿ ಮಾತನಾಡಿ, ರಾಜ್ಯವು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಡೊನೇಷನ್ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಈ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್ ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿದರು.
ಬೇಡಿಕೆ ಮೂಲೆಗುಂಪು: ಹಳ್ಳಿಗಳಿಂದ ತಾಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ರಾಜ್ಯ ಸರ್ಕಾರ, ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ.
ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು. ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು.
ತಾಲೂಕು ಕಚೇರಿ ಎದುರು ಧರಣಿ: ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ವಿದ್ಯಾರ್ಥಿಗಳು ತಾಲೂಕು ಕಚೇರಿ ಎದುರು ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿ ಕೆ.ನರಸಿಂಹಮೂರ್ತಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಶಾಲಾ, ಕಾಲೇಜುಗಳ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸುವ ಮೂಲಕ ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು.
ಸರ್ಕಾರ ಶಾಲಾ, ಕಾಲೇಜುಗಳ ಆರಂಭವಾಗಿ ತಿಂಗಳು ಸಮೀಪಿಸುತ್ತಿದ್ದರೂ ಬಸ್ಪಾಸ್ ವಿತರಣೆಗೆ ಮುಂದಾಗಿಲ್ಲ. ಕಳೆದ ಬಜೆಟ್ನಲ್ಲಿ ಘೋಷಣೆ ಮಾಡಿರುವಂತೆ ಎಲ್ಲರಿಗೂ ಉಚಿತ ಬಸ್ಪಾಸ್ನ್ನು ಈ ವರ್ಷದಿಂದಲೇ ನೀಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
MUST WATCH
ಹೊಸ ಸೇರ್ಪಡೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು