‘ಆಟೋ ರಿಕ್ಷಾದಲ್ಲಿ ದಾಖಲೆಗಳು ಕಡ್ಡಾಯ ‘

•ಮೀಟರ್‌ ಅಳವಡಿಕೆಗೆ ಆದ್ಯತೆ ನೀಡಿ•ಆಟೋ ಚಾಲಕರು ಮಾದರಿ ಸೇವಾ ಚಾಲಕರಾಗಲಿ

Team Udayavani, Jun 20, 2019, 9:36 AM IST

hubali-tdy-6..

ಹುಬ್ಬಳ್ಳಿ: ಹುಬ್ಬಳ್ಳಿ ಆಟೋ ರೀಕ್ಷಾ ಮಾಲಿಕರು ಹಾಗೂ ಚಾಲಕರ ಸಂಘದಿಂದ ನಡೆದ ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತ ಅಪ್ಪಯ್ಯ ನಾಲತ್ತವಾಡಮಠ ಮಾತನಾಡಿದರು.

ಹುಬ್ಬಳ್ಳಿ: ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ಹುಬ್ಬಳ್ಳಿ ಆಟೋ ಚಾಲಕರು ಮಾದರಿ ಆಟೋ ಚಾಲಕರಾಗಬೇಕು ಎಂದು ಪ್ರಾದೇಶಿಕ ಸಾರಿಗೆ ಹಿರಿಯ ಅಧಿಕಾರಿ ಅಪ್ಪಯ್ಯ ನಾಲತ್ತವಾಡಮಠ ಹೇಳಿದರು.

ಗೋಕುಲ ರಸ್ತೆ ಸುರಭಿ ನಗರದ ಸಮುದಾಯ ಭವನದಲ್ಲಿ ಬುಧವಾರ ಹುಬ್ಬಳ್ಳಿ ಆಟೋರಿಕ್ಷಾ ಮಾಲಿಕರು ಹಾಗೂ ಚಾಲಕರ ಸಂಘದಿಂದ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಹು-ಧಾ ಮಹಾನಗರದಲ್ಲಿ ಆಟೋರಿಕ್ಷಾಗಳಿಗೆ ಮೀಟರ್‌ ಕಡ್ಡಾಯಗೊಳಿಸಲಾಗಿದೆ. ಮೀಟರ್‌ ಅಳವಡಿಕೆಗೆ ಸಂಘದಿಂದ ಹಲವಾರು ಬೇಡಿಕೆಗಳನ್ನಿಟ್ಟಿದ್ದು, ಅವುಗಳನ್ನು ಈಡೇರಿಸಲಾಗಿದೆ ಎಂದರು.

ಶೇರಿಂಗ್‌ ಆಟೋ ಬಂದ್‌ ಮಾಡಿ. ಬದಲಾಗಿ ಮೀಟರ್‌ ಹಾಕದೇ ಇದ್ದರೇ ಸಂಚಾರ ಇಲ್ಲ ಎಂದು ಸಾರ್ವಜನಿಕರಿಗೆ ತಿಳಿಯುವಂತೆ ಸೇವೆ ಸಲ್ಲಿಸಿ. ಆಟೋ ರಿಕ್ಷಾ ಚಾಲನೆ ಒಂದು ಉತ್ತಮ ಸೇವೆ ಆಗಿದೆ. ಯಾರೇ ನಗರಕ್ಕೆ ಬಂದರು ಅವರಿಗೆ ಮೊದಲ ಭೇಟಿ ನಿಮ್ಮದೇ, ಆದ್ದರಿಂದ ಸಾರ್ವಜನಿಕರೊಂದಿಗೆ ಉತ್ತಮವಾಗಿ ಸ್ಪಂದನೆ ಅವಶ್ಯ. ಪ್ರತಿಯೊಬ್ಬ ಆಟೋರಿಕ್ಷಾ ಚಾಲಕರು ಕಡ್ಡಾಯವಾಗಿ ವಾಹನದ ಎಲ್ಲ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಸಮವಸ್ತ್ರದಿಂದ ಹಿಡಿದು ಎಲ್ಲವೂ ಸರಿಯಾಗಿರಬೇಕು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಪರವಾನಗಿ ಇಲ್ಲದ ಆಟೋ ರಿಕ್ಷಾಗಳನ್ನು ಇಲಾಖೆಯಿಂದ ಈಗಾಗಲೇ ಸೀಜ್‌ ಮಾಡಲಾಗುತ್ತಿದೆ ಎಂದರು.

ಸ್ಕೂಲ್ ಕ್ಯಾಬ್‌ ಸಿಸ್ಟಮ್‌ಗೆ ಒಳಪಡಿಸಿ: ಶಾಲೆಗೆ ಓಡಿಸುವ ವಾಹನಗಳನ್ನು ಆಯಾ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಆಟೋ ಸ್ಕೂಲ್ ಕ್ಯಾಬ್‌ ಮಾಡಿಕೊಳ್ಳಿ. ಇದಕ್ಕಾಗಿ ಇಲಾಖೆಯಿಂದ ವ್ಯವಸ್ಥೆ ಕಲ್ಪಿಸಬಹುದು ಎಂದರು. ಇದು ಸುಪ್ರೀಂ ಕೋರ್ಟ್‌ ಆದೇಶವನ್ನು ಎಲ್ಲರೂ ಪಾಲನೆ ಮಾಡೋಣ ಎಂದು ಅಪ್ಪಯ್ಯ ನಾಲತ್ತವಾಡಮಠ ಹೇಳಿದರು.

ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮಾತನಾಡಿ, ಈ ಹಿಂದೆ ನಗರದಲ್ಲಿ ರಸ್ತೆಗಳು ಸರಿ ಇರಲಿಲ್ಲ. ಆದರೆ ಈಗಾಗಲೇ ಶೇ.50ರಷ್ಟು ರಸ್ತೆಗಳು ಸುಧಾರಣೆ ಕಂಡಿದ್ದು, ಇನ್ನುಳಿದ ರಸ್ತೆಗಳು ಕಾಮಗಾರಿ ಪ್ರಗತಿಯಲ್ಲಿವೆ. ಅದಕ್ಕೆ ತಕ್ಕಂತೆ ನಾವು ಕೂಡಾ ಇಂದಿನ ದಿನಕ್ಕೆ ಹೊಂದಿಕೊಳ್ಳುವ ಮೂಲಕ ಮೀಟರ್‌ ಕಡ್ಡಾಯ ಸೇರಿದಂತೆ ಕಾನೂನು ಪಾಲನೆ ಮಾಡೋಣ ಎಂದರು.

ಕಾರ್ಯದರ್ಶಿ ಚಿದಾನಂದ ಸವದತ್ತಿ, ಸುರಭಿ ನಗರದ ನಿವಾಸಿಗಳ ಸಂಘದ ಅಧ್ಯಕ್ಷ ಎಸ್‌.ಎಂ. ಹಿರೇಮಠ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಲವು ಆಟೋರಿಕ್ಷಾ ಚಾಲಕರು ಮತ್ತು ಮಾಲಿಕರು ತಮ್ಮಲ್ಲಿರುವ ಸಂದೇಹಗಳಿಗೆ ಪರಿಹಾರ ಕಂಡುಕೊಂಡರು.

ಆರ್‌ಟಿಒ ಅರುಣ ಕಟ್ಟಿಮನಿ, ಬಸವರಾಜ ಉಣಕಲ್ಲ ಸೇರಿದಂತೆ ಇನ್ನಿತರರು ಇದ್ದರು. ಪುಂಡಲೀಕ ಬಡಿಗೇರ ನಿರೂಪಿಸಿದರು.

ಆಟೋ ರಿಕ್ಷಾಗಳಲ್ಲಿ ಆರು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಕರೆದ್ಯೊಯುವಂತಿಲ್ಲ. ಈಗಾಗಲೇ ಹಲವು ಕಡೆ ಆಟೋ ರಿಕ್ಷಾಗಳಲ್ಲಿ, ಓಮಿನಿ ಸೇರಿದಂತೆ ಇನ್ನಿತರರ ವಾಹನಗಳಲ್ಲಿ ಮಕ್ಕಳನ್ನು ಕುರಿ ತುಂಬಿದಂತೆ ತುಂಬಲಾಗುತ್ತದೆ. ಇದು ತಪ್ಪು. ಇಂತಹ ಘಟನೆಗಳು ಕಂಡು ಬಂದಲ್ಲಿ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.
• ಅಪ್ಪಯ್ಯ ನಾಲವತ್ತವಾಡಮಠ, ಪ್ರಾದೇಶಿಕ ಸಾರಿಗೆ ಆಯುಕ್ತ

ಟಾಪ್ ನ್ಯೂಸ್

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಫ‌ಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್‌

Lok Sabha Election: ಫ‌ಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್‌

Hubli; ಸರ್ಕಾರ ಕೂಡಲೇ ನಾಗೇಂದ್ರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ

Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

police crime

Hubballi; ನೇಹಾ ಮತ್ತು ಅಂಜಲಿ ಮಾದರಿಯಲ್ಲೇ …: ಶಿಕ್ಷಕಿಗೆ ಬೆದರಿಕೆ ಪತ್ರ

joshi

Hubli; ಇದು ದಪ್ಪ ಚರ್ಮದ ಸರ್ಕಾರ; ಕೂಡಲೇ ನಾಗೇಂದ್ರ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Sandalwood: Mandela ready for shooting

Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.