ನಾನೊಬ್ಬನೆ ಪಾಕ್ಗೆ ತೆರಳಲಾರೆ:ಸರ್ಫರಾಜ್ಗೆ ಢವ..ಢವ
Team Udayavani, Jun 19, 2019, 10:19 AM IST
ಮ್ಯಾಂಚೆಸ್ಟರ್: ಮುಂದಿನ ಪಂದ್ಯಗಳಲ್ಲಿ ಎಚ್ಚೆತ್ತುಕೊಂಡು ಆಡದಿದ್ದರೆ ತವರಿನ ಅಭಿಮಾನಿಗಳನ್ನು ಎದುರಿಸುವುದು ಕಷ್ಟವಾಗಲಿದೆ. ನಾನೊಬ್ಬನೇ ಪಾಕಿಸ್ಥಾನಕ್ಕೆ ತೆರಳಲಾರೆ ಎಂದು ಪಾಕಿಸ್ಥಾನ ತಂಡದ ನಾಯಕ ಸರ್ಫರಾಜ್ ಅಹ್ಮದ್ ತಿಳಿಸಿದ್ದಾರೆ.
ಭಾರತ ವಿರುದ್ಧದ ಪಂದ್ಯ ಸೋತ ಬಳಿಕ ಪಾಕಿಸ್ಥಾನ ಕ್ರಿಕೆಟ್ ಅಭಿಮಾನಿಗಳು ಸರ್ಫರಾಜ್ ಪಡೆ ವಿರುದ್ಧ ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಮಾತನಾಡಿರುವ ಸರ್ಫರಾಜ್, “ಒಂದು ವೇಳೆ ಪರಿಸ್ಥಿತಿ ಇನ್ನೂ ಕೆಟ್ಟದಾಗಿ ಮುಂದುವರಿದರೆ ನಾನೊಬ್ಬನೇ ತವರಿಗೆ ತೆರಳುತ್ತೇನೆ ಅಂದುಕೊಳ್ಳುವುದು ದೊಡ್ಡ ಹೆಡ್ಡತನವಾಗುತ್ತದೆ. ಭಾರತದ ವಿರುದ್ಧದ ಸೋಲನ್ನು ಮರೆಯಿರಿ. ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದರತ್ತ ಗಮನ ಕೊಡಿ’ ಎಂದು ತಮ್ಮ ತಂಡದ ಆಟಗಾರರಿಗೆ ಕರೆ ನೀಡಿದ್ದಾರೆ.
ಸದ್ಯ ಪಾಕ್ 5 ಪಂದ್ಯ ಆಡಿದ್ದು 3 ಅಂಕಗಳಿಸಲಷ್ಟೇ ಸಾಧ್ಯವಾಗಿದೆ. ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮಾಜಿ ಪಾಕ್ ಕ್ರಿಕೆಟಿಗರಿಂದ ಸರ್ಫರಾಜ್ ಮಿದುಳಿಲ್ಲದ ನಾಯಕ ಎನ್ನುವ ಟೀಕೆಯೂ ಕೇಳಿ ಬಂದಿದೆ. ಕಾಫಿ ಡೇನಲ್ಲಿ ಭಾರತ ವಿರುದ್ಧದ ಪಂದ್ಯಕ್ಕೂ ಮೊದಲು ಪಾರ್ಟಿ ನಡೆಸಿದ್ದಾರೆ ಎನ್ನುವ ಆರೋಪ ಪಾಕ್ ವಿರುದ್ಧದ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ