ಹೊರಗುತ್ತಿಗೆ ಸಿಬ್ಬಂದಿ ಪ್ರತಿಭಟನೆ

•7 ತಿಂಗಳಿಂದ ವೇತನವಿಲ್ಲ-ಎರಡು ತಿಂಗಳಿಂದ ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶ

Team Udayavani, Jun 19, 2019, 3:45 PM IST

uk-tdy-3..

ಹಳಿಯಾಳ: ಅನ್ಯಾಯಕ್ಕೊಳಗಾದ ಮಹಿಳಾ ಸಿಬ್ಬಂದಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಹಳಿಯಾಳ: 7 ತಿಂಗಳಿಂದ ವೇತನ ನೀಡದೆ ಸತಾಯಿಸಿದ್ದು ಅಲ್ಲದೇ ಕಳೆದ 2 ತಿಂಗಳಿಂದ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ತಾಲೂಕು ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕೆಲಸದಿಂದ ವಂಚಿತರಾದ 9 ಮಹಿಳಾ ಸಿಬ್ಬಂದಿ ತಮ್ಮ ಕುಟುಂಬದವರೊಡನೆ ತಾಲೂಕು ಆಸ್ಪತ್ರೆ ಎದುರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ವೈದ್ಯಾಧಿಕಾರಿ ಡಾ| ರಮೇಶ ಕದಂ ಹಾಗೂ ಸಿಪಿಐ ಲೋಕಾಪುರ ಮನವೊಲಿಸಲು ಯತ್ನಿಸಿದಾಗ ಕೇಳದ ಪ್ರತಿಭಟನಾಕಾರರು ತಹಶೀಲ್ದಾರ್‌ ಸ್ಥಳಕ್ಕಾಗಮಿಸಬೇಕೆಂದು ಪಟ್ಟು ಹಿಡಿದರು.

ಹಳಿಯಾಳದ ಮಾತೆ ಸಾವಿತ್ರಿಬಾಯಿ ಪುಲೆ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷೆ ಶಾಂತಾ ಅನಂತಸೇನ ಕುಲಕರ್ಣಿ, ಸಿಐಟಿಯು ಜಿಲ್ಲಾ ಪ್ರಮುಖ ಹರೀಶ ನಾಯ್ಕ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ ಸಂಘಟನೆ ಅಧ್ಯಕ್ಷೆ ಮಂಗಲಾ ಕಶೀಲಕರ, ದಲಿತ ಸಂಘಟನೆಯ ಭರಮೋಜಿ ವಡ್ಡರ, ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ಅಧ್ಯಕ್ಷ ವಿಬಿ ರಾಮಚಂದ್ರ, ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಸೇರಿದಂತೆ ಮೊದಲಾದವರಿಗೆ ಮನವಿ ಸಲ್ಲಿಸಿದ್ದು ಮಂಗಳವಾರ ನಡೆದ ಪ್ರತಿಭಟನೆಗೆ ಈ ಎಲ್ಲ ಸಂಘಟನೆಗಳವರು ಬೆಂಬಲ ವ್ಯಕ್ತಪಡಿಸಿದ್ದು ಅನ್ಯಾಯಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿದ್ದಾರೆ.

ನಂತರ ಪತ್ರಿಕಾ ಹೇಳಿಕೆ ನೀಡಿರುವ ಪ್ರತಿಭಟನಾಕಾರರು ಕಳೆದ 10-15 ವರ್ಷಗಳಿಂದ ತಾಲೂಕು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೆ ತಾಲೂಕು ಆಸ್ಪತ್ರೆ ಗುತ್ತಿಗೆದಾರರಾದ ಚೆನ್ನಬಸಪ್ಪಾ ಗುಳನ್ನವರ ಮತ್ತು ದಿಲೀಪ ನಾಯ್ಕ ತಮಗೆ 7 ತಿಂಗಳ ಸಂಬಳ ನೀಡಿಲ್ಲ ಮಾತ್ರವಲ್ಲದೇ ಕೆಲಸದಿಂದಲೇ ತೆಗೆದು ಹಾಕಿದ್ದಾರೆ. ತಮಗೆ ಪ್ರತಿ ತಿಂಗಳಿಗೆ 5285/- ವೇತನ ನೀಡುತ್ತಿದ್ದರು. ಇದರಲ್ಲಿ 7 ಜನರಿಗೆ ಪ್ರತಿಯೊಬ್ಬರಿಂದ 785 ರೂ. ಮತ್ತು 5 ಜನರಿಗೆ ಪ್ರತಿಯೊಬ್ಬರಿಂದ 1285/- ಸಂಬಳದ ಪಾಲು ಕೇಳುತ್ತಿದ್ದರು ಎಂದು ಆರೋಪಿಸಿರುವ ಅವರು, ಇದನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಸಂಬಳವನ್ನು ತಡೆಹಿಡಿದು ಕೆಲಸದಿಂದ ಕಿತ್ತು ಹಾಕಿದ್ದಾರೆಂದು ಆರೋಪಿಸಿದರು. ಅಲ್ಲದೇ ತಮಗೆ ಪಿಎಫ್‌ ಮಾಡದೆ ಇರುವುದರ ಬಗ್ಗೆ ನಾವು ಕಾರ್ಮಿಕರ ನ್ಯಾಯಾಲಯಕ್ಕೆ ಪ್ರಕರಣ ದಾಖಲಿಸಿದ್ದನ್ನು ಈ ಗುತ್ತಿಗೆದಾರರು ಖಂಡಿಸಿ ತಮಗೆ ಸಾಕಷ್ಟು ಸಮಸ್ಯೆ ಮಾಡಿದ್ದಾರೆ ಎಂದು ತಮ್ಮ ಅಳಲನ್ನು ತೊಡಿಕೊಂಡರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ವಿದ್ಯಾಧರ ಗುಳಗುಳಿ, ಪ್ರತಿಭಟನಾಕಾರರ ಅಳಲನ್ನು ಆಲಿಸಿ ಜೂ.21 ರಂದು ಹಳಿಯಾಳದಲ್ಲಿ ಈ ಕುರಿತು ಸಭೆ ನಡೆಸಿ ಡಿಎಚ್ಒ ಸಮಕ್ಷಮದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ನಯೋಮಿ ಮಾದರ, ಶಕುಂತಲಾ ಕಲ್ಲವಡ್ಡರ, ಶಾಂತವ್ವಾ ವಡ್ಡರ, ಲಕ್ಷ್ಮೀ ಪೂಜಾರಿ, ರಾಧಾ ಮಾದರ, ಮಾದೇವಿ ವಡ್ಡರ, ಮುಬಾರಕ ಅರ್ಲವಾಡ, ನಾಗವ್ವಾ ವಡ್ಡರ ಹಾಗೂ ಲಕ್ಷ್ಮೀ ವಡ್ಡರ ಸೇರಿದಂತೆ ಅವರ ಕುಟುಂಬದವರು ಇದ್ದರು.

ಟಾಪ್ ನ್ಯೂಸ್

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.