ಕಾಲಕ್ಕೆ ತಕ್ಕಂತೆ ಬದಲಾದ ಭಾರತದ ಕ್ರಿಕೆಟ್‌ ಜೆರ್ಸಿ


Team Udayavani, Jun 20, 2019, 6:00 AM IST

jersy

ಕ್ರಿಕೆಟ್‌ನಲ್ಲಿ ಮೊದಲ ಸಲ ಬಣ್ಣದ ಜೆರ್ಸಿ ಆರಂಭವಾಗಿದ್ದು 1985ರ ನಂತರ. ಆಗ ಭಾರತ ತಂಡದ ಜೆರ್ಸಿ ಮೇಲೆ ಪ್ರಾಯೋಜಕರ ಹೆಸರು ಕೂಡ ಇರಲಿಲ್ಲ. ಇದಕ್ಕೂ ಮೊದಲು ಎಲ್ಲ ತಂಡದ ಆಟಗಾರರಿಗೆ ಇದ್ದದ್ದು ಬಿಳಿ ಬಣ್ಣದ ಶರ್ಟ್‌, ಪ್ಯಾಂಟ್‌. ಬಣ್ಣದ ಬಟ್ಟೆ. ಕ್ರೀಡಾಂಗಣದಲ್ಲಿ ಯಾವ ದೇಶದ ಆಟಗಾರ ಎನ್ನುವುದನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವ ಕಾರಣಕ್ಕೆ ಬಣ್ಣದ ಬಟ್ಟೆ ಪರಿಚಯಿಸಲಾಯಿತು.

1992ರಲ್ಲಿ ಕಡು ನೀಲಿ ಜೆರ್ಸಿ
1992ರಲ್ಲಿ ಭಾರತ ಮೊದಲ ಸಲ ಬಣ್ಣದ ಜೆರ್ಸಿಯನ್ನು ವಿಶ್ವಕಪ್‌ನಲ್ಲಿ ಹಾಕಿ ಕಣಕ್ಕೆ ಇಳಿಯಿತು. ಮೊಹಮ್ಮದ್‌ ಅಜರುದ್ದಿನ್‌ ಕಡು ನೀಲಿ ಬಣ್ಣದ ಜೆರ್ಸಿ ತೊಟ್ಟ ಭಾರತ ತಂಡದ ನಾಯಕರಾಗಿದ್ದರು. ಹಸಿರು, ಕೆಂಪು ಹಾಗೂ ಬಿಳಿ ಬಣ್ಣದ ಸ್ಟಿಚ್‌ ಅನ್ನು ಭುಜದ ಸಮೀಪ ಕಾಣಬಹುದಾಗಿತ್ತು. ಜೆರ್ಸಿ ಮುಂಭಾಗದಲ್ಲಿ ದೇಶದ ಹೆಸರು. ಹಿಂಬದಿಯಲ್ಲಿ ಆಟಗಾರನ ಹೆಸರು ಇತ್ತು.

1993 ನೀಲಿ ಶರ್ಟ್‌ಗೆ ಕೊಕ್‌
ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಕಡು ನೀಲಿ ಬಣ್ಣದ ಜೆರ್ಸಿ ತೊಟ್ಟಿದ್ದ ಭಾರತ 1993ರಷ್ಟರಲ್ಲಿ ಹಠಾತ್‌ ಆಗಿ ಹಳದಿ ಬಣ್ಣದ ಶರ್ಟ್‌ ಧರಿಸಲು ಆರಂಭಿಸಿತು. ನೀಲಿ ಬಣ್ಣದ ಪ್ಯಾಂಟ್‌ನಲ್ಲೂ ಸ್ವಲ್ಪ ಬದಲಾವಣೆ ಮಾಡಿಕೊಂಡಿತ್ತು.

1996 ಬಣ್ಣ ಬದಲು, ಪಟ್ಟಿ ಒಂದೇ
1996ರ ವಿಶ್ವಕಪ್‌ ಸಮಯದಲ್ಲಿ ಎಲ್ಲ ತಂಡಗಳ ಜೆರ್ಸಿ ಬಣ್ಣ ವಿವಿಧತೆಯಿಂದ ಕೂಡಿತ್ತು. ಆದರೆ ಮುಂಭಾಗ ಹಾಗೂ ಹಿಂಭಾಗದಲ್ಲಿ ಎಲ್ಲರಿಗೂ ಒಂದೇ ರೀತಿಯ ಪಟ್ಟಿಯನ್ನು ವಿನ್ಯಾಸಗೊಳಿಸಲಾಗಿತ್ತು. ನೋಡಲು ಅತ್ಯಾಕರ್ಷಕವಾಗಿತ್ತು. ಭಾರತ ಈ ಕೂಟದಲ್ಲಿ ತಿಳಿ ನೀಲಿ ಮತ್ತು ಹಳದಿ ಬಣ್ಣದ ಮಿಶ್ರಣ ಹೊಂದಿತ್ತು.

1999ರಲ್ಲಿ ವಿನೂತನ ಪ್ರಯೋಗ
ತಿಳಿ ನೀಲಿ ಮತ್ತು ಹಳದಿ ಜೆರ್ಸಿಯಲ್ಲಿ ಭಾರತೀಯ ಆಟಗಾರರು ವಿಶ್ವಕಪ್‌ ಕೂಟದಲ್ಲಿ ಕಂಗೊಳಿಸಿದರು. ಜೆರ್ಸಿಯ ಮುಂಭಾಗದಲ್ಲಿ ಓರೆಯಾಗಿ “ಆರ್‌’ ಆಕೃತಿಯಲ್ಲಿ ಹಳದಿ ಬಣ್ಣ ಕಾಣಬಹುದಾಗಿದೆ. ಇದು ಅಷ್ಟೂ ಜೆರ್ಸಿಗಳ ಪೈಕಿ ವಿನೂತನ ಪ್ರಯೋಗ ಎಂದರೆ ತಪ್ಪಾಗಲಾರದು.

ಪೇಯಿಂಟ್‌ ಜೆರ್ಸಿ!
ಆಗ ನಾಟ್‌ ವೆಸ್ಟ್‌ ಸರಣಿ ಸಮಯ 2002, ಭಾರತ ತಂಡ ಇಂಗ್ಲೆಂಡ್‌ ಸೋಲಿಸಿ ಇತಿಹಾಸ ನಿರ್ಮಿಸಿತ್ತು. ಆ ಸಮಯದಲ್ಲಿ ಭಾರತ ಜೆರ್ಸಿಯ ಮುಂಭಾಗದಲ್ಲಿ ಬ್ರಶ್‌ನಲ್ಲಿ ಬಣ್ಣದ ರಾಷ್ಟ್ರಧ್ವಜವನ್ನು ಚಿತ್ರಿಸಿದ ರೀತಿಯಲ್ಲಿ ಕಲರ್‌ಫ‌ುಲ್‌ ಆಗಿ ನೀಡಲಾಗಿತ್ತು. ಇದು ಹೊಸ ಟ್ರೆಂಡ್‌ ಸೃಷ್ಟಿಸಿತ್ತು.

2003ರ ವಿಶ್ವಕಪ್‌ಗೆ ಕಡು ನೀಲಿ ಟಚ್‌
2003ರ ವಿಶ್ವಕಪ್‌ ವೇಳೆ ಜೆರ್ಸಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿತ್ತು. ತಿಳಿ ನೀಲಿ ಬದಲಾಗಿ ಸ್ವಲ್ಪ ನೀಲಿ ಬಣ್ಣ ಹೆಚ್ಚಿಸಲಾಗಿತ್ತು. ಜತೆಗೆ ಜೆರ್ಸಿ ಅಂದವಾಗಿ ಕಾಣಿಸಲು ಕಪ್ಪು ಬಣ್ಣದ ಪ್ಯಾಚ್‌ ಅಪ್‌ ಮಾಡಲಾಗಿತ್ತು. ಅದರ ಜತೆಗೆ ಮುಂಭಾಗದಲ್ಲಿ ಭಾರತದ ರಾಷ್ಟ್ರಧ್ವಜದ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣವನ್ನು ಚೆಂದವಾಗಿ ವಿನ್ಯಾಸ ಮಾಡಲಾಗಿತ್ತು. ಮುಂಭಾಗದಲ್ಲಿ ಭಾರತ ಎಂದು ಬರೆಯಲಾಗಿತ್ತು.

2007 ವಿಶ್ವಕಪ್‌ನಲ್ಲಿ ಹೊಸತನ
2007ರ ವಿಶ್ವಕಪ್‌ ಕೂಟದಲ್ಲೂ ಭಾರತ ತಂಡದ ಜೆರ್ಸಿ ಬದಲಾಗಿತ್ತು. ನೀಲಿ ಬಣ್ಣದಲ್ಲಿ ಜೆರ್ಸಿ ಇದ್ದರೂ ಹೊಸದಾಗಿ ಮುಂಭಾಗದಲ್ಲಿ ಪ್ರಾಯೋಜಕರ ಹೆಸರು ಹಾಕಲಾಗಿತ್ತು. ಬದಿಯಲ್ಲೇ ಟೀಮ್‌ ಇಂಡಿಯಾದ ಹೆಸರನ್ನು ವಿನ್ಯಾಸಗೊಳಿಸಲಾಗಿತ್ತು.

ಪ್ರಾಯೋಜಕರಿಗೆ ಕೊಕ್‌
2011ರ ವಿಶ್ವಕಪ್‌ನಲ್ಲಿ ಧೋನಿ ನೇತೃತ್ವದ ಭಾರತ ತಂಡ ಚಾಂಪಿಯನ್‌ ಆಗಿತ್ತು. ಈ ವೇಳೆಯೂ ನಮ್ಮ ಆಟಗಾರರು ಬದಲಾದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಜೆರ್ಸಿ ಮುಂಭಾಗದಲ್ಲಿ ಆಕ್ರಮಿಸಿಕೊಂಡಿದ್ದ ಟೀಮ್‌ ಇಂಡಿಯಾ ಪ್ರಾಯೋಜಕರಾಗಿದ್ದ ಸಹರಾ ಹೆಸರನ್ನು ತೆಗೆಯಲಾಗಿತ್ತು, ತೆಳುವಾದ ಪಟ್ಟಿ ಮೂಲಕ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣವನ್ನು ಚಿತ್ರಿಸಲಾಗಿತ್ತು.

ವಿಶ್ವಕಪ್‌ ಬಳಿಕ ಮತ್ತೂಮ್ಮೆ ಬದಲು
2011ರಲ್ಲಿ ವಿಶ್ವಕಪ್‌ ಯಶಸ್ವಿಯಾಗಿ ಗೆದ್ದಿದ್ದ ಭಾರತ ಒಂದೇ ವರ್ಷದಲ್ಲಿ ಜೆರ್ಸಿ ಬದಲಾಯಿಸಿಕೊಂಡಿತು, ಹೊಸತನಕ್ಕೆ ಒಗ್ಗಿಕೊಂಡಿತು. ಸಹಾರಾ ಮತ್ತೂಮ್ಮೆ ಫ್ರಾಂಚೈಸಿಯಾಗಿ ಭಾರತ ಕ್ರಿಕೆಟ್‌ ತಂಡದ ಜೆರ್ಸಿಯ ಮುಂಭಾಗದಲ್ಲಿ ರಾರಾಜಿಸಿತು.

2015ರ ವಿಶ್ವಕಪ್‌ ಕ್ರಿಕೆಟ್‌ ಕೂಟವನ್ನು ಗಮನದಲ್ಲಿರಿ ಸಿಕೊಂಡು ಹೊಸ ಪ್ರಯೋಗ ನಡೆಸಲಾಯಿತು. ಸಂಪೂರ್ಣ ಜೆರ್ಸಿಯ ವಿನ್ಯಾಸ ಬದಲಾಯಿಸಲಾಯಿತು. ಪ್ರಾಯೋಜಕರ ಹೆಸರು, ಭಾರತದ ಹೆಸರು, ಬಿಸಿಸಿಐ ಚಿಹ್ನೆ ಜೆರ್ಸಿ ಮುಂಭಾಗದಲ್ಲಿ ಕಾಣಿಸಿಕೊಂಡಿತು.
ಈ ಬಾರಿ ಭಾರತ ಐಸಿಸಿ ಸೂಚನೆ ಮೇರೆಗೆ 2 ನಮೂನೆಯ ಜೆರ್ಸಿಯನ್ನು ಧರಿಸಲಿದೆ.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.