ಓಂ ಬಿರ್ಲಾ ಲೋಕ ಸ್ಪೀಕರ್‌

ಮೋದಿ-ಶಾರಿಂದ ಅಚ್ಚರಿಯ ಆಯ್ಕೆ

Team Udayavani, Jun 19, 2019, 6:00 AM IST

v-33

ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ರಾಜಸ್ಥಾನದ ಕೋಟಾ-ಬುಂಡಿ ಕ್ಷೇತ್ರದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಹೆಚ್ಚು ಕಡಿಮೆ 17ನೇ ಲೋಕಸಭೆಯ ಸ್ಪೀಕರ್‌ ಆಗುವುದು ಖಚಿತವಾಗಿದೆ.

ಬುಧವಾರ ನಡೆಯಲಿರುವ ಸ್ಪೀಕರ್‌ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಸಲು ಎನ್‌ಡಿಎ ನಿರ್ಧಾರ ಕೈಗೊಂಡಿದೆ. ವಿಪಕ್ಷಗಳೂ ಇವರ ಆಯ್ಕೆಗೆ ಸಹಮತ ವ್ಯಕ್ತಪಡಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗುವ ಸಂಭವವಿದೆ.

ಬಿರ್ಲಾ ಆಯ್ಕೆಯಲ್ಲೂ ಪ್ರಧಾನಿ ಮೋದಿ-ಅಮಿತ್‌ ಶಾ ಜೋಡಿ ‘ರಹಸ್ಯ’ ಕಾಯ್ದುಕೊಳ್ಳುವ ಮೂಲಕ, ಪ್ರಮುಖ ರಾಜಕೀಯ ನೇಮಕಗಳಲ್ಲಿ ಗೋಪ್ಯತೆ ಕಾಯ್ದುಕೊಳ್ಳುವ ತಮ್ಮ ಚಾಣಾಕ್ಷತೆಯನ್ನು ಮುಂದುವರಿಸಿದ್ದಾರೆ.

56 ವರ್ಷದ ಬಿರ್ಲಾ ಅವರು ಎರಡನೇ ಬಾರಿಗೆ ಸಂಸದರಾಗಿದ್ದರೂ, ಇತರೆ ಎಲ್ಲ ಹಿರಿಯ ದಿಗ್ಗಜರನ್ನು ಬಿಟ್ಟು ಇವರನ್ನೇ ಬಿಜೆಪಿ ಆಯ್ಕೆ ಮಾಡಿಕೊಂಡಿರುವ ಹಿಂದೆ ಹಲವು ಕಾರಣಗಳೂ ಇವೆ ಎಂದು ವಿಶ್ಲೇಷಿಸಲಾಗಿದೆ. ಓಂ ಬಿರ್ಲಾ ಅವರು ರಾಜಸ್ಥಾನ ಅಸೆಂಬ್ಲಿಯಲ್ಲಿ 3 ಅವಧಿಗೆ ಸದಸ್ಯರಾಗಿದ್ದವರು. ಅಲ್ಲದೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ರಾಜ ಸ್ಥಾನ ಸರ್ಕಾರದಲ್ಲಿ ಸಂಸದೀಯ ಕಾರ್ಯ ದರ್ಶಿಯಾಗಿಯೂ ಅವರು ಕಾರ್ಯ ನಿರ್ವ ಹಿಸಿದ್ದಾರೆ. ಪ್ರಧಾನಿ ಮೋದಿ ಅವರು ಗುಜ ರಾತ್‌ನಲ್ಲಿ ಅಧಿಕಾರಕ್ಕೇರುವ ಮುಂಚೆಯೇ ಮೋದಿ ಹಾಗೂ ಅಮಿತ್‌ ಶಾ ಅವರೊಂದಿಗೆ ಬಿರ್ಲಾ ಕುಟುಂಬ ಒಡನಾಟ ಹೊಂದಿತ್ತು.

ಅಮಿತ್‌ ಶಾ ಆಪ್ತ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿ ರುವ ಬಿರ್ಲಾ, ಬಿಜೆಪಿಯ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾ ಗಿಯೂ ಸೇವೆ ಸಲ್ಲಿಸಿ ದ್ದಾರೆ. ಅಲ್ಲದೆ, ದಿವ್ಯಾಂಗರು ಹಾಗೂ ಅಸ ಹಾಯಕ ಮಹಿಳೆಯರಿಗೆ ನೆರವಾಗುವ ಮೂಲಕ ಸಾಮಾಜಿಕ ಕಾರ್ಯಕರ್ತರಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. 2001ರ ಜನವರಿಯಲ್ಲಿ ಗುಜರಾತ್‌ನಲ್ಲಿ ಭೂಕಂಪ ಸಂಭವಿಸಿದಾಗ, 100ಕ್ಕೂ ಹೆಚ್ಚು ಸ್ವಯಂ ಸೇವಾ ಸಿಬ್ಬಂದಿಯ ತಂಡವನ್ನು ಕಟ್ಟಿ, ಸಂತ್ರಸ್ತರ ನೆರವಿಗೆ ಧಾವಿಸಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕ್ಕಾಗಿ ನಡೆದ ಹೋರಾಟದ ವೇಳೆ ಸಕ್ರಿಯವಾಗಿ ಪಾಲ್ಗೊಂಡು, ಜೈಲು ವಾಸವನ್ನೂ ಅನುಭವಿಸಿ ದ್ದಾರೆ ಬಿರ್ಲಾ. ಬಿಜೆಪಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರೊಂದಿಗೂ ಬಿರ್ಲಾ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅಲ್ಲದೆ, ಬಿರ್ಲಾ ಅವರ ಬಲಿಷ್ಠ ಬೂತ್‌ ನಿರ್ವಹಣೆ ಸಾಮರ್ಥ್ಯ, ಕ್ಷೇತ್ರದ ಮೇಲೆ ಹೇಗೆ ಹಿಡಿತ ಸಾಧಿಸಬೇಕು ಎಂಬ ಕೌಶಲ್ಯ ಕೂಡ ಅವರನ್ನು ಈ ಉನ್ನತ ಹುದ್ದೆಗೇರಿಸಿದೆ ಎಂದು ಹೇಳಲಾಗಿದೆ.

ಪಕ್ಷದೊಳಗಿನವರಿಗೂ ಗೊತ್ತಿರಲಿಲ್ಲ: ಬಿರ್ಲಾ ಅವರ ಆಯ್ಕೆ ಕುರಿತು ಮೋದಿ-ಅಮಿತ್‌ ಶಾ ಸೀಕ್ರೆಸಿ ಕಾಯ್ದುಕೊಂಡಿದ್ದರು. ಈ ವಿಚಾರ ಕೊನೇ ಕ್ಷಣದವರೆಗೂ ಪಕ್ಷದೊಳಗಿನ ಅನೇಕ ನಾಯಕರಿಗೆ ಗೊತ್ತೇ ಇರಲಿಲ್ಲ ಎಂದು ಹೇಳಲಾಗಿದೆ. ಈ ಹಿಂದೆ ರಾಷ್ಟ್ರಪತಿ ನೇಮಕದ ವೇಳೆಯೂ ರಾಮನಾಥ್‌ ಕೋವಿಂದ್‌ ಅವರ ಹೆಸರನ್ನು ಎನ್‌ಡಿಎ ಘೋಷಿಸುತ್ತಿದ್ದಂತೆ, ಎಲ್ಲರಲ್ಲೂ ಅಚ್ಚರಿ ಮನೆ ಮಾಡಿತ್ತು. ರಾಷ್ಟ್ರಪತಿ ಹುದ್ದೆಗೆ ಹಲವರ ಹೆಸರುಗಳನ್ನು ಕೇಳಿಬಂದಿತ್ತಾದರೂ, ಎನ್‌ಡಿಎ ಆಯ್ಕೆ ಯಾರು ಎಂಬುದು ಗೊತ್ತಾಗಿದ್ದು ಹೆಸರು ಘೋಷಣೆಯಾದ ಬಳಿಕವೇ. ಇದಿಷ್ಟೇ ಅಲ್ಲ, ಮಹಾರಾಷ್ಟ್ರದಲ್ಲಿ ಮರಾಠೇತರ ಸಿಎಂ, ಹರ್ಯಾ ಣದಲ್ಲಿ ಜಾಟ್ ಸಮುದಾಯದವರಲ್ಲದ ನಾಯಕ, ಉತ್ತರಪ್ರದೇಶದಲ್ಲಿ ಫೈರ್‌ ಬ್ರಾಂಡ್‌ ಯೋಗಿ ಆದಿತ್ಯನಾಥ್‌ರನ್ನು ಮುಖ್ಯಮಂತ್ರಿ ಯನ್ನಾಗಿ ಆಯ್ಕೆ ಮಾಡಿದ್ದನ್ನು ಕೂಡ ಮೋದಿ-ಶಾ ಮಾಸ್ಟರ್‌ಸ್ಟ್ರೋಕ್‌ ಎಂದು ಬಣ್ಣಿಸಲಾಗಿತ್ತು.

ಪ್ರತಿಪಕ್ಷಗಳ ಬೆಂಬಲ: ಲೋಕಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಹೊಂದಿರುವುದರಿಂದ ಓಂ ಬಿರ್ಲಾ ಗೆಲುವು ಖಚಿತ. ಜತೆಗೆ ಬಿರ್ಲಾ ಅವರ ಆಯ್ಕೆಗೆ ಕಾಂಗ್ರೆಸ್‌ ಸೇರಿದಂತೆ ಬಹುತೇಕ ಎಲ್ಲ ಪ್ರತಿಪಕ್ಷಗಳೂ ಒಪ್ಪಿಗೆ ನೀಡಿವೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.