“ರುಸ್ತುಂ’ ಮೇಲೆ ಬಿಟೌನ್ ಕಾತುರ

ಸಲ್ಲು, ಶಾರುಖ್‌, ಅಜಯ್‌ದೇವಗನ್‌ ಸಿನಿಮಾ ನೋಡ್ತಾರಂತೆ

Team Udayavani, Jun 19, 2019, 3:03 AM IST

rustom

ಬಾಲಿವುಡ್‌ನ‌ ಕೆಲ ಸ್ಟಾರ್‌ಗಳು ಈಗ ಕನ್ನಡ ಚಿತ್ರವೊಂದನ್ನು ನೋಡುವ ಕಾತುರದಲ್ಲಿದ್ದಾರೆ…! ಹೀಗೆಂದಾಕ್ಷಣ, ಅಚ್ಚರಿ ಸಹಜ. ಅಷ್ಟೇ ಅಲ್ಲ, ಕಣ್ಣ ಮುಂದೆ ಹಾಗೊಂದು ಪ್ರಶ್ನೆಯೂ ಹಾದುಹೋಗುತ್ತೆ. ಅಷ್ಟಕ್ಕೂ ಬಾಲಿವುಡ್‌ನ‌ ಯಾವ ಸ್ಟಾರ್‌ ನಟರು, ಕನ್ನಡದ ಯಾವ ಸಿನಿಮಾ ನೋಡಲು ಕಾಯುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ “ರುಸ್ತುಂ’.

ಹೌದು, ಶಿವರಾಜಕುಮಾರ್‌ ಅಭಿನಯದ ಈ ಚಿತ್ರವನ್ನು ನೋಡುವುದಾಗಿ ಹೇಳಿರುವ ನಟರು ಬೇರಾರೂ ಅಲ್ಲ, ಬಾಲಿವುಡ್‌ನ‌ ಸಲ್ಮಾನ್‌ಖಾನ್‌, ಶಾರುಖ್‌ಖಾನ್‌, ಅಜಯ್‌ದೇವಗನ್‌, ಪ್ರಭುದೇವ, ತೆಲುಗು ನಟ ನಾಗಾರ್ಜುನ ಕೂಡ “ರುಸ್ತುಂ’ ಚಿತ್ರ ನೋಡುವುದಾಗಿ ಹೇಳಿದ್ದಾರೆ. ಅದನ್ನು ಸ್ಪಷ್ಟಪಡಿಸಿದ್ದು “ರುಸ್ತುಂ’ ನಿರ್ದೇಶಕ ರವಿವರ್ಮ.

ಇದುವರೆಗೆ ಸ್ಟಂಟ್‌ ಮಾಸ್ಟರ್‌ ಆಗಿ ಗುರುತಿಸಿಕೊಂಡಿದ್ದ ರವಿವರ್ಮ ಅವರು “ರುಸ್ತುಂ’ ಮೂಲಕ ನಿರ್ದೇಶಕರಾಗಿದ್ದಾರೆ. ತಮ್ಮ ಚೊಚ್ಚಲ ಸಿನಿಮಾ ಆಗಿರುವುದರಿಂದ ಸಿನಿಮಾವನ್ನು ತುಂಬ ಕಮರ್ಷಿಯಲ್‌ ಆಗಿ, ಮಾಸ್‌ ಅಂಶಗಳೊಂದಿಗೆ ಮಾಡಿದ್ದಾರೆ. ಇಷ್ಟಕ್ಕೂ ಸಲ್ಲು, ಶಾರುಖ್‌, ಅಜಯ್‌ ದೇವಗನ್‌ ಇವರೆಲ್ಲರೂ ಸಿನಿಮಾ ನೋಡ್ತೀನಿ ಎಂದು ಹೇಳ್ಳೋಕೆ ಕಾರಣ, ನಿರ್ದೇಶಕ ರವಿವರ್ಮ.

ಯಾಕೆಂದರೆ, ರವಿವರ್ಮ ಈಗಾಗಲೇ ಬಾಲಿವುಡ್‌ನ‌ಲ್ಲಿ ಕೆಲಸ ಮಾಡಿ ಬಂದವರು. ಅಲ್ಲಿನ ಸ್ಟಾರ್‌ಗಳಿಗೆ ಆ್ಯಕ್ಷನ್‌ ಹೇಳಿಕೊಟ್ಟವರು. ಹಾಗಾಗಿ ಅವರೊಂದಿಗೆ ಒಳ್ಳೆಯ ಗೆಳೆತನವಿದೆ. ಮೊದಲ ನಿರ್ದೇಶನ ಚಿತ್ರ ಎಂಬ ಕಾರಣಕ್ಕೆ, ಅವರಿಗೆ ಸಿನಿಮಾ ತೋರಿಸುವ ಉತ್ಸಾಹ ರವಿವರ್ಮ ಅವರದು. ಅದಕ್ಕೆ ಆ ನಟರು ಕೂಡ ನೋಡುವ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಜೂನ್‌ 28 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಆ ನಂತರ ಈ ಎಲ್ಲಾ ನಟರು ಯಾವಾಗ ಫ್ರೀ ಇರುತ್ತಾರೆ ಎಂಬುದನ್ನು ನೋಡಿ, ಮುಂಬೈನಲ್ಲೇ “ರುಸ್ತುಂ’ ಚಿತ್ರ ತೋರಿಸುವ ಯೋಚನೆ ರವಿವರ್ಮ ಅವರದು. ಅಂದಹಾಗೆ, ಈ ಚಿತ್ರದಲ್ಲಿ ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಕೂಡ ನಟಿಸಿದ್ದಾರೆ.

ಇದೊಂದು ಪೊಲೀಸ್‌ ಸ್ಟೋರಿ ಚಿತ್ರವಾಗಿದ್ದು, ಪಕ್ಕಾ ರಗಡ್‌ ಆಗಿರುವ ಎಲಿಮೆಂಟ್ಸ್‌ ಇಲ್ಲಿವೆ. ಅದೇನೆ ಇರಲಿ, “ರುಸ್ತುಂ’ ಚಿತ್ರ ನೋಡೋಕೆ ಸಲ್ಲು, ಶಾರುಖ್‌, ಅಜಯ್‌ ದೇವಗನ್‌, ಪ್ರಭುದೇವ, ನಾಗಾರ್ಜುನ ಇತರರು ರೆಡಿಯಾಗಿದ್ದಾರೆ. ಇನ್ನು, ಸಿನಿಮಾ ತೋರಿಸೋಕೆ ಚಿತ್ರತಂಡ ತಯಾರಾಗಬೇಕಷ್ಟೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.