ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಿ
ಮಕ್ಕಳಲ್ಲಿ ಪ್ಲಾಸ್ಟಿಕ್ ದುಷ್ಪರಿಣಾಮದ ಅರಿವು ಮೂಡಿಸಿ: ವಿನೋತ್ ಪ್ರಿಯಾ
Team Udayavani, Jun 19, 2019, 11:35 AM IST
ಚಿತ್ರದುರ್ಗ: ಬಹುಮಾನ ವಿತರಣಾ ಸಮಾರಂಭವನ್ನು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಉದ್ಘಾಟಿಸಿದರು.
ಚಿತ್ರದುರ್ಗ: ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪರಿಸರ ಹಾಳು ಮಾಡುವ ಪ್ಲಾಸ್ಟಿಕ್ ಮುಂತಾದ ತ್ಯಾಜ್ಯ ವಸ್ತುಗಳ ಬಳಕೆ ಮಾಡದಂತೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಿ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಬೇಕು ಎಂದು ಜಿಲ್ಲಾಕಾರಿ ವಿನೋತ್ ಪ್ರಿಯಾ ಕರೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಲಾಚೈತನ್ಯ ಸೇವಾ ಸಂಸ್ಥೆ ಹಾಗೂ ಬೇದ್ರೆ ಆರ್ಟ್ಸ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ-2019ರ ಅಂಗವಾಗಿ ಮಂಗಳವಾರ ಅಂತರ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಏಕೆಂದರೆ ಶಿಕ್ಷಕರ ಹೇಳಿಕೆಗಳನ್ನು ಮಕ್ಕಳು ಗಂಭೀರವಾಗಿ ಪರಿಗಣಿಸುತ್ತಾರೆ ಹಾಗೂ ಅದರಂತೆ ನಡೆದುಕೊಳ್ಳುತ್ತಾರೆ. ಪೋಷಕರು ಸಹ ಮಕ್ಕಳಿಗೆ ಪ್ಲಾಸ್ಟಿಕ್ ದುಷ್ಪರಿಣಾಮದ ಮನವರಿಕೆ ಮಾಡಿಕೊಡಬೇಕಿದೆ. ಮಕ್ಕಳು ಪ್ಲಾಸ್ಟಿಕ್ಬಳಕೆ ತ್ಯಜಿಸಿದಲ್ಲಿ ಪರಿಸರ ಉಳಿಸುವ ಕಾರ್ಯಕ್ಕೆ ಹೆಚ್ಚಿನ ಸಹಕಾರ ದೊರೆಯಲಿದೆ ಎಂದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ. ವಟವಟಿ ಮಾತನಾಡಿ, ಪೋಷಕರು ಹಾಗೂ ಶಿಕ್ಷಕರು, ಮಕ್ಕಳನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋಗುತ್ತಾರೆ. ಅಲ್ಲಿನ ಸಂಪದ್ಭರಿತ ಗಿಡ, ಮರಗಳು, ಪ್ರಾಣಿ, ಪಕ್ಷಿಗಳನ್ನು ನೋಡಿ ಮನಸ್ಸು ಉಲ್ಲಾಸಗೊಳ್ಳುತ್ತದೆ. ಅಂಥದ್ದೇ ವಾತಾವರಣವನ್ನು ನಮ್ಮ ಸುತ್ತ ಮುತ್ತ ಕೂಡ ನಿರ್ಮಿಸಿಕೊಳ್ಳಲು ಸಾಧ್ಯವಿದೆ. ಪರಿಸರವನ್ನು ಹಸಿರೀಕರಣದಿಂದ ಕಂಗೊಳಿಸುವಂತೆ ಮಾಡಿದಲ್ಲಿ ಆಹ್ಲಾದಕರ ವಾತಾವರಣವನ್ನು ಹುಡುಕಿಕೊಂಡು ಬೇರೆಡೆ ಹೋಗುವ ಅವಶ್ಯಕತೆಯೇ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಿರಿಯ ಪರಿಸರ ಅಧಿಕಾರಿ ಸಿ.ಡಿ. ಕುಮಾರ್, ಪರಿಸರ ತಜ್ಞ ಡಾ| ಎಚ್.ಕೆ.ಎಸ್. ಸ್ವಾಮಿ, ಚಿತ್ರ ಕಲಾವಿದ ನಾಗರಾಜ ಬೇದ್ರೆ, ವಿಜ್ಞಾನ ಕಾಲೇಜು ಉಪನ್ಯಾಸಕ ಪ್ರೊ| ಕೆ.ಕೆ. ಕಾಮಾನಿ ಭಾಗವಹಿಸಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಕಿಶನ್, ಆಕಾಶ್, ಶ್ರಾವಣಿ, ಹೇಮಂತ್ ನಾಯ್ಕ, ರಂಗೇಗೌಡ ಅವರಿಗೆ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ