ಕುವೈಟ್‌: ಜಿಪಿಪತ್ರ, ವಿಮಾನ ಟಿಕೇಟು ಹಾಜರು ಪಡಿಸಲು ಸಂತ್ರಸ್ತರಿಗೆ ಸೂಚನೆ


Team Udayavani, Jun 19, 2019, 5:07 AM IST

kuwait

ಮಂಗಳೂರು: ಉದ್ಯೋಗಕ್ಕಾಗಿ ಕುವೈಟ್‌ಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ ಮಂಗಳೂರಿನ 33 ಮಂದಿ ಸೇರಿದಂತೆ ಒಟ್ಟು 72 ಮಂದಿಯಲ್ಲಿ 41 ಮಂದಿಗೆ ಸ್ವದೇಶಕ್ಕೆ ಮರಳುವ ಕುರಿತು ಜಿಪಿ (ಸರಕಾರಿ ಯೋಜನೆ) ಪತ್ರ ಹಾಗೂ ವಿಮಾನ ಟಿಕೇಟ್‌ನ್ನು 7 ದಿನಗಳೊಳಗೆ ಹಾಜರು ಪಡಿಸಿ ಸ್ವದೇಶಕ್ಕೆ ಮರಳಲು ಕ್ರಮ ಕೈಗೊಳ್ಳುವಂತೆ ಅವರು ಕಾರ್ಯನಿರ್ವಹಿಸುತ್ತಿರುವ ಕಂಪೆನಿ ಸೂಚಿಸಿದೆ.

ಸೋಮವಾರ ಶೋನ್‌ನಲ್ಲಿ (ಕಾರ್ಮಿಕ ಪರವಾದ ನ್ಯಾಯಾಲಯ ವ್ಯವಸ್ಥೆ)ಗೆ ಭಾರತೀಯ ದೂತಾವಾಸದ ಅಧಿಕಾರಿಗಳು, ಕಂಪೆನಿಯ ಪ್ರತಿನಿಧಿಗಳ ಒಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಟಿಕೇಟು ಖರೀದಿಸಲು ಸುಮಾರು 25,000 ರೂ. ಅಗತ್ಯವಿದ್ದು ಇದನ್ನು ಹೊಂದಿಸಿಕೊಳ್ಳುವ ನಿಟ್ಟಿನಲ್ಲಿ ನೌಕರರು ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಸಂಕಷ್ಟದಲ್ಲಿರುವ ಉದ್ಯೋಗಿಗಳು ಸರಕಾರಿ ಯೋಜನೆಯಲ್ಲಿ (ಜಿಪಿ) ಉದ್ಯೋಗ ಮಾಡುವ ವೀಸಾದಲ್ಲಿ ತೆರಳಿದ್ದರು. ಸರಕಾರದ ಪರವಾದ ಕೆಲಸಕ್ಕೆ ಎಂದು ಕರೆದುಕೊಂಡು ಬಂದು ಬೇರೆ ಖಾಸಗಿ ಕಂಪೆನಿ ಕೆಲಸಕ್ಕೆ ನಿಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವೀಸಾ ರದ್ದಾಗಿ ಪಾಸ್‌ಪೋರ್ಟ್‌ ಲಭಿಸಬೇಕಾದರೆ ಜಿಪಿ ಲೆಟರನ್ನು ಕಡ್ಡಾಯವಾಗಿ ಶೋನ್‌ಗೆ ಸಲ್ಲಿಸಬೇಕಾಗಿದೆ. ಆದರೆ ಜಿಪಿ ಲೆಟರ್‌ ನೀಡುವುದು ಯಾರು ಎಂಬುದು ಪ್ರಶ್ನೆಯಾಗಿದೆ.

ಜಿಪಿ ಪತ್ರ ಹಾಗೂ ಸ್ವದೇಶಕ್ಕೆ ತೆರಳಲು ಖರೀದಿಸಿದ ವಿಮಾನ ಟಿಕೇಟ್‌ನ್ನು ತಂದೊಪ್ಪಿಸಿದರೆ ಶೋನ್‌ ನವರು ವೀಸಾ ರದ್ದುಪಡಿಸಿ ಪಾಸ್‌ಪೋರ್ಟ್‌ನ್ನು ಭಾರತೀಯ ದೂತವಾಸ ಕಚೇರಿಗೆ ನೀಡುತ್ತಾರೆ. ಅಲ್ಲಿಂದ ನೌಕರರಿಗೆ ನೀಡಲಾಗುವುದು. ಆದರೆ ಅರ್ಥಿಕ ಸಂಕಷ್ಟದಲ್ಲಿರುವ ನೌಕರರಿಗೆ ವಿಮಾನ ಟಿಕೇಟು ಖರೀದಿಸುವುದೇ ಸಮಸ್ಯೆಯಾಗಿದೆ. ಇದೇ ವೇಳೆ ಸಂತ್ರಸ್ತರಿಂದ ರಾಜೀನಾಮೆ ಪಡೆಯುವ ಮೂಲಕ ನಮಗೇನೂ ಸಂಬಂಧ ಇಲ್ಲ ಎಂದು ತೋರ್ಪಡಿಸಲು ರಾಜೀನಾಮೆ ಪತ್ರ ಸಿದ್ಧಪಡಿಸಿ, ಸಹಿ ಹಾಕುವಂತೆ ಕಂಪನಿ ಒತ್ತಡ ಹೇರುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.