ತಮಿಳುನಾಡಿನಲ್ಲಿ ನೀರಿಗಾಗಿ ಹಾಹಾಕಾರ; ರಾಜಕೀಯ ಬೇಡ ಎಂದ ಸರ್ಕಾರ
ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
Team Udayavani, Jun 19, 2019, 4:11 PM IST
ಚೆನ್ನೈ : ತಮಿಳುನಾಡಿನ ಹಲವು ಭಾಗಗಳಲ್ಲಿ ಭೀಕರ ಬರಗಾಲ ಕಾಣಿಸಿಕೊಂಡಿದ್ದು ನೀರಿಗಾಗಿ ಹಾಹಾಕಾರ ಉಂಟಾಗಿದೆ. ಅತ್ಯಂತ ಕೆಟ್ಟ ಸ್ಥಿತಿಯನ್ನುರಾಜ್ಯ ಎದುರಿಸುತ್ತಿದೆ. ಚೆನ್ನೈ ನಗರದಲ್ಲಿ ಟ್ಯಾಂಕರ್ಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು ಟೋಕನ್ಗಳನ್ನು ನೀಡಿ ವಿತರಿಸಲಾಗುತ್ತಿದೆ.
ರಾಜ್ಯದಲ್ಲಿ ಭೀಕರ ಜಲಕ್ಷಾಮ ಎದುರಾಗಿದ್ದು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರದತ್ತ ಚಾಟಿ ಬೀಸಿದೆ.
ಇನ್ನೊಂದೆಡೆ ಎಐಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷ ಡಿಎಂಕೆ ಪ್ರತಿಭಟನೆ ನಡೆಸುತ್ತಿದೆ.
ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಮಳೆಯ ಅಭಾವದ ನಡುವೆಯೂ ನಮ್ಮಿಂದ ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಂಡು ಜನರಿಗೆ ನೀರು ವಿತರಿಸುತ್ತಿದ್ದೇವೆ. ರಾಜಕೀಯ ಮಾಡುವುದು ತಪ್ಪಾಗುತ್ತದೆ ಎಂದು ಸಚಿವ ಡಿ.ಜಯಕುಮಾರ್ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಚೆನ್ನೈನಲ್ಲಿ ಐಟಿ ಕಂಪೆನಿಗಳಿಗೆ ನೀರಿಲ್ಲದ ಕಾರಣಕ್ಕಾಗಿ ರಜೆ ಸಾರಲಾಗಿದ್ದು, ಹಲವು ಕಂಪೆನಿಗಳು ಮನೆಯಿಂದಲೆ ಕೆಲಸಮಾಡುವಂತೆ ಉದ್ಯೋಗಿಗಳಿಗೆ ಸಲಹೆ ನೀಡಿದೆ.
ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ , ನೀರು ಸರಬರಾಜು ಮಾಡುಲು ಬೇಕಾಗಿರುವ ಎಲ್ಲಾ ಅಗತ್ಯ ಕ್ರಮಗಳನ್ನುನಾವು ಕೈಗೊಂಡಿದ್ದೇವೆ ಎಂದಿದ್ದಾರೆ. ಮಾಧ್ಯಮಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಅಕ್ಟೋಬರ್ನಲ್ಲಿ ಈಶಾನ್ಯ ಮಾನ್ಸೂನ್ ಬರುವವರೆಗೆ ನಾವು ಭೂಜಲವನ್ನೆ ಅವಲಂಬಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ